<p class="title"><strong>ನವದೆಹಲಿ</strong>: ಹೈದರಾಬಾದ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್ಕೌಂಟರ್ ಘಟನೆ ಕುರಿತ ತನಿಖಾ ಆಯೋಗಕ್ಕೆ ಸುಪ್ರೀಂ ಕೋರ್ಟ್, ಇನ್ನೂ ಆರು ತಿಂಗಳು ಕಾಲಾವಕಾಶ ನೀಡಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ಸಮಿತಿಯು ಈ ಆದೇಶ ನೀಡಿದೆ. ಉತ್ತರಪ್ರದೇಶದಲ್ಲಿ ನಡೆದಿದ್ದ ಇಂತಹದೇ ಘಟನೆ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣದ ತನಿಖಾ ಆಯೋಗವು ಈಗಾಗಲೇ ವರದಿ ಸಲ್ಲಿಸಿದೆ ಎಂದು ಪೀಠ ಇದೇ ಸಂದರ್ಭದಲ್ಲಿ ಉಲ್ಲೇಖಿಸಿತು.</p>.<p class="title">ಹೈದರಾಬಾದ್ ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ವಿ.ಎಸ್.ಸಿರ್ಪುರ್ಕರ್ ಆಯೋಗದ ಪರ ಹಾಜರಿದ್ದ ವಕೀಲ ಪರಮೇಶ್ವರ್ ಅವರು, ಕೋವಿಡ್ ಪರಿಸ್ಥಿತಿಯ ನಡುವೆ ಒಟ್ಟು 130 ಸಾಕ್ಷಿಗಳ ಹೇಳಿಕೆ ದಾಖಲಿಸಿಬೇಕಿದ್ದರಿಂದ ವಿಳಂಬವಾಗಿದೆ ಎಂದರು. ಆಗ ಆರು ತಿಂಗಳು ಸಮಯ ವಿಸ್ತರಿಸಿ ಪೀಠ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಹೈದರಾಬಾದ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್ಕೌಂಟರ್ ಘಟನೆ ಕುರಿತ ತನಿಖಾ ಆಯೋಗಕ್ಕೆ ಸುಪ್ರೀಂ ಕೋರ್ಟ್, ಇನ್ನೂ ಆರು ತಿಂಗಳು ಕಾಲಾವಕಾಶ ನೀಡಿದೆ.</p>.<p class="title">ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರಿದ್ದ ಸಮಿತಿಯು ಈ ಆದೇಶ ನೀಡಿದೆ. ಉತ್ತರಪ್ರದೇಶದಲ್ಲಿ ನಡೆದಿದ್ದ ಇಂತಹದೇ ಘಟನೆ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣದ ತನಿಖಾ ಆಯೋಗವು ಈಗಾಗಲೇ ವರದಿ ಸಲ್ಲಿಸಿದೆ ಎಂದು ಪೀಠ ಇದೇ ಸಂದರ್ಭದಲ್ಲಿ ಉಲ್ಲೇಖಿಸಿತು.</p>.<p class="title">ಹೈದರಾಬಾದ್ ಪ್ರಕರಣದ ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ವಿ.ಎಸ್.ಸಿರ್ಪುರ್ಕರ್ ಆಯೋಗದ ಪರ ಹಾಜರಿದ್ದ ವಕೀಲ ಪರಮೇಶ್ವರ್ ಅವರು, ಕೋವಿಡ್ ಪರಿಸ್ಥಿತಿಯ ನಡುವೆ ಒಟ್ಟು 130 ಸಾಕ್ಷಿಗಳ ಹೇಳಿಕೆ ದಾಖಲಿಸಿಬೇಕಿದ್ದರಿಂದ ವಿಳಂಬವಾಗಿದೆ ಎಂದರು. ಆಗ ಆರು ತಿಂಗಳು ಸಮಯ ವಿಸ್ತರಿಸಿ ಪೀಠ ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>