ನವದೆಹಲಿ: ಹನುಮಾನ್ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.
बब्बर शेर की दहाड़🔥
— AAP (@AamAadmiParty) May 10, 2024
मैंने कहा था मैं जल्दी आऊंगा, आ गया।
सबसे पहले मैं हनुमान जी के चरणों में वंदना करना चाहता हूं, हनुमान जी के आशीर्वाद से आप सबके बीच हूँ
हम सबको मिलकर तानाशाही से देश को बचाना है, मैं तन मन धन से लड़ रहा हूं और तानाशाही से संघर्ष कर रहा हूं 140 करोड़ लोगों… pic.twitter.com/k074JFQT7J
ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಶುಕ್ರವಾರ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದ ಬಳಿಕ ಸಂಜೆ ಜೈಲಿನಿಂದ ಕೇಜ್ರಿವಾಲ್ ಹೊರಗೆ ಬಂದರು.
ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಿಮಗೆಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಅವರಿಂದಾಗಿ ನಾನು ನಿಮ್ಮ ಮುಂದೆ ಇದ್ದೇನೆ’ ಎಂದು ನುಡಿದರು.
50 दिनों के बाद तिहाड़ जेल से बाहर आए CM @ArvindKejriwal | LIVE #SatyamevJayte #ModiCantStopKejriwal https://t.co/uhSbsQIeph
— AAP (@AamAadmiParty) May 10, 2024
‘ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ. ನಾನು ಸಂಪೂರ್ಣ ಶಕ್ತಿಯಿಂದ ಹೋರಾಡುತ್ತೇನೆ. ನನಗೆ 140 ಕೋಟಿ ಜನರ ಬೆಂಬಲ ಬೇಕು’ ಎಂದು ಕೇಜ್ರಿವಾಲ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.