<p><strong>ನವದೆಹಲಿ</strong>: ಲೋಕಸಭೆಯ ಸ್ಪೀಕರ್ ಆಗಿ ಸತತ ಎರಡನೇ ಅವಧಿಗೆ ಆಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಅಭಿನಂದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ಪರ ಧ್ವನಿ ಎತ್ತಲು ವಿರೋಧ ಪಕ್ಷಗಳಿಗೆ ಅವಕಾಶ ಸಿಗಲಿದೆ ಎಂದು ನಿರೀಕ್ಷಿಸುವುದಾಗಿ ಬುಧವಾರ ಹೇಳಿದ್ದಾರೆ.</p><p>ಲೋಕಸಭೆಯಲ್ಲಿ ವಿರೋಧ ಪಕ್ಷ ನಾಯಕರೂ ಆಗಿರುವ ರಾಹುಲ್, ಲೋಕಸಭೆ ಕಲಾಪಗಳು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಆಶಿಸಿದ್ದಾರೆ.</p><p>ಬಿರ್ಲಾ ಅವರನ್ನು ಉದ್ದೇಶಿಸಿ ಮಾತನಾಡಿರುವ ರಾಹುಲ್, 'ಸ್ಪೀಕರ್ ಚುನಾವಣೆಯಲ್ಲಿ ಯಶಸ್ಸು ಸಾಧಿಸಿರುವುದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ಇಡೀ ಇಂಡಿಯಾ ಮೈತ್ರಿಕೂಟದ ಪರವಾಗಿ ನಿಮಗೆ ಶುಭ ಕೋರುತ್ತೇನೆ' ಎಂದಿದ್ದಾರೆ.</p><p>'ಈ ಸದನವು ದೇಶದನ್ನು ಪ್ರತಿನಿಧಿಸುತ್ತದೆ. ಸರ್ಕಾರವು ರಾಜಕೀಯ ಶಕ್ತಿಯನ್ನು ಖಂಡಿತವಾಗಿಯೂ ಹೊಂದಿದೆ. ಆದರೆ, ವಿರೋಧ ಪಕ್ಷಗಳು ಸಹ ಜನರ ಧ್ವನಿಯನ್ನು ಪ್ರತಿನಿಧಿಸುತ್ತವೆ. ವಿರೋಧ ಪಕ್ಷಗಳು ನಿಮ್ಮ ಕೆಲಸಗಳಿಗೆ ನೆರವಾಗಲು ಬಯಸುತ್ತವೆ. ಸದನದಲ್ಲಿ ಮಾತನಾಡಲು ಅವಕಾಶ ಮಾಡಿಕೊಡುತ್ತೀರಿ ಎಂಬ ವಿಶ್ವಾಸದಲ್ಲಿದ್ದೇನೆ' ಎಂದು ಪುನರುಚ್ಚರಿಸಿದ್ದಾರೆ.</p><p>ವಿರೋಧ ಪಕ್ಷಗಳು ಕಳೆದ ಬಾರಿಗಿಂತ ಹೆಚ್ಚು ಭಾರತೀಯರನ್ನು ಈ ಬಾರಿ ಪ್ರತಿನಿಧಿಸಲಿವೆ. ಹಾಗಾಗಿ, ಇಂಡಿಯಾ ಬಣದ ಸಂಸದರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ.</p><p>'ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಿ ಸದನವನ್ನು ಪರಿಣಾಮಕಾರಿಯಾಗಿ ನಡೆಸಬಹುದು ಎಂಬುದು ಪ್ರಜಾಸತ್ತಾತ್ಮಕ ನಡೆಯಲ್ಲ. ವಿರೋಧ ಪಕ್ಷಗಳು ದೇಶದ ಸಂವಿಧಾನವನ್ನು ರಕ್ಷಿಸಬೇಕು ಎಂಬುದಾಗಿ ಜನರು ಬಯಸುತ್ತಿರುವುದನ್ನು ಈ ಬಾರಿಯ ಲೋಕಸಭೆ ಚುನಾವಣೆ ತೋರಿಸಿಕೊಟ್ಟಿದೆ. ವಿರೋಧ ಪಕ್ಷದವರಿಗೆ ಮಾತನಾಡಲು ಅವಕಾಶ ಕಲ್ಪಿಸುವ ಮೂಲಕ ನೀವು ಸಂವಿಧಾನ ರಕ್ಷಿಸುವ ಕೆಲಸ ಮಾಡಲಿದ್ದೀರಿ ಎಂಬ ವಿಶ್ವಾಸವಿದೆ' ಎಂದೂ ಹೇಳಿದ್ದಾರೆ.</p>.18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ .ತುರ್ತು ಪರಿಸ್ಥಿತಿ ಹೇರಿಕೆಯನ್ನು ಸ್ಪೀಕರ್ ಖಂಡಿಸಿದ್ದಕ್ಕೆ ಸಂತೋಷವಾಯಿತು: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಲೋಕಸಭೆಯ ಸ್ಪೀಕರ್ ಆಗಿ ಸತತ ಎರಡನೇ ಅವಧಿಗೆ ಆಯ್ಕೆಯಾಗಿರುವ ಓಂ ಬಿರ್ಲಾ ಅವರನ್ನು ಅಭಿನಂದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ಪರ ಧ್ವನಿ ಎತ್ತಲು ವಿರೋಧ ಪಕ್ಷಗಳಿಗೆ ಅವಕಾಶ ಸಿಗಲಿದೆ ಎಂದು ನಿರೀಕ್ಷಿಸುವುದಾಗಿ ಬುಧವಾರ ಹೇಳಿದ್ದಾರೆ.</p><p>ಲೋಕಸಭೆಯಲ್ಲಿ ವಿರೋಧ ಪಕ್ಷ ನಾಯಕರೂ ಆಗಿರುವ ರಾಹುಲ್, ಲೋಕಸಭೆ ಕಲಾಪಗಳು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಆಶಿಸಿದ್ದಾರೆ.</p><p>ಬಿರ್ಲಾ ಅವರನ್ನು ಉದ್ದೇಶಿಸಿ ಮಾತನಾಡಿರುವ ರಾಹುಲ್, 'ಸ್ಪೀಕರ್ ಚುನಾವಣೆಯಲ್ಲಿ ಯಶಸ್ಸು ಸಾಧಿಸಿರುವುದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ಇಡೀ ಇಂಡಿಯಾ ಮೈತ್ರಿಕೂಟದ ಪರವಾಗಿ ನಿಮಗೆ ಶುಭ ಕೋರುತ್ತೇನೆ' ಎಂದಿದ್ದಾರೆ.</p><p>'ಈ ಸದನವು ದೇಶದನ್ನು ಪ್ರತಿನಿಧಿಸುತ್ತದೆ. ಸರ್ಕಾರವು ರಾಜಕೀಯ ಶಕ್ತಿಯನ್ನು ಖಂಡಿತವಾಗಿಯೂ ಹೊಂದಿದೆ. ಆದರೆ, ವಿರೋಧ ಪಕ್ಷಗಳು ಸಹ ಜನರ ಧ್ವನಿಯನ್ನು ಪ್ರತಿನಿಧಿಸುತ್ತವೆ. ವಿರೋಧ ಪಕ್ಷಗಳು ನಿಮ್ಮ ಕೆಲಸಗಳಿಗೆ ನೆರವಾಗಲು ಬಯಸುತ್ತವೆ. ಸದನದಲ್ಲಿ ಮಾತನಾಡಲು ಅವಕಾಶ ಮಾಡಿಕೊಡುತ್ತೀರಿ ಎಂಬ ವಿಶ್ವಾಸದಲ್ಲಿದ್ದೇನೆ' ಎಂದು ಪುನರುಚ್ಚರಿಸಿದ್ದಾರೆ.</p><p>ವಿರೋಧ ಪಕ್ಷಗಳು ಕಳೆದ ಬಾರಿಗಿಂತ ಹೆಚ್ಚು ಭಾರತೀಯರನ್ನು ಈ ಬಾರಿ ಪ್ರತಿನಿಧಿಸಲಿವೆ. ಹಾಗಾಗಿ, ಇಂಡಿಯಾ ಬಣದ ಸಂಸದರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡುವುದು ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ.</p><p>'ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸಿ ಸದನವನ್ನು ಪರಿಣಾಮಕಾರಿಯಾಗಿ ನಡೆಸಬಹುದು ಎಂಬುದು ಪ್ರಜಾಸತ್ತಾತ್ಮಕ ನಡೆಯಲ್ಲ. ವಿರೋಧ ಪಕ್ಷಗಳು ದೇಶದ ಸಂವಿಧಾನವನ್ನು ರಕ್ಷಿಸಬೇಕು ಎಂಬುದಾಗಿ ಜನರು ಬಯಸುತ್ತಿರುವುದನ್ನು ಈ ಬಾರಿಯ ಲೋಕಸಭೆ ಚುನಾವಣೆ ತೋರಿಸಿಕೊಟ್ಟಿದೆ. ವಿರೋಧ ಪಕ್ಷದವರಿಗೆ ಮಾತನಾಡಲು ಅವಕಾಶ ಕಲ್ಪಿಸುವ ಮೂಲಕ ನೀವು ಸಂವಿಧಾನ ರಕ್ಷಿಸುವ ಕೆಲಸ ಮಾಡಲಿದ್ದೀರಿ ಎಂಬ ವಿಶ್ವಾಸವಿದೆ' ಎಂದೂ ಹೇಳಿದ್ದಾರೆ.</p>.18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ .ತುರ್ತು ಪರಿಸ್ಥಿತಿ ಹೇರಿಕೆಯನ್ನು ಸ್ಪೀಕರ್ ಖಂಡಿಸಿದ್ದಕ್ಕೆ ಸಂತೋಷವಾಯಿತು: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>