<p class="title"><strong>ನವದೆಹಲಿ:</strong> ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರ ಮೂರು ಮನೆಗಳು ಸೇರಿದಂತೆ 22 ಸ್ಥಳಗಳಲ್ಲಿ ಸಿಬಿಐ ಬುಧವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p class="title">ಪ್ರಜಾಪತಿ ಅವರಿಗೆ ಸೇರಿದ್ದ ಅಮೇಠಿಯಲ್ಲಿನ ಮೂರು ಮನೆ ಸೇರಿದಂತೆ ಉತ್ತರ ಪ್ರದೇಶ, ದೆಹಲಿಯ 22 ಪ್ರದೇಶಗಳಲ್ಲಿ ಸಿಬಿಐ ತಂಡಗಳು ಶೋಧ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಪ್ರಜಾಪತಿ ಜೈಲುಶಿಕ್ಷೆ ಅನುಭವಿಸುತ್ತಿದ್ದಾರೆ. ಗಣಿಗಾರಿಕೆ ಗುತ್ತಿಗೆ ನೀಡುವ ಭರವಸೆ ನೀಡಿ, ಮಾಜಿ ಸಚಿವರು ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು.ಈ ಆರೋಪವನ್ನು ಪ್ರಜಾಪತಿ ತಳ್ಳಿಹಾಕಿದ್ದಾರೆ.</p>.<p class="title">ಅಖಿಲೇಶ್ ಯಾದವ್ ಸರ್ಕಾರದಲ್ಲಿ ಗಣಿಗಾರಿಕೆ ಸಚಿವರಾಗಿದ್ದ ಪ್ರಜಾಪತಿ ಅವರು ಸಮಾಜವಾದಿ ಪಕ್ಷದ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು.</p>.<p class="title">ಅಕ್ರಮ ಗಣಿಗಾರಿಕೆ ಕುರಿತುಅಲಹಾಬಾದ್ ಹೈಕೋರ್ಟ್ ನಿರ್ದೇಶನದಂತೆ ತನಿಖೆ ನಡೆಸುತ್ತಿರುವ ಸಿಬಿಐ 2019ರ ಜನವರಿ 2ರಂದು ಮೂರನೇ ಎಫ್ಐಆರ್ ದಾಖಲಿಸಿದೆ. ಎಫ್ಐಆರ್ ದಾಖಲಾದ ನಂತರಮೊದಲ ಬಾರಿಗೆ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ.</p>.<p class="title">2012–16ರ ಅವಧಿಯಲ್ಲಿ ಸಮಾಜವಾದಿ ಪಕ್ಷದ(ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರುಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ, ಹಮೀರ್ಪುರ್ ಜಿಲ್ಲೆಯಲ್ಲಿ ಇ–ಟೆಂಡರ್ ಪ್ರಕ್ರಿಯೆ ಉಲ್ಲಂಘಿಸಿ ಗಣಿಗುತ್ತಿಗೆ ನೀಡಲಾಗಿದೆ ಎಂಬ ಆರೋಪವಿದೆ.</p>.<p class="title">ಇದೇ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಬಿ. ಚಂದ್ರಕಲಾ ವಿರುದ್ಧವೂ ಸಿಬಿಐ ಎಫ್ಐಆರ್ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರ ಮೂರು ಮನೆಗಳು ಸೇರಿದಂತೆ 22 ಸ್ಥಳಗಳಲ್ಲಿ ಸಿಬಿಐ ಬುಧವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.</p>.<p class="title">ಪ್ರಜಾಪತಿ ಅವರಿಗೆ ಸೇರಿದ್ದ ಅಮೇಠಿಯಲ್ಲಿನ ಮೂರು ಮನೆ ಸೇರಿದಂತೆ ಉತ್ತರ ಪ್ರದೇಶ, ದೆಹಲಿಯ 22 ಪ್ರದೇಶಗಳಲ್ಲಿ ಸಿಬಿಐ ತಂಡಗಳು ಶೋಧ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಪ್ರಜಾಪತಿ ಜೈಲುಶಿಕ್ಷೆ ಅನುಭವಿಸುತ್ತಿದ್ದಾರೆ. ಗಣಿಗಾರಿಕೆ ಗುತ್ತಿಗೆ ನೀಡುವ ಭರವಸೆ ನೀಡಿ, ಮಾಜಿ ಸಚಿವರು ನನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು.ಈ ಆರೋಪವನ್ನು ಪ್ರಜಾಪತಿ ತಳ್ಳಿಹಾಕಿದ್ದಾರೆ.</p>.<p class="title">ಅಖಿಲೇಶ್ ಯಾದವ್ ಸರ್ಕಾರದಲ್ಲಿ ಗಣಿಗಾರಿಕೆ ಸಚಿವರಾಗಿದ್ದ ಪ್ರಜಾಪತಿ ಅವರು ಸಮಾಜವಾದಿ ಪಕ್ಷದ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದರು.</p>.<p class="title">ಅಕ್ರಮ ಗಣಿಗಾರಿಕೆ ಕುರಿತುಅಲಹಾಬಾದ್ ಹೈಕೋರ್ಟ್ ನಿರ್ದೇಶನದಂತೆ ತನಿಖೆ ನಡೆಸುತ್ತಿರುವ ಸಿಬಿಐ 2019ರ ಜನವರಿ 2ರಂದು ಮೂರನೇ ಎಫ್ಐಆರ್ ದಾಖಲಿಸಿದೆ. ಎಫ್ಐಆರ್ ದಾಖಲಾದ ನಂತರಮೊದಲ ಬಾರಿಗೆ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದೆ.</p>.<p class="title">2012–16ರ ಅವಧಿಯಲ್ಲಿ ಸಮಾಜವಾದಿ ಪಕ್ಷದ(ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರುಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ, ಹಮೀರ್ಪುರ್ ಜಿಲ್ಲೆಯಲ್ಲಿ ಇ–ಟೆಂಡರ್ ಪ್ರಕ್ರಿಯೆ ಉಲ್ಲಂಘಿಸಿ ಗಣಿಗುತ್ತಿಗೆ ನೀಡಲಾಗಿದೆ ಎಂಬ ಆರೋಪವಿದೆ.</p>.<p class="title">ಇದೇ ಪ್ರಕರಣದಲ್ಲಿ ಐಎಎಸ್ ಅಧಿಕಾರಿ ಬಿ. ಚಂದ್ರಕಲಾ ವಿರುದ್ಧವೂ ಸಿಬಿಐ ಎಫ್ಐಆರ್ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>