<p><strong>ರಾಂಚಿ:</strong> ವೆಜ್ ಬಿರಿಯಾನಿ ಕೇಳಿದ ಗ್ರಾಹಕನಿಗೆ ನಾನ್ ವೆಜ್ ಬಿರಿಯಾನಿ ಕೊಟ್ಟ ಹೋಟೆಲ್ ಮಾಲೀಕನ ಮೇಲೆ ಗುಂಡು ಹಾರಿಸಿದ ಘಟನೆ ಜರುಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ವೆಜ್ ಬಿರಿಯಾನಿ ಪಾರ್ಸೆಲ್ ತೆಗೆದುಕೊಂಡು ಹೋಗಿದ್ದ ಗ್ರಾಹಕನು, ನಂತರ ಗುಂಪಿನೊಂದಿಗೆ ಮರಳಿ ಬಂದಿದ್ದಾನೆ. ಹೋಟೆಲ್ನವರು ವೆಜ್ ಬಿರಿಯಾನಿ ಕೇಳಿದರೆ, ನಾನ್ ವೆಜ್ ಬಿರಿಯಾನಿ ನೀಡಿದ್ದಾರೆ ಎಂದು ಆರೋಪಿಸಿ ಜಗಳ ಮಾಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಹೋಟೆಲ್ ಮಾಲೀಕರ ಮೇಲೆ ಗುಂಡು ಹಾರಿಸಿದ್ದರಿಂದ, ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ತೆರಳುವಾಗ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಹೋಟೆಲ್ ಮಾಲೀಕನನ್ನು ವಿಜಯ್ ಕುಮಾರ್ ನಾಗ್(47) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. </p><p>ಆರೋಪಿಗಳನ್ನು ವಿಚಾರಣೆ ನಡೆಸಿದಾಗ, ಘಟನೆಗೆ ಬೇರೆ ಕಾರಣವಿದ್ದರೆ ತಿಳಿಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ವೆಜ್ ಬಿರಿಯಾನಿ ಕೇಳಿದ ಗ್ರಾಹಕನಿಗೆ ನಾನ್ ವೆಜ್ ಬಿರಿಯಾನಿ ಕೊಟ್ಟ ಹೋಟೆಲ್ ಮಾಲೀಕನ ಮೇಲೆ ಗುಂಡು ಹಾರಿಸಿದ ಘಟನೆ ಜರುಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.</p><p>ಶನಿವಾರ ವೆಜ್ ಬಿರಿಯಾನಿ ಪಾರ್ಸೆಲ್ ತೆಗೆದುಕೊಂಡು ಹೋಗಿದ್ದ ಗ್ರಾಹಕನು, ನಂತರ ಗುಂಪಿನೊಂದಿಗೆ ಮರಳಿ ಬಂದಿದ್ದಾನೆ. ಹೋಟೆಲ್ನವರು ವೆಜ್ ಬಿರಿಯಾನಿ ಕೇಳಿದರೆ, ನಾನ್ ವೆಜ್ ಬಿರಿಯಾನಿ ನೀಡಿದ್ದಾರೆ ಎಂದು ಆರೋಪಿಸಿ ಜಗಳ ಮಾಡಿದ್ದಾರೆ. ಈ ವೇಳೆ ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬರು ಹೋಟೆಲ್ ಮಾಲೀಕರ ಮೇಲೆ ಗುಂಡು ಹಾರಿಸಿದ್ದರಿಂದ, ಅವರಿಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ತೆರಳುವಾಗ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಹೋಟೆಲ್ ಮಾಲೀಕನನ್ನು ವಿಜಯ್ ಕುಮಾರ್ ನಾಗ್(47) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. </p><p>ಆರೋಪಿಗಳನ್ನು ವಿಚಾರಣೆ ನಡೆಸಿದಾಗ, ಘಟನೆಗೆ ಬೇರೆ ಕಾರಣವಿದ್ದರೆ ತಿಳಿಯುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>