<p><strong>ಶಿಮ್ಲಾ</strong>: ಬುಧವಾರ ರಾತ್ರಿ ಸಂಭವಿಸಿದ ಧಿಡೀರ್ ಮೇಘಸ್ಫೋಟದಿಂದ ಹಾನಿಗೊಳಗಾಗಿದ್ದ ಮನಾಲಿ–ಲೆಹ್ ರಾಷ್ಟ್ರೀಯ ಹೆದ್ದಾರಿ–3 ಅನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿರುವ ಅಂಜನಿ ಮಹಾದೇವ್ ದೇವಸ್ಥಾನದ ಪಕ್ಕದಲ್ಲಿನ ಸಣ್ಣ ಜಲಪಾತದ ಹತ್ತಿರದಲ್ಲಿ ಬುಧವಾರ ರಾತ್ರಿ ವೇಳೆ ದಿಢೀರ್ ಮೇಘಸ್ಫೋಟ ಸಂಭವಿಸಿತ್ತು. ಇದರಿಂದಾಗಿ ಪ್ರವಾಹ ಉಂಟಾಗಿದ್ದು ಲೇಹ್–ಮನಾಲಿ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ 3) ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.</p><p>ಗುರುವಾರ ಸಂಜೆಯಿಂದ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಗಡಿ ರಸ್ತೆ ಸಂಸ್ಥೆಯ (ಬಿಆರ್ಒ) ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೇಘಸ್ಫೋಟದಿಂದಾಗಿ ಮೂರು ಮನೆಗಳು ಕೊಚ್ಚಿ ಹೋಗಿದ್ದು, ಒಂದು ಮನೆಗೆ ಹಾನಿಯಾಗಿದೆ. ನಾಲ್ಕು ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತವಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ರಾಜ್ಯದ 8 ಜಿಲ್ಲೆಗಳಲ್ಲಿ ಜುಲೈ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಶಿಮ್ಲಾ ಹವಾಮಾನ ಕಚೇರಿ ತಿಳಿಸಿದೆ. ಜಿಲ್ಲೆಗಳಿಗೆ ‘ಯೆಲ್ಲೊ’ ಅಲರ್ಟ್ ಘೋಷಿಸಿದೆ.</p><p>ರಾಜ್ಯದಲ್ಲಿ ಜೂನ್ 27ರಂದು ಮಾನ್ಸೂನ್ ಪ್ರಾರಂಭವಾದಾಗಿನಿಂದ ಈವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 51 ಜನರು ಮೃತಪಟ್ಟಿದ್ದಾರೆ. ₹390 ಕೋಟಿಯಷ್ಟು ಆಸ್ತಿ–ಪಾಸ್ತಿ ನಷ್ಟವಾಗಿದೆ ಎಂದು ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.</p>.ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಪ್ರವಾಹ ಸ್ಥಿತಿ; ರಾಷ್ಟ್ರೀಯ ಹೆದ್ದಾರಿ–3 ಬಂದ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಬುಧವಾರ ರಾತ್ರಿ ಸಂಭವಿಸಿದ ಧಿಡೀರ್ ಮೇಘಸ್ಫೋಟದಿಂದ ಹಾನಿಗೊಳಗಾಗಿದ್ದ ಮನಾಲಿ–ಲೆಹ್ ರಾಷ್ಟ್ರೀಯ ಹೆದ್ದಾರಿ–3 ಅನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿರುವ ಅಂಜನಿ ಮಹಾದೇವ್ ದೇವಸ್ಥಾನದ ಪಕ್ಕದಲ್ಲಿನ ಸಣ್ಣ ಜಲಪಾತದ ಹತ್ತಿರದಲ್ಲಿ ಬುಧವಾರ ರಾತ್ರಿ ವೇಳೆ ದಿಢೀರ್ ಮೇಘಸ್ಫೋಟ ಸಂಭವಿಸಿತ್ತು. ಇದರಿಂದಾಗಿ ಪ್ರವಾಹ ಉಂಟಾಗಿದ್ದು ಲೇಹ್–ಮನಾಲಿ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ 3) ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.</p><p>ಗುರುವಾರ ಸಂಜೆಯಿಂದ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ಗಡಿ ರಸ್ತೆ ಸಂಸ್ಥೆಯ (ಬಿಆರ್ಒ) ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೇಘಸ್ಫೋಟದಿಂದಾಗಿ ಮೂರು ಮನೆಗಳು ಕೊಚ್ಚಿ ಹೋಗಿದ್ದು, ಒಂದು ಮನೆಗೆ ಹಾನಿಯಾಗಿದೆ. ನಾಲ್ಕು ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತವಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ರಾಜ್ಯದ 8 ಜಿಲ್ಲೆಗಳಲ್ಲಿ ಜುಲೈ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಶಿಮ್ಲಾ ಹವಾಮಾನ ಕಚೇರಿ ತಿಳಿಸಿದೆ. ಜಿಲ್ಲೆಗಳಿಗೆ ‘ಯೆಲ್ಲೊ’ ಅಲರ್ಟ್ ಘೋಷಿಸಿದೆ.</p><p>ರಾಜ್ಯದಲ್ಲಿ ಜೂನ್ 27ರಂದು ಮಾನ್ಸೂನ್ ಪ್ರಾರಂಭವಾದಾಗಿನಿಂದ ಈವರೆಗೆ ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 51 ಜನರು ಮೃತಪಟ್ಟಿದ್ದಾರೆ. ₹390 ಕೋಟಿಯಷ್ಟು ಆಸ್ತಿ–ಪಾಸ್ತಿ ನಷ್ಟವಾಗಿದೆ ಎಂದು ತುರ್ತು ಕಾರ್ಯಾಚರಣೆ ಕೇಂದ್ರ ತಿಳಿಸಿದೆ.</p>.ಹಿಮಾಚಲ ಪ್ರದೇಶ: ಮೇಘಸ್ಫೋಟದಿಂದ ಪ್ರವಾಹ ಸ್ಥಿತಿ; ರಾಷ್ಟ್ರೀಯ ಹೆದ್ದಾರಿ–3 ಬಂದ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>