<p><strong>ಇಂದೋರ್(ಮಧ್ಯಪ್ರದೇಶ):</strong> ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ಮತ್ತು ಆಕೆಯ ಪೋಷಕರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹತ್ಯೆಯಾದ ರಾಜ ರಘುವಂಶಿ ಅವರ ಹಿರಿಯ ಸಹೋದರ ವಿಪಿನ್ ರಘುವಂಶಿ ಒತ್ತಾಯಿಸಿದ್ದಾರೆ.</p><p>ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ರಾಜ ರಘುವಂಶಿ ಮತ್ತು ಸೋನಮ್, ಮೇ 20ರಂದು ಮೇಘಾಲಯಕ್ಕೆ ಹನಿಮೂನ್ಗೆ ಹೋಗಿದ್ದರು. ಅಲ್ಲಿ ರಘುವಂಶಿ ಅವರ ಹತ್ಯೆ ನಡೆದಿದ್ದು, ಹತ್ಯೆಗೆ ಸಂಚು ನಡೆಸಿದ ಆರೋಪದ ಮೇಲೆ ಸೋನಮ್ ಬಂಧನವಾಗಿದೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ವಿಪಿನ್, ‘ಆರೋಪಿ ಸೋನಮ್, ಆಕೆಯ ಪೋಷಕರು, ಸಹೋದರ ಗೋವಿಂದ ಮತ್ತು ಆತನ ಪತ್ನಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊಗಳು ಒಂದರ ಹಿಂದೆ ಒಂದು ಹರಿದಾಡುತ್ತಿವೆ. ಈ ವಿಡಿಯೊಗಳನ್ನು ಬಿಡುಗಡೆ ಮಾಡುತ್ತಿರುವವರನ್ನು ಪ್ರಶ್ನಿಸಬೇಕು’ ಎಂದು ಆಗ್ರಹಿಸಿದ್ದಾರೆ.</p><p>‘ನನ್ನ ಸಹೋದರನ ಹತ್ಯೆಯಲ್ಲಿ ಹಲವು ಜನರು ಭಾಗಿಯಾಗಿರುವುದರ ಬಗ್ಗೆ ನಮ್ಮ ಕುಟುಂಬಕ್ಕೆ ಅನುಮಾನವಿದೆ’ ಎಂದೂ ಹೇಳಿದ್ದಾರೆ.</p><p>ಏತನ್ಮಧ್ಯೆ, ರಾಜ ರಘುವಂಶಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸೋನಮ್ ಸಹೋದರ ಗೋವಿಂದ ಅವರು ಭಾಗಿಯಾಗಿದ್ದರು. ಆದರೆ, ಗೋವಿಂದ ಅವರಿಗೆ ಆಹ್ವಾನ ನೀಡಿರಲಿಲ್ಲ ಎಂದು ರಘುವಂಶಿ ಕುಟುಂಬ ತಿಳಿಸಿದೆ.</p><p>‘ಗೋವಿಂದ ಅವರನ್ನು ನಾನು ಮಾತನಾಡಿಸಿಲ್ಲ. ಸಹಾನುಭೂತಿ ತೋರಿಸಲು ಅವರು ಇಲ್ಲಿಗೆ ಬಂದಿರಬಹುದು. ಆದರೆ, ನಾವು ಅವರನ್ನು ಆಹ್ವಾನಿಸಲಿಲ್ಲ’ ಎಂದು ಮತ್ತೊಬ್ಬ ಸಹೋದರ ಸಚಿನ್ ರಘುವಂಶಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್(ಮಧ್ಯಪ್ರದೇಶ):</strong> ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸೋನಮ್ ಮತ್ತು ಆಕೆಯ ಪೋಷಕರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹತ್ಯೆಯಾದ ರಾಜ ರಘುವಂಶಿ ಅವರ ಹಿರಿಯ ಸಹೋದರ ವಿಪಿನ್ ರಘುವಂಶಿ ಒತ್ತಾಯಿಸಿದ್ದಾರೆ.</p><p>ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ರಾಜ ರಘುವಂಶಿ ಮತ್ತು ಸೋನಮ್, ಮೇ 20ರಂದು ಮೇಘಾಲಯಕ್ಕೆ ಹನಿಮೂನ್ಗೆ ಹೋಗಿದ್ದರು. ಅಲ್ಲಿ ರಘುವಂಶಿ ಅವರ ಹತ್ಯೆ ನಡೆದಿದ್ದು, ಹತ್ಯೆಗೆ ಸಂಚು ನಡೆಸಿದ ಆರೋಪದ ಮೇಲೆ ಸೋನಮ್ ಬಂಧನವಾಗಿದೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ವಿಪಿನ್, ‘ಆರೋಪಿ ಸೋನಮ್, ಆಕೆಯ ಪೋಷಕರು, ಸಹೋದರ ಗೋವಿಂದ ಮತ್ತು ಆತನ ಪತ್ನಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊಗಳು ಒಂದರ ಹಿಂದೆ ಒಂದು ಹರಿದಾಡುತ್ತಿವೆ. ಈ ವಿಡಿಯೊಗಳನ್ನು ಬಿಡುಗಡೆ ಮಾಡುತ್ತಿರುವವರನ್ನು ಪ್ರಶ್ನಿಸಬೇಕು’ ಎಂದು ಆಗ್ರಹಿಸಿದ್ದಾರೆ.</p><p>‘ನನ್ನ ಸಹೋದರನ ಹತ್ಯೆಯಲ್ಲಿ ಹಲವು ಜನರು ಭಾಗಿಯಾಗಿರುವುದರ ಬಗ್ಗೆ ನಮ್ಮ ಕುಟುಂಬಕ್ಕೆ ಅನುಮಾನವಿದೆ’ ಎಂದೂ ಹೇಳಿದ್ದಾರೆ.</p><p>ಏತನ್ಮಧ್ಯೆ, ರಾಜ ರಘುವಂಶಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಸೋನಮ್ ಸಹೋದರ ಗೋವಿಂದ ಅವರು ಭಾಗಿಯಾಗಿದ್ದರು. ಆದರೆ, ಗೋವಿಂದ ಅವರಿಗೆ ಆಹ್ವಾನ ನೀಡಿರಲಿಲ್ಲ ಎಂದು ರಘುವಂಶಿ ಕುಟುಂಬ ತಿಳಿಸಿದೆ.</p><p>‘ಗೋವಿಂದ ಅವರನ್ನು ನಾನು ಮಾತನಾಡಿಸಿಲ್ಲ. ಸಹಾನುಭೂತಿ ತೋರಿಸಲು ಅವರು ಇಲ್ಲಿಗೆ ಬಂದಿರಬಹುದು. ಆದರೆ, ನಾವು ಅವರನ್ನು ಆಹ್ವಾನಿಸಲಿಲ್ಲ’ ಎಂದು ಮತ್ತೊಬ್ಬ ಸಹೋದರ ಸಚಿನ್ ರಘುವಂಶಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>