ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಮನೋಜ್ ಸಿನ್ಹಾ, ಹೈದರ್ಪೋರಾ ಎನ್ಕೌಂಟರ್ ಪ್ರಕರಣವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ನಿಗದಿತ ಕಾಲಮಿತಿಯೊಳಗೆ ತನಿಖೆ ನಡೆಸಲು ಆದೇಶಿಸಲಾಗಿದ್ದು, ವರದಿ ಬಂದ ಬಳಿಕ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ. ಜಮ್ಮು ಕಾಶ್ಮೀರದ ನಾಗರಿಕರ ಜೀವ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ಅನ್ಯಾಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.