<p><strong>ತಿರುಪತಿ:</strong> ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಟಿಟಿಡಿಯ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್ಗೆ ಹೈದರಾಬಾದ್ ಮೂಲದ ಭಕ್ತರೊಬ್ಬರು ಇಂದು (ಏ.13) ₹1 ಕೋಟಿ ದೇಣಿಗೆ ನೀಡಿದ್ದಾರೆ.</p><p>ಈ ಕುರಿತು ಪ್ರಕಟಣೆ ಹೊರಡಿಸಿರುವ ದೇವಾಲಯದ ಆಡಳಿತ ಮಂಡಳಿ, ‘ಅಲ್ಲೂರಿ ವರ್ಮಾ ಎಂಬುವರು ಟಿಟಿಡಿ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್ಗೆ ₹1 ಕೋಟಿಗ ಹೆಚ್ಚು ದೇಣಿಗೆ ನೀಡಿದ್ದಾರೆ’ ಎಂದು ತಿಳಿಸಿದೆ. ಪ್ರಾಣದಾನ ಟ್ರಸ್ಟ್ಗೆ ದೇಣಿಗೆ ನೀಡಿದ ಹೈದರಾಬಾದ್ ಮೂಲದ ಅಲ್ಲೂರಿ ವರ್ಮಾ ಅವರು ಉಕ್ಕು ಉತ್ಪಾದನಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. </p><p>ನವೆಂಬರ್ 2001ರಲ್ಲಿ ಸ್ಥಾಪನೆಯಾದ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್, ಹೃದಯ, ಮೂತ್ರಪಿಂಡಗಳು, ಮಿದುಳು, ಕ್ಯಾನ್ಸರ್ ಮತ್ತು ಇತರೆ ಗಂಭೀರ ಸ್ವರೂಪದ ಕಾಯಿಲೆಯುಳ್ಳ ಬಡ ರೋಗಗಿಗಳಿಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ:</strong> ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಟಿಟಿಡಿಯ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್ಗೆ ಹೈದರಾಬಾದ್ ಮೂಲದ ಭಕ್ತರೊಬ್ಬರು ಇಂದು (ಏ.13) ₹1 ಕೋಟಿ ದೇಣಿಗೆ ನೀಡಿದ್ದಾರೆ.</p><p>ಈ ಕುರಿತು ಪ್ರಕಟಣೆ ಹೊರಡಿಸಿರುವ ದೇವಾಲಯದ ಆಡಳಿತ ಮಂಡಳಿ, ‘ಅಲ್ಲೂರಿ ವರ್ಮಾ ಎಂಬುವರು ಟಿಟಿಡಿ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್ಗೆ ₹1 ಕೋಟಿಗ ಹೆಚ್ಚು ದೇಣಿಗೆ ನೀಡಿದ್ದಾರೆ’ ಎಂದು ತಿಳಿಸಿದೆ. ಪ್ರಾಣದಾನ ಟ್ರಸ್ಟ್ಗೆ ದೇಣಿಗೆ ನೀಡಿದ ಹೈದರಾಬಾದ್ ಮೂಲದ ಅಲ್ಲೂರಿ ವರ್ಮಾ ಅವರು ಉಕ್ಕು ಉತ್ಪಾದನಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. </p><p>ನವೆಂಬರ್ 2001ರಲ್ಲಿ ಸ್ಥಾಪನೆಯಾದ ಶ್ರೀ ವೆಂಕಟೇಶ್ವರ ಪ್ರಾಣದಾನ ಟ್ರಸ್ಟ್, ಹೃದಯ, ಮೂತ್ರಪಿಂಡಗಳು, ಮಿದುಳು, ಕ್ಯಾನ್ಸರ್ ಮತ್ತು ಇತರೆ ಗಂಭೀರ ಸ್ವರೂಪದ ಕಾಯಿಲೆಯುಳ್ಳ ಬಡ ರೋಗಗಿಗಳಿಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>