<p><strong>ಹೈದರಾಬಾದ್:</strong> ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಬುಧವಾರ ಗೈರಾಗಿದ್ದಾರೆ.</p>.<p>ಅವರನ್ನು ಪತ್ತೆಹಚ್ಚಲು ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡುವಂಥ ಪೋಸ್ಟರ್ಗಳು ಹೈದರಾಬಾದ್ನ ವಿವಿಧ ಪ್ರದೇಶಗಳಲ್ಲಿ ಕಂಡುಬಂದಿದ್ದು, ರಾಜಕೀಯ ಚರ್ಚೆಗೂ ಗ್ರಾಸವಾಗಿದೆ.</p>.<p>ಬುಧವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಪೇಟ್ ಬಷೀರಾಬಾದ್ ಠಾಣೆಯಪೊಲೀಸರು ಭಗೀರಥ ಅವರಿಗೆ ನೋಟಿಸ್ ನೀಡಿದ್ದರು. ಆದಾಗ್ಯೂ, ಭಗೀರಥ ವಿಚಾರಣೆಗೆ ಹಾಜರಾಗಿಲ್ಲ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭಗೀರಥ ಅವರು ಸಲ್ಲಿಸಿರುವ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.</p>.<p>ವಿಚಾರಣೆಗೆ ಹಾಜರಾಗದೇ ಭಗೀರಥ ತಲೆಮರೆಸಿಕೊಂಡಿರುವ ಬಗ್ಗೆ ಹಲವು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ತಕ್ಷಣವೇ ಅವರನ್ನು ಬಂಧಿಸುವಂತೆ ಪೊಲೀಸರನ್ನು ಆಗ್ರಹಿಸಿವೆ. ಪೊಲೀಸರು, ಭಗೀರಥ ವಿರುದ್ಧದ ಪ್ರಕರಣದಲ್ಲಿನ ಸೆಕ್ಷನ್ಗಳನ್ನು ಪರಿಷ್ಕರಿಸಿದ್ದಾರೆ.</p>.<p>ತೆಲಂಗಾಣ ರಕ್ಷಣಾ ಸೇನಾದ ಮುಖ್ಯಸ್ಥೆ ಕೆ.ಕವಿತಾ ಅವರೂ ಈ ಕುರಿತು ಮಾತನಾಡಿ, ‘ಇಂಥ ಆರೋಪಗಳನ್ನು ಹೊತ್ತ ವ್ಯಕ್ತಿಗಳು ದೇಶದಿಂದ ಪರಾರಿಯಾಗಲು ಆಸ್ಪದ ನೀಡುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಹೀಗಾಗಿ ತಕ್ಷಣವೇ ಭಗೀರಥ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-51-1190812174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಅವರ ಪುತ್ರ ಬಂಡಿ ಭಗೀರಥ ಅವರು ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಬುಧವಾರ ಗೈರಾಗಿದ್ದಾರೆ.</p>.<p>ಅವರನ್ನು ಪತ್ತೆಹಚ್ಚಲು ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡುವಂಥ ಪೋಸ್ಟರ್ಗಳು ಹೈದರಾಬಾದ್ನ ವಿವಿಧ ಪ್ರದೇಶಗಳಲ್ಲಿ ಕಂಡುಬಂದಿದ್ದು, ರಾಜಕೀಯ ಚರ್ಚೆಗೂ ಗ್ರಾಸವಾಗಿದೆ.</p>.<p>ಬುಧವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಪೇಟ್ ಬಷೀರಾಬಾದ್ ಠಾಣೆಯಪೊಲೀಸರು ಭಗೀರಥ ಅವರಿಗೆ ನೋಟಿಸ್ ನೀಡಿದ್ದರು. ಆದಾಗ್ಯೂ, ಭಗೀರಥ ವಿಚಾರಣೆಗೆ ಹಾಜರಾಗಿಲ್ಲ.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಭಗೀರಥ ಅವರು ಸಲ್ಲಿಸಿರುವ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.</p>.<p>ವಿಚಾರಣೆಗೆ ಹಾಜರಾಗದೇ ಭಗೀರಥ ತಲೆಮರೆಸಿಕೊಂಡಿರುವ ಬಗ್ಗೆ ಹಲವು ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ತಕ್ಷಣವೇ ಅವರನ್ನು ಬಂಧಿಸುವಂತೆ ಪೊಲೀಸರನ್ನು ಆಗ್ರಹಿಸಿವೆ. ಪೊಲೀಸರು, ಭಗೀರಥ ವಿರುದ್ಧದ ಪ್ರಕರಣದಲ್ಲಿನ ಸೆಕ್ಷನ್ಗಳನ್ನು ಪರಿಷ್ಕರಿಸಿದ್ದಾರೆ.</p>.<p>ತೆಲಂಗಾಣ ರಕ್ಷಣಾ ಸೇನಾದ ಮುಖ್ಯಸ್ಥೆ ಕೆ.ಕವಿತಾ ಅವರೂ ಈ ಕುರಿತು ಮಾತನಾಡಿ, ‘ಇಂಥ ಆರೋಪಗಳನ್ನು ಹೊತ್ತ ವ್ಯಕ್ತಿಗಳು ದೇಶದಿಂದ ಪರಾರಿಯಾಗಲು ಆಸ್ಪದ ನೀಡುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಹೀಗಾಗಿ ತಕ್ಷಣವೇ ಭಗೀರಥ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-51-1190812174</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>