<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಒಂದೇ ದಿನ ಒಟ್ಟು 7,340 ಜನರಿಗೆ ಕೋವಿಡ್–19 ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸಾಂಕ್ರಾಮಿಕದ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸರ್ಕಾರದೊಂದಿಗೆ ಸಭೆ ನಡೆಸಲಿದ್ದಾರೆ.</p>.<p>ಸಭೆಯು ಗೃಹ ಸಚಿವರ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ದೆಹಲಿ ಲೆಫ್ಟಿನೆಂಟ್ ಗೌವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಭಾಗವಹಿಸಲಿದ್ದಾರೆ. ದೆಹಲಿಯ ಏಮ್ಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಾಗುವ ನಿರೀಕ್ಷೆಯಿದೆ.</p>.<p>ದೆಹಲಿಯಲ್ಲಿ ಬುಧವಾರ 85 ಸಾವು ಹಾಗೂ 8,593 ಸೋಂಕು ಪ್ರಕರಣಗಳು ವರದಿಯಾಗಿದ್ದವು. ಮರುದಿನ (ಗುರುವಾರ) 104 ಸೋಂಕಿತರು ಮೃತಪಟ್ಟಿದ್ದರು. ಇದು ಕಳೆದ ಐದು ತಿಂಗಳಲ್ಲೇ ಗರಿಷ್ಠ ಸಂಖ್ಯೆಯಾಗಿದೆ.</p>.<p>ರಾಜಧಾನಿಯಲ್ಲಿ ಇದುವರೆಗೆ ಒಟ್ಟು 4,82,170 ಸೋಂಕು ಪ್ರಕರಣಗಳು ವರದಿಯಾಗಿವೆ. ಶನಿವಾರ 96 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 7,519ಕ್ಕೆ ಏರಿಕೆಯಾಗಿದೆ. ಸದ್ಯ 4,30,195 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 44,456 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ಒಂದೇ ದಿನ ಒಟ್ಟು 7,340 ಜನರಿಗೆ ಕೋವಿಡ್–19 ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಸಾಂಕ್ರಾಮಿಕದ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸರ್ಕಾರದೊಂದಿಗೆ ಸಭೆ ನಡೆಸಲಿದ್ದಾರೆ.</p>.<p>ಸಭೆಯು ಗೃಹ ಸಚಿವರ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ನಡೆಯಲಿದೆ. ದೆಹಲಿ ಲೆಫ್ಟಿನೆಂಟ್ ಗೌವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಭಾಗವಹಿಸಲಿದ್ದಾರೆ. ದೆಹಲಿಯ ಏಮ್ಸ್ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಾಗುವ ನಿರೀಕ್ಷೆಯಿದೆ.</p>.<p>ದೆಹಲಿಯಲ್ಲಿ ಬುಧವಾರ 85 ಸಾವು ಹಾಗೂ 8,593 ಸೋಂಕು ಪ್ರಕರಣಗಳು ವರದಿಯಾಗಿದ್ದವು. ಮರುದಿನ (ಗುರುವಾರ) 104 ಸೋಂಕಿತರು ಮೃತಪಟ್ಟಿದ್ದರು. ಇದು ಕಳೆದ ಐದು ತಿಂಗಳಲ್ಲೇ ಗರಿಷ್ಠ ಸಂಖ್ಯೆಯಾಗಿದೆ.</p>.<p>ರಾಜಧಾನಿಯಲ್ಲಿ ಇದುವರೆಗೆ ಒಟ್ಟು 4,82,170 ಸೋಂಕು ಪ್ರಕರಣಗಳು ವರದಿಯಾಗಿವೆ. ಶನಿವಾರ 96 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 7,519ಕ್ಕೆ ಏರಿಕೆಯಾಗಿದೆ. ಸದ್ಯ 4,30,195 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 44,456 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>