<p><strong>ಹೈದರಾಬಾದ್</strong>: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಡಿ ಸಹಾಯಕ ವಿಭಾಗೀಯ ಎಂಜಿನಿಯರ್ (ಎಡಿಇ) ಒಬ್ಬರನ್ನು ಮಂಗಳವಾರ ಬಂಧಿಸಿರುವ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಶೋಧದ ವೇಳೆ ₹ 2.18 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.</p>.<p>ಬಂಧಿತ ಆರೋಪಿಯು ತೆಲಂಗಾಣದ ದಕ್ಷಿಣ ವಿದ್ಯುತ್ ಸರಬರಾಜು ಕಂಪನಿಯ (ಟಿಜಿಎಸ್ಪಿಡಿಸಿಎಲ್) ಸಹಾಯಕ ವಿಭಾಗೀಯ ಎಂಜಿನಿಯರ್ ಆಗಿದ್ದಾರೆ. ಅವರ ಮನೆ ಮತ್ತು ಸಂಬಂಧಿಕರಿಗೆ ಸೇರಿದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಹೇಳಿದ್ದಾರೆ. </p>.<p>ಶೋಧದ ವೇಳೆ ಹಲವು ಆಸ್ತಿಗಳ ದಾಖಲೆಗಳು ಪತ್ತೆಯಾಗಿವೆ. ಒಂದು ಫ್ಲ್ಯಾಟ್, ಜಿ+5 ಮಹಡಿಯ ಕಟ್ಟಡ, ಒಂದು ಕಂಪನಿ ಹೆಸರಿನಲ್ಲಿ 10 ಎಕರೆ ಜಮೀನು, ಆರು ಪ್ರಮುಖ ಪ್ರದೇಶಗಳಲ್ಲಿ ನಿವೇಶಗಳನು, ಒಂದು ಕೃಷಿ ಭೂಮಿ, ನಾಲ್ಕು ಚಕ್ರದ ಎರಡು ವಾಹನ, ಚಿನ್ನದ ಆಭರಣ ಮತ್ತು ಬ್ಯಾಂಕಿನ ಠೇವಣಿಗಳು ಪತ್ತೆಯಾಗಿವೆ ಎಂದು ಅವರು ವಿವರಿಸಿದ್ದಾರೆ. </p>.<p>ಅಧಿಕಾರಿಯ ತನ್ನ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಇಷ್ಟೆಲ್ಲ ಸ್ಥಿರ ಮತ್ತು ಚರ ಆಸ್ತಿಗಳನ್ನು ಗಳಿಸಿದ್ದಾರೆ ಎಂಬುದು ಗೊತ್ತಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಡಿ ಸಹಾಯಕ ವಿಭಾಗೀಯ ಎಂಜಿನಿಯರ್ (ಎಡಿಇ) ಒಬ್ಬರನ್ನು ಮಂಗಳವಾರ ಬಂಧಿಸಿರುವ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಶೋಧದ ವೇಳೆ ₹ 2.18 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.</p>.<p>ಬಂಧಿತ ಆರೋಪಿಯು ತೆಲಂಗಾಣದ ದಕ್ಷಿಣ ವಿದ್ಯುತ್ ಸರಬರಾಜು ಕಂಪನಿಯ (ಟಿಜಿಎಸ್ಪಿಡಿಸಿಎಲ್) ಸಹಾಯಕ ವಿಭಾಗೀಯ ಎಂಜಿನಿಯರ್ ಆಗಿದ್ದಾರೆ. ಅವರ ಮನೆ ಮತ್ತು ಸಂಬಂಧಿಕರಿಗೆ ಸೇರಿದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಹೇಳಿದ್ದಾರೆ. </p>.<p>ಶೋಧದ ವೇಳೆ ಹಲವು ಆಸ್ತಿಗಳ ದಾಖಲೆಗಳು ಪತ್ತೆಯಾಗಿವೆ. ಒಂದು ಫ್ಲ್ಯಾಟ್, ಜಿ+5 ಮಹಡಿಯ ಕಟ್ಟಡ, ಒಂದು ಕಂಪನಿ ಹೆಸರಿನಲ್ಲಿ 10 ಎಕರೆ ಜಮೀನು, ಆರು ಪ್ರಮುಖ ಪ್ರದೇಶಗಳಲ್ಲಿ ನಿವೇಶಗಳನು, ಒಂದು ಕೃಷಿ ಭೂಮಿ, ನಾಲ್ಕು ಚಕ್ರದ ಎರಡು ವಾಹನ, ಚಿನ್ನದ ಆಭರಣ ಮತ್ತು ಬ್ಯಾಂಕಿನ ಠೇವಣಿಗಳು ಪತ್ತೆಯಾಗಿವೆ ಎಂದು ಅವರು ವಿವರಿಸಿದ್ದಾರೆ. </p>.<p>ಅಧಿಕಾರಿಯ ತನ್ನ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಇಷ್ಟೆಲ್ಲ ಸ್ಥಿರ ಮತ್ತು ಚರ ಆಸ್ತಿಗಳನ್ನು ಗಳಿಸಿದ್ದಾರೆ ಎಂಬುದು ಗೊತ್ತಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>