<p><strong>ಅಗರ್ತಲಾ</strong>: ಇಲ್ಲಿಯ ಶಕ್ತಿಪೀಠ ಎನಿಸಿಕೊಂಡಿರುವ ತ್ರಿಪುರೇಶ್ವರಿ ದೇವಾಲಯದ ಕಲ್ಯಾಣಿಯಲ್ಲಿ ಮಾನವ ತಲೆಬುರುಡೆ ಪತ್ತೆಯಾಗಿದೆ.</p><p>500 ವರ್ಷಗಳಷ್ಟು ಹಳೆಯದಾದ ದೇಗುಲದ ಆವರಣದ ಕಲ್ಯಾಣಿಯೊಳಗೆ ಮಾನವನ ತಲೆಬುರುಡೆ ಬಂದಿದ್ದಾದರೂ ಹೇಗೆ ಎನ್ನುವುದನ್ನು ಪತ್ತೆ ಮಾಡಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡಸಲಾಗುತ್ತಿದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ತಲೆಬುರುಡೆಯನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ನೀಡಿದ್ದಾರೆ. ಕಲ್ಯಾಣಿಯಲ್ಲಿ ಮತ್ಯಾವುದೆ ಮಾನವ ದೇಹದ ಭಾಗಗಳು ದೊರೆತಿಲ್ಲ ಎಂದು ತ್ರಿಪುರಾ ಸ್ಟೇಟ್ ರೈಫಲ್ಸ್ನ ಡೈವರ್ಸ್ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.</p><p>ಮುಂದಿನ 45 ದಿನಗಳವರೆಗೆ ಕಲ್ಯಾಣಿಯ ನೀರನ್ನು ಬಳಸುವಂತಿಲ್ಲ, ಪೂಜೆ ನಡೆಸಿ ನೀರನ್ನು ಶುದ್ಧಗೊಳಿಸಿದ ಬಳಿಕ ನೀರನ್ನು ಬಳಕೆ ಮಾಡಬಹುದು ಎಂದು ದೇವಾಲಯದ ವ್ಯವಸ್ಥಾಪಕ ಮಾನಿಕ್ ದತ್ತ ತಿಳಿಸಿದ್ದಾರೆ.</p><p>ಈ ದೇವಾಲಯವನ್ನು 1501ರಲ್ಲಿ ಮಹಾರಾಜ ಧನ್ಯ ಮಾಣಿಕ್ಯ ಅವರು ನಿರ್ಮಿಸಿದ್ದರು. ಪ್ರಸ್ತುತ ರಾಜ್ಯ ಸರ್ಕಾರ ದೇವಾಲಯವನ್ನು ಮುನ್ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ</strong>: ಇಲ್ಲಿಯ ಶಕ್ತಿಪೀಠ ಎನಿಸಿಕೊಂಡಿರುವ ತ್ರಿಪುರೇಶ್ವರಿ ದೇವಾಲಯದ ಕಲ್ಯಾಣಿಯಲ್ಲಿ ಮಾನವ ತಲೆಬುರುಡೆ ಪತ್ತೆಯಾಗಿದೆ.</p><p>500 ವರ್ಷಗಳಷ್ಟು ಹಳೆಯದಾದ ದೇಗುಲದ ಆವರಣದ ಕಲ್ಯಾಣಿಯೊಳಗೆ ಮಾನವನ ತಲೆಬುರುಡೆ ಬಂದಿದ್ದಾದರೂ ಹೇಗೆ ಎನ್ನುವುದನ್ನು ಪತ್ತೆ ಮಾಡಲು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡಸಲಾಗುತ್ತಿದೆ. ಸಾರ್ವಜನಿಕರು ಈ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ತಲೆಬುರುಡೆಯನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ನೀಡಿದ್ದಾರೆ. ಕಲ್ಯಾಣಿಯಲ್ಲಿ ಮತ್ಯಾವುದೆ ಮಾನವ ದೇಹದ ಭಾಗಗಳು ದೊರೆತಿಲ್ಲ ಎಂದು ತ್ರಿಪುರಾ ಸ್ಟೇಟ್ ರೈಫಲ್ಸ್ನ ಡೈವರ್ಸ್ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಣಿಕ್ ಸಹಾ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.</p><p>ಮುಂದಿನ 45 ದಿನಗಳವರೆಗೆ ಕಲ್ಯಾಣಿಯ ನೀರನ್ನು ಬಳಸುವಂತಿಲ್ಲ, ಪೂಜೆ ನಡೆಸಿ ನೀರನ್ನು ಶುದ್ಧಗೊಳಿಸಿದ ಬಳಿಕ ನೀರನ್ನು ಬಳಕೆ ಮಾಡಬಹುದು ಎಂದು ದೇವಾಲಯದ ವ್ಯವಸ್ಥಾಪಕ ಮಾನಿಕ್ ದತ್ತ ತಿಳಿಸಿದ್ದಾರೆ.</p><p>ಈ ದೇವಾಲಯವನ್ನು 1501ರಲ್ಲಿ ಮಹಾರಾಜ ಧನ್ಯ ಮಾಣಿಕ್ಯ ಅವರು ನಿರ್ಮಿಸಿದ್ದರು. ಪ್ರಸ್ತುತ ರಾಜ್ಯ ಸರ್ಕಾರ ದೇವಾಲಯವನ್ನು ಮುನ್ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>