ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ, ಗುಜರಾತ್ ಕರಾವಳಿಗೆ ಚಂಡಮಾರುತ ಸಾಧ್ಯತೆ: ಗೃಹ ಸಚಿವ ಅಮಿತ್‌ ಶಾ ಸಭೆ

Last Updated 3 ಜೂನ್ 2020, 10:07 IST
ಅಕ್ಷರ ಗಾತ್ರ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತವು ಬುಧವಾರದ ವೇಳೆಗೆ ಮಹಾರಾಷ್ಟ್ರ ಹಾಗೂ ಗುಜರಾತ್‌ಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಈ ರಾಜ್ಯಗಳಲ್ಲಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಸೋಮವಾರ ಸಭೆ ನಡೆಸಿದರು.

‘ಮಹಾರಾಷ್ಟ್ರ, ಗುಜರಾತ್‌, ದಮನ್‌ ಹಾಗೂ ದಿಯು, ದಾದ್ರ ಹಾಗೂ ನಗರ್‌ ಹವೇಲಿಗೆ ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್‌) ತಲಾ 45 ಸಿಬ್ಬಂದಿಗಳಿರುವ 23 ತಂಡಗಳನ್ನು ಗೃಹ ಸಚಿವಾಲಯ ನಿಯೋಜಿಸಿದೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಎನ್‌ಡಿಆರ್‌ಎಫ್‌, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ), ಭಾರತೀಯ ಹವಾಮಾನ ಇಲಾಖೆಯ(ಐಎಂಡಿ) ಹಿರಿಯ ಅಧಿಕಾರಿಗಳ ಜೊತೆ ಅಮಿತ್‌ ಶಾ ಅವರು ಸಭೆ ನಡೆಸಿದ್ದಾರೆ’ ಎಂದು ಗೃಹ ಸಚಿವರ ಕಚೇರಿ ಟ್ವೀಟ್‌ ಮಾಡಿದೆ.

ಗಂಟೆಗೆ 105–110 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತವು ಅಪ್ಪಳಿಸುವ ಸಾಧ್ಯತೆ ಇದ್ದು, ದಕ್ಷಿಣ ಗುಜರಾತ್‌ ಹಾಗೂ ಮಹಾರಾಷ್ಟ್ರದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT