ಕೋರೊಮಂಡಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ–ಹೌರಾ ಎಕ್ಸ್ಪ್ರೆಸ್ ರೈಲು ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲೇಶ್ವರ ಜಿಲ್ಲೆಯಲ್ಲಿ ಜೂನ್ 2ರಂದು ಸಂಭವಿಸಿದ ಅಪಘಾತದಲ್ಲಿ 291 ಮಂದಿ ಮೃತಪಟ್ಟು, 1200ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ದುರಂತದ ನಂತರ ಆಗ್ನೇಯ ರೈಲ್ವೆ ಹಲವು ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು.