ಕೋಲ್ಕತ್ತ: ವಾಕ್ ಸ್ವಾತಂತ್ರ್ಯವನ್ನು ಧಮನಿಸುವ ಮತ್ತು ದ್ವೇಷವನ್ನು ಉತ್ತೇಜಿಸುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿವೆ ಎಂದು ಕಳವಳ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಧ್ವನಿ ಎತ್ತುವ ಅಗತ್ಯವಿದೆ ಎಂದು ಸೋಮವಾರ ಪ್ರತಿಪಾದಿಸಿದ್ದಾರೆ.