ಇನ್ನೊಂದುಸುದ್ದಿವಾಹಿನಿ ನ್ಯೂಸ್ 24ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಶಾಹೀನ್ಬಾಗ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾತ್ರಮಾತನಾಡುತ್ತಿದೆ. ಯಾಕೆಂದರೆ ಅವರಿಗೆ ದೆಹಲಿ ಚುನಾವಣೆ ಬಗ್ಗೆ ಹೇಳಲು ಬೇರೆ ವಿಷಯವೇ ಇಲ್ಲ. ಹಾಗಾಗಿ ಅವರು ನನ್ನನ್ನು ಭಯೋತ್ಪಾದಕ ಎಂದು ಹೇಳುತ್ತಿದ್ದಾರೆ. ಪ್ರತಿಭಟನಕಾರರೊಂದಿಗೆ ಮಾತನಾಡಿ, ರಸ್ತೆಯಿಂದ ಅವರನ್ನು ತೆರವುಗೊಳಿಸುವುದು ಬಿಜೆಪಿ ನೇತೃತ್ವದ ಕರ್ತವ್ಯ ಎಂದು ಹೇಳಿದ್ದಾರೆ.