<p><strong>ಹೈದರಾಬಾದ್:</strong> ಭಾರತ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಪರಿಚಿತ ವ್ಯಕ್ತಿಗಳು ಅಮೆರಿಕದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ತೆಲಂಗಾಣದ ಕೆ. ರವಿತೇಜ ಕೊಲೆಯಾದವರು.</p><p>‘2022ರಲ್ಲಿ ರವಿತೇಜ ಅವರು ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ಹೋಗಿದ್ದರು. ಎಂಟು ತಿಂಗಳ ಹಿಂದೆ ಎಂ.ಎಸ್. ಕೋರ್ಸ್ ಮುಗಿಸಿ, ಉದ್ಯೋಗ ಹುಡುಕುತ್ತಿದ್ದರು. ಅವರ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಕರೆತರಲು ಸಹಾಯ ಮಾಡಿ’ ಎಂದು ಅವರ ಕುಟುಂಬದವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.</p><p>‘ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂಬ ಮಾಹಿತಿ ನನಗೆ ಬಂದಿದೆ. ಏನು ಹೇಳಬೇಕು ಎಂದೇ ಗೊತ್ತಾಗುತ್ತಿಲ್ಲ. ಆದಷ್ಟು ಬೇಗ ಶವವನ್ನು ತರಿಸಲು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ’ ಎಂದು ರವಿತೇಜ ಅವರ ತಂದೆ ಸುದ್ದಿಗಾರರಿಗೆ ಹೇಳಿದ್ದಾರೆ.</p><p>‘ಮಗನ ಪಾರ್ಥಿವ ಶರೀರ ಬರುವ ತನಕ ನಾನು ಬದುಕಿರುತ್ತೇನೋ ಇಲ್ಲವೋ ಗೊತ್ತಿಲ್ಲ’ ಎಂದು ಅವರು ಕಣ್ಣೀರು ಹಾಕಿದ್ದಾರೆ.</p><p>ಉದ್ಯೋಗ ದೊರೆತ ಬಳಿಕ ಮನೆಗೆ ಬರುವುದಾಗಿ ರವಿತೇಜ ಅವರು ತಂದೆ ಬಳಿ ಹೇಳಿದ್ದರು ಎಂದು ಅವರ ಕಟುಂಬದವರು ತಿಳಿಸಿದ್ದಾರೆ.</p><p>2024ರ ನವೆಂಬರ್ನಲ್ಲಿ ತೆಲಂಗಾಣದ ಖಮ್ಮಂ ಜಿಲ್ಲೆಯ 22 ವರ್ಷದ ಯುವಕನನ್ನು ಅಮೆರಿಕದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಭಾರತ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಪರಿಚಿತ ವ್ಯಕ್ತಿಗಳು ಅಮೆರಿಕದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ. ತೆಲಂಗಾಣದ ಕೆ. ರವಿತೇಜ ಕೊಲೆಯಾದವರು.</p><p>‘2022ರಲ್ಲಿ ರವಿತೇಜ ಅವರು ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ಹೋಗಿದ್ದರು. ಎಂಟು ತಿಂಗಳ ಹಿಂದೆ ಎಂ.ಎಸ್. ಕೋರ್ಸ್ ಮುಗಿಸಿ, ಉದ್ಯೋಗ ಹುಡುಕುತ್ತಿದ್ದರು. ಅವರ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಕರೆತರಲು ಸಹಾಯ ಮಾಡಿ’ ಎಂದು ಅವರ ಕುಟುಂಬದವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.</p><p>‘ನನ್ನ ಮಗನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂಬ ಮಾಹಿತಿ ನನಗೆ ಬಂದಿದೆ. ಏನು ಹೇಳಬೇಕು ಎಂದೇ ಗೊತ್ತಾಗುತ್ತಿಲ್ಲ. ಆದಷ್ಟು ಬೇಗ ಶವವನ್ನು ತರಿಸಲು ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ’ ಎಂದು ರವಿತೇಜ ಅವರ ತಂದೆ ಸುದ್ದಿಗಾರರಿಗೆ ಹೇಳಿದ್ದಾರೆ.</p><p>‘ಮಗನ ಪಾರ್ಥಿವ ಶರೀರ ಬರುವ ತನಕ ನಾನು ಬದುಕಿರುತ್ತೇನೋ ಇಲ್ಲವೋ ಗೊತ್ತಿಲ್ಲ’ ಎಂದು ಅವರು ಕಣ್ಣೀರು ಹಾಕಿದ್ದಾರೆ.</p><p>ಉದ್ಯೋಗ ದೊರೆತ ಬಳಿಕ ಮನೆಗೆ ಬರುವುದಾಗಿ ರವಿತೇಜ ಅವರು ತಂದೆ ಬಳಿ ಹೇಳಿದ್ದರು ಎಂದು ಅವರ ಕಟುಂಬದವರು ತಿಳಿಸಿದ್ದಾರೆ.</p><p>2024ರ ನವೆಂಬರ್ನಲ್ಲಿ ತೆಲಂಗಾಣದ ಖಮ್ಮಂ ಜಿಲ್ಲೆಯ 22 ವರ್ಷದ ಯುವಕನನ್ನು ಅಮೆರಿಕದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>