ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ಹೆಚ್ಚಿರುವ ಕೇರಳದ ವಯನಾಡ್ಗೆ ಭೇಟಿ ನೀಡಿ ಬಳಿಕ ಮಾತನಾಡಿದ ಸಚಿವರು, ‘ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷವನ್ನು ತಗ್ಗಿಸುವ ನಿಟ್ಟಿನಲ್ಲಿ ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ಮಾರ್ಗದರ್ಶನ ನೀಡಲು, ಕೊಯಮತ್ತೂರಿನ ಸಲೀಂ ಅಲಿ ಪಕ್ಷಿ ವಿಜ್ಞಾನ ಮತ್ತು ನೈಸರ್ಗಿಕ ಇತಿಹಾಸ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.