<p><strong>ಅಗರ್ತಲಾ:</strong> ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳಿಗೆ ಸೇವೆ ಒದಗಿಸದಿರಲು ನಿರ್ಧರಿಸಲಾಗಿದೆ ಎಂದು ಆಲ್ ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ (ATHROA) ಹೇಳಿದೆ.</p><p>ಸೋಮವಾರ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ATHROA ಪ್ರಧಾನ ಕಾರ್ಯದರ್ಶಿ ಸೈಕತ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.</p><p>‘ನಮ್ಮದು ಜಾತ್ಯತೀತ ದೇಶವಾಗಿದ್ದು, ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುತ್ತೇವೆ. ಆದರೆ, ಬಾಂಗ್ಲಾದೇಶದಲ್ಲಿ ನಮ್ಮ ರಾಷ್ಟ್ರಧ್ವಜವನ್ನು ಅವಮಾನಿಸಲಾಗಿದೆ. ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಮೂಲಭೂತವಾದಿಗಳ ದಬ್ಬಾಳಿಕೆಯನ್ನು ಎದುರಿಸುತ್ತಿದ್ದಾರೆ. ಈ ಹಿಂದೆಯೂ ಇಂತಹ ಘಟನೆಗಳು ನಡೆಯುತ್ತಿದ್ದವು. ಆದರೆ, ಈಗ ಅದು ಮಿತಿ ಮೀರಿದೆ’ ಎಂದು ಬಂಡೋಪಾಧ್ಯಾಯ ಬೇಸರ ಹೊರ ಹಾಕಿದ್ದಾರೆ. </p><p>‘ಬಾಂಗ್ಲಾದ ಸದ್ಯದ ಪರಿಸ್ಥಿತಿ ನಿಜವಾಗಿಯೂ ಚಿಂತಾಜನಕವಾಗಿದೆ. ವಿವಿಧ ಉದ್ದೇಶಗಳಿಗಾಗಿ ತ್ರಿಪುರಾಕ್ಕೆ ಬರುವ ಅಲ್ಲಿನ ಪ್ರಜೆಗಳಿಗೆ ನಾವು ಸೇವೆ ಒದಗಿಸುತ್ತೇವೆ. ಆದರೆ, ಬಾಂಗ್ಲಾದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಮೇಲೆ ದೌರ್ಜನ್ಯ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಅವರು ಹೇಳಿದ್ದಾರೆ. </p><p>ಇತ್ತೀಚೆಗಷ್ಟೇ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಬಾಂಗ್ಲಾದೇಶದ ಯಾವುದೇ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಘೋಷಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ:</strong> ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಜೆಗಳಿಗೆ ಸೇವೆ ಒದಗಿಸದಿರಲು ನಿರ್ಧರಿಸಲಾಗಿದೆ ಎಂದು ಆಲ್ ತ್ರಿಪುರಾ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಂಘ (ATHROA) ಹೇಳಿದೆ.</p><p>ಸೋಮವಾರ ನಡೆದ ತುರ್ತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ATHROA ಪ್ರಧಾನ ಕಾರ್ಯದರ್ಶಿ ಸೈಕತ್ ಬಂಡೋಪಾಧ್ಯಾಯ ತಿಳಿಸಿದ್ದಾರೆ.</p><p>‘ನಮ್ಮದು ಜಾತ್ಯತೀತ ದೇಶವಾಗಿದ್ದು, ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುತ್ತೇವೆ. ಆದರೆ, ಬಾಂಗ್ಲಾದೇಶದಲ್ಲಿ ನಮ್ಮ ರಾಷ್ಟ್ರಧ್ವಜವನ್ನು ಅವಮಾನಿಸಲಾಗಿದೆ. ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಮೂಲಭೂತವಾದಿಗಳ ದಬ್ಬಾಳಿಕೆಯನ್ನು ಎದುರಿಸುತ್ತಿದ್ದಾರೆ. ಈ ಹಿಂದೆಯೂ ಇಂತಹ ಘಟನೆಗಳು ನಡೆಯುತ್ತಿದ್ದವು. ಆದರೆ, ಈಗ ಅದು ಮಿತಿ ಮೀರಿದೆ’ ಎಂದು ಬಂಡೋಪಾಧ್ಯಾಯ ಬೇಸರ ಹೊರ ಹಾಕಿದ್ದಾರೆ. </p><p>‘ಬಾಂಗ್ಲಾದ ಸದ್ಯದ ಪರಿಸ್ಥಿತಿ ನಿಜವಾಗಿಯೂ ಚಿಂತಾಜನಕವಾಗಿದೆ. ವಿವಿಧ ಉದ್ದೇಶಗಳಿಗಾಗಿ ತ್ರಿಪುರಾಕ್ಕೆ ಬರುವ ಅಲ್ಲಿನ ಪ್ರಜೆಗಳಿಗೆ ನಾವು ಸೇವೆ ಒದಗಿಸುತ್ತೇವೆ. ಆದರೆ, ಬಾಂಗ್ಲಾದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಮೇಲೆ ದೌರ್ಜನ್ಯ ನಡೆಸುತ್ತಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಅವರು ಹೇಳಿದ್ದಾರೆ. </p><p>ಇತ್ತೀಚೆಗಷ್ಟೇ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಬಾಂಗ್ಲಾದೇಶದ ಯಾವುದೇ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಘೋಷಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>