<p class="title"><strong>ಖಾರ್ಗೋನ್: </strong>ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ (ಪಿಎಂಎವೈ) ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಮನೆಯನ್ನುರಾಮ ನವಮಿ ವೇಳೆ ನಡೆದ ಹಿಂಸಾಚಾರದ ನಂತರ ನೆಲಸಮಗೊಳಿಸಲಾಗಿದೆ.</p>.<p class="title">ಮನೆಯನ್ನು ಬೇರೆಡೆ ನಿರ್ಮಿಸಬೇಕಾಗಿತ್ತು. ಇದನ್ನು ವಾಸದ ಹೊರತು ಇತರ ಉದ್ದೇಶಗಳಿಗಾಗಿ ಬಳಸಲಾಗುತ್ತಿತ್ತು. ಹಿಂಸಾಚಾರದಲ್ಲಿ ಭಾಗವಹಿಸಿದ್ದವರ ವಿರುದ್ಧದ ಕ್ರಮವಾಗಿ ಮನೆಯನ್ನು ನೆಲಸಮಗೊಳಿಸಿರುವ ವರದಿಯನ್ನು ಉಲ್ಲೇಖಿಸಿ ಮಂಗಳವಾರ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p class="title">ಖಾಸ್ಖಾಸ್ವಾಡಿ ಪ್ರದೇಶದ ಬಿರ್ಲಾ ಮಾರ್ಗ್ನಲ್ಲಿರುವ ಈ ಮನೆಯು ಹಸೀನಾ ಫಖ್ರೂ (60) ಅವರಿಗೆ ಸೇರಿದೆ. ರಾಮ ನವಮಿ ಉತ್ಸವದ ವೇಳೆ ನಡೆದ ವಿವಿಧ ಹಿಂಸಾಚಾರಗಳು ಮತ್ತು ಕಲ್ಲು ತೂರಾಟದಲ್ಲಿ ಭಾಗವಹಿಸಿದ ಆರೋಪಿಗಳಿಗೆ ಸೇರಿದ ಅಕ್ರಮ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಕ್ರಮವಾಗಿ ಸೋಮವಾರ ಸ್ಥಳೀಯ ಅಧಿಕಾರಿಗಳು ಮನೆಯನ್ನು ನೆಲಸಮಗೊಳಿಸಿದ್ದಾರೆ.</p>.<p>‘ಪಿಎಂಎವೈ ಯೋಜನೆಯಡಿ ನಿರ್ಮಿಸುವ ಮನೆಗಳನ್ನು ವಾಸಕ್ಕಾಗಿ ಮಾತ್ರ ಬಳಸಲಾಗುತ್ತದೆ. ಆದರೆ ಸ್ಥಳೀಯ ಆಡಳಿತ ಅಲ್ಲಿಗೆ ಹೋದಾಗ ಇತರ ಉದ್ದೇಶಗಳಿಗೆ ಮನೆಯನ್ನು ಬಳಸುತ್ತಿದ್ದುದು ಕಂಡು ಬಂದಿದೆ. ಅಲ್ಲಿ ಯಾರೂ ವಾಸವಿರಲಿಲ್ಲ’</p>.<p>‘ಪಿಎಂಎವೈ ಅಡಿಯಲ್ಲಿ ಬೇರೆ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಮಂಜೂರಾತಿ ಪಡೆದಿದ್ದ ಅವರು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದರು. ಮನೆಯ ತೆರವಿಗೆ ತಹಸೀಲ್ದಾರ್ ಆದೇಶಿಸಿದ ನಂತರ ನೆಲಸಮಗೊಳಿಸಲಾಗಿದೆ’ ಎಂದು ಸ್ಥಳೀಯ ಆಡಳಿತದ ಮುಖ್ಯ ಅಧಿಕಾರಿ ಪ್ರಿಯಾಂಕಾ ಪಟೇಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಖಾರ್ಗೋನ್: </strong>ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ (ಪಿಎಂಎವೈ) ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದ್ದ ಮನೆಯನ್ನುರಾಮ ನವಮಿ ವೇಳೆ ನಡೆದ ಹಿಂಸಾಚಾರದ ನಂತರ ನೆಲಸಮಗೊಳಿಸಲಾಗಿದೆ.</p>.<p class="title">ಮನೆಯನ್ನು ಬೇರೆಡೆ ನಿರ್ಮಿಸಬೇಕಾಗಿತ್ತು. ಇದನ್ನು ವಾಸದ ಹೊರತು ಇತರ ಉದ್ದೇಶಗಳಿಗಾಗಿ ಬಳಸಲಾಗುತ್ತಿತ್ತು. ಹಿಂಸಾಚಾರದಲ್ಲಿ ಭಾಗವಹಿಸಿದ್ದವರ ವಿರುದ್ಧದ ಕ್ರಮವಾಗಿ ಮನೆಯನ್ನು ನೆಲಸಮಗೊಳಿಸಿರುವ ವರದಿಯನ್ನು ಉಲ್ಲೇಖಿಸಿ ಮಂಗಳವಾರ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p class="title">ಖಾಸ್ಖಾಸ್ವಾಡಿ ಪ್ರದೇಶದ ಬಿರ್ಲಾ ಮಾರ್ಗ್ನಲ್ಲಿರುವ ಈ ಮನೆಯು ಹಸೀನಾ ಫಖ್ರೂ (60) ಅವರಿಗೆ ಸೇರಿದೆ. ರಾಮ ನವಮಿ ಉತ್ಸವದ ವೇಳೆ ನಡೆದ ವಿವಿಧ ಹಿಂಸಾಚಾರಗಳು ಮತ್ತು ಕಲ್ಲು ತೂರಾಟದಲ್ಲಿ ಭಾಗವಹಿಸಿದ ಆರೋಪಿಗಳಿಗೆ ಸೇರಿದ ಅಕ್ರಮ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಕ್ರಮವಾಗಿ ಸೋಮವಾರ ಸ್ಥಳೀಯ ಅಧಿಕಾರಿಗಳು ಮನೆಯನ್ನು ನೆಲಸಮಗೊಳಿಸಿದ್ದಾರೆ.</p>.<p>‘ಪಿಎಂಎವೈ ಯೋಜನೆಯಡಿ ನಿರ್ಮಿಸುವ ಮನೆಗಳನ್ನು ವಾಸಕ್ಕಾಗಿ ಮಾತ್ರ ಬಳಸಲಾಗುತ್ತದೆ. ಆದರೆ ಸ್ಥಳೀಯ ಆಡಳಿತ ಅಲ್ಲಿಗೆ ಹೋದಾಗ ಇತರ ಉದ್ದೇಶಗಳಿಗೆ ಮನೆಯನ್ನು ಬಳಸುತ್ತಿದ್ದುದು ಕಂಡು ಬಂದಿದೆ. ಅಲ್ಲಿ ಯಾರೂ ವಾಸವಿರಲಿಲ್ಲ’</p>.<p>‘ಪಿಎಂಎವೈ ಅಡಿಯಲ್ಲಿ ಬೇರೆ ಸ್ಥಳದಲ್ಲಿ ಮನೆ ನಿರ್ಮಾಣಕ್ಕೆ ಮಂಜೂರಾತಿ ಪಡೆದಿದ್ದ ಅವರು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದರು. ಮನೆಯ ತೆರವಿಗೆ ತಹಸೀಲ್ದಾರ್ ಆದೇಶಿಸಿದ ನಂತರ ನೆಲಸಮಗೊಳಿಸಲಾಗಿದೆ’ ಎಂದು ಸ್ಥಳೀಯ ಆಡಳಿತದ ಮುಖ್ಯ ಅಧಿಕಾರಿ ಪ್ರಿಯಾಂಕಾ ಪಟೇಲ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>