<p><strong>ಚೆನ್ನೈ</strong>: ಹೊಸೂರಿನಲ್ಲಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಿಸಲು ಮತ್ತು ಮೂಲಸೌಕರ್ಯಗಳಿಗಾಗಿ ಸಾವಿರಾರು ಎಕರೆ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ತಮಿಳುನಾಡು ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತರನ್ನು ಪೊಲೀಸರು ಸೋಮವಾರ ಬಂಧಿಸಿದರು.</p>.<p>‘ನಮಧು ನೀಲಂ ನಮಧೆ’ ರೈತ ಕಲ್ಯಾಣ ಸಂಘದ ಸದಸ್ಯರು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿಯಾಗಿ ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸಿದರು.</p>.<p>‘ಕೃಷ್ಣಗಿರಿ ಜಿಲ್ಲೆಯಲ್ಲಿನ ಕೈಗಾರಿಕಾ ಪಾರ್ಕ್ ಸೇರಿದಂತೆ ವಿವಿಧ ಯೋಜನೆಗಳಿಗಾಗಿ 39 ಸಾವಿರ ಎಕರೆ ಕೃಷಿ ಜಮೀನು ಮತ್ತು ಹೊಸೂರಿನಲ್ಲಿ ವಿಮಾನ ನಿಲ್ದಾಣ ಹಾಗೂ ಕಾರಿಡಾರ್ ನಿರ್ಮಾಣಕ್ಕಾಗಿ 29 ಸಾವಿರ ಎಕರೆ ಕೃಷಿ ಜಮೀನು ಸ್ವಾಧೀನಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸಿದೆ’ ಎಂದು ರೈತರು ಆರೋಪಿಸಿದ್ದಾರೆ.</p>.<p>‘ನಮ್ಮ ಜೀವ ಹೋದರೂ, ನಮ್ಮ ಕೃಷಿ ಜಮೀನುಗಳನ್ನು ನೀಡುವುದಿಲ್ಲ. ಭೂಮಿಯ ರಕ್ಷಣೆಗಾಗಿ ಒಗ್ಗಟ್ಟಾಗಿದ್ದೇವೆ. ರೈತರ ಬದುಕನ್ನು ಕಸಿದುಕೊಳ್ಳದೇ ಅಭಿವೃದ್ಧಿ ನಡೆಸುವ ಸಮತೋಲಿತ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂಬ ಭರವಸೆ ಇದೆ’ ಎಂದು ಸಂಘದ ಅಧ್ಯಕ್ಷ ಕುಮಾರ ರವಿಶಂಕರ್ ಅವರು ತಿಳಿಸಿದ್ದಾರೆ.</p>.<p>ಭೂಸ್ವಾಧೀನ ಪ್ರಕ್ರಿಯೆಯಿಂದ 50 ಸಾವಿರಕ್ಕೂ ಅಧಿಕ ರೈತ ಕುಟುಂಬಗಳಿಗೆ ಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. </p>.<p>ಕೃಷ್ಣಗಿರಿ ಜಿಲ್ಲೆಯಲ್ಲಿ ಕಾರ್ಖಾನೆ ಸ್ಥಾಪನೆಗೆ ಹಲವು ಕಂಪನಿಗಳು ಆಸಕ್ತಿ ತೋರಿರುವುದರಿಂದ ಕೈಗಾರಿಕಾ ಪಾರ್ಕ್ ನಿರ್ಮಿಸುವ ಅಗತ್ಯ ಇದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅದೇ ಜಿಲ್ಲೆಯಲ್ಲಿನ ಎರಡು ಸ್ಥಳಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಅಂತಿಮಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಹೊಸೂರಿನಲ್ಲಿ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನಿರ್ಮಿಸಲು ಮತ್ತು ಮೂಲಸೌಕರ್ಯಗಳಿಗಾಗಿ ಸಾವಿರಾರು ಎಕರೆ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ತಮಿಳುನಾಡು ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತರನ್ನು ಪೊಲೀಸರು ಸೋಮವಾರ ಬಂಧಿಸಿದರು.</p>.<p>‘ನಮಧು ನೀಲಂ ನಮಧೆ’ ರೈತ ಕಲ್ಯಾಣ ಸಂಘದ ಸದಸ್ಯರು ವಿವಿಧ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿಯಾಗಿ ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸಿದರು.</p>.<p>‘ಕೃಷ್ಣಗಿರಿ ಜಿಲ್ಲೆಯಲ್ಲಿನ ಕೈಗಾರಿಕಾ ಪಾರ್ಕ್ ಸೇರಿದಂತೆ ವಿವಿಧ ಯೋಜನೆಗಳಿಗಾಗಿ 39 ಸಾವಿರ ಎಕರೆ ಕೃಷಿ ಜಮೀನು ಮತ್ತು ಹೊಸೂರಿನಲ್ಲಿ ವಿಮಾನ ನಿಲ್ದಾಣ ಹಾಗೂ ಕಾರಿಡಾರ್ ನಿರ್ಮಾಣಕ್ಕಾಗಿ 29 ಸಾವಿರ ಎಕರೆ ಕೃಷಿ ಜಮೀನು ಸ್ವಾಧೀನಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಿದ್ಧತೆ ನಡೆಸಿದೆ’ ಎಂದು ರೈತರು ಆರೋಪಿಸಿದ್ದಾರೆ.</p>.<p>‘ನಮ್ಮ ಜೀವ ಹೋದರೂ, ನಮ್ಮ ಕೃಷಿ ಜಮೀನುಗಳನ್ನು ನೀಡುವುದಿಲ್ಲ. ಭೂಮಿಯ ರಕ್ಷಣೆಗಾಗಿ ಒಗ್ಗಟ್ಟಾಗಿದ್ದೇವೆ. ರೈತರ ಬದುಕನ್ನು ಕಸಿದುಕೊಳ್ಳದೇ ಅಭಿವೃದ್ಧಿ ನಡೆಸುವ ಸಮತೋಲಿತ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂಬ ಭರವಸೆ ಇದೆ’ ಎಂದು ಸಂಘದ ಅಧ್ಯಕ್ಷ ಕುಮಾರ ರವಿಶಂಕರ್ ಅವರು ತಿಳಿಸಿದ್ದಾರೆ.</p>.<p>ಭೂಸ್ವಾಧೀನ ಪ್ರಕ್ರಿಯೆಯಿಂದ 50 ಸಾವಿರಕ್ಕೂ ಅಧಿಕ ರೈತ ಕುಟುಂಬಗಳಿಗೆ ಜೀವನಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. </p>.<p>ಕೃಷ್ಣಗಿರಿ ಜಿಲ್ಲೆಯಲ್ಲಿ ಕಾರ್ಖಾನೆ ಸ್ಥಾಪನೆಗೆ ಹಲವು ಕಂಪನಿಗಳು ಆಸಕ್ತಿ ತೋರಿರುವುದರಿಂದ ಕೈಗಾರಿಕಾ ಪಾರ್ಕ್ ನಿರ್ಮಿಸುವ ಅಗತ್ಯ ಇದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅದೇ ಜಿಲ್ಲೆಯಲ್ಲಿನ ಎರಡು ಸ್ಥಳಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರ ಅಂತಿಮಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>