<p><strong>ಬೆಂಗಳೂರು</strong>: ಕಳೆದ ಶುಕ್ರವಾ ನಡೆದ ಕರ್ನೂಲ್ ಖಾಸಗಿ ಬಸ್ ದುರಂತದ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.</p><p>ಕರ್ನೂಲ್ ಬಸ್ ದುರಂತವನ್ನು ನೆನೆದು ನನ್ನ ಹೃದಯ ಭಾರವಾಗಿದೆ. ಆ ಭಯಾನಕ ದುರಂತ ನಡೆಯಬಾರದಿತ್ತು ಎಂದು ಹೇಳಿದ್ದಾರೆ.</p><p>ತಮ್ಮ ಇನ್ಸ್ಟಾಗ್ರಾಂನಲ್ಲಿ ಮೃತರಿಗೆ ಸಂತಾಪ ಸೂಚಿಸಿರುವ ನಟಿ, ಹೊತ್ತಿ ಉರಿದ ಆ ಬಸ್ನಲ್ಲಿ ಆ ಸಂದರ್ಭದಲ್ಲಿ ಪ್ರಯಾಣಿಕರು ಏನೆಲ್ಲ ಸಂಕಟ ಅನುಭವಿಸಿದರು ಎಂಬುದನ್ನು ಊಹಿಸಿಕೊಳ್ಳುವುದೂ ಕಷ್ಟ ಎಂದು ಕಣ್ಣೀರಿಟ್ಟಿದ್ದಾರೆ.</p><p>ಇದೊಂದು ವಿನಾಶಕಾರಿ ದುರಂತವಾಗಿತ್ತು. ಮುಂದೆ ಇಂತಹ ಘಟನೆಗಳು ನಡೆಯಬಾರದು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಹಾಗೂ ದುರಂತದಲ್ಲಿ ಮಡಿದವರಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.</p><p>ಶುಕ್ರವಾರ ಬೆಳಿಗ್ಗೆ ಕರ್ನೂಲ್ ಬಳಿ ಕಾವೇರಿ ಟ್ರಾವೆಲ್ಸ್ನ ಖಾಸಗಿ ಬಸ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿತ್ತು. ಅದರಲ್ಲಿದ್ದ 20 ಪ್ರಯಾಣಿಕರು ಮೃತಪಟ್ಟಿದ್ದರು.</p>.ಕರ್ನೂಲ್ ಬಸ್ ದುರಂತ: ಬಸ್ ಡಿಕ್ಕಿ ಮುನ್ನವೇ ಬೈಕ್ ಸವಾರ ಸಾವು.ಕರ್ನೂಲ್ ಬಸ್ ದುರಂತ: ಪ್ರಯಾಣಿಕರ ದ್ವಾರದಿಂದ ಹಾರಿ ಪಾರಾಗಿದ್ದ ಚಾಲಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಳೆದ ಶುಕ್ರವಾ ನಡೆದ ಕರ್ನೂಲ್ ಖಾಸಗಿ ಬಸ್ ದುರಂತದ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.</p><p>ಕರ್ನೂಲ್ ಬಸ್ ದುರಂತವನ್ನು ನೆನೆದು ನನ್ನ ಹೃದಯ ಭಾರವಾಗಿದೆ. ಆ ಭಯಾನಕ ದುರಂತ ನಡೆಯಬಾರದಿತ್ತು ಎಂದು ಹೇಳಿದ್ದಾರೆ.</p><p>ತಮ್ಮ ಇನ್ಸ್ಟಾಗ್ರಾಂನಲ್ಲಿ ಮೃತರಿಗೆ ಸಂತಾಪ ಸೂಚಿಸಿರುವ ನಟಿ, ಹೊತ್ತಿ ಉರಿದ ಆ ಬಸ್ನಲ್ಲಿ ಆ ಸಂದರ್ಭದಲ್ಲಿ ಪ್ರಯಾಣಿಕರು ಏನೆಲ್ಲ ಸಂಕಟ ಅನುಭವಿಸಿದರು ಎಂಬುದನ್ನು ಊಹಿಸಿಕೊಳ್ಳುವುದೂ ಕಷ್ಟ ಎಂದು ಕಣ್ಣೀರಿಟ್ಟಿದ್ದಾರೆ.</p><p>ಇದೊಂದು ವಿನಾಶಕಾರಿ ದುರಂತವಾಗಿತ್ತು. ಮುಂದೆ ಇಂತಹ ಘಟನೆಗಳು ನಡೆಯಬಾರದು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಹಾಗೂ ದುರಂತದಲ್ಲಿ ಮಡಿದವರಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.</p><p>ಶುಕ್ರವಾರ ಬೆಳಿಗ್ಗೆ ಕರ್ನೂಲ್ ಬಳಿ ಕಾವೇರಿ ಟ್ರಾವೆಲ್ಸ್ನ ಖಾಸಗಿ ಬಸ್ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿತ್ತು. ಅದರಲ್ಲಿದ್ದ 20 ಪ್ರಯಾಣಿಕರು ಮೃತಪಟ್ಟಿದ್ದರು.</p>.ಕರ್ನೂಲ್ ಬಸ್ ದುರಂತ: ಬಸ್ ಡಿಕ್ಕಿ ಮುನ್ನವೇ ಬೈಕ್ ಸವಾರ ಸಾವು.ಕರ್ನೂಲ್ ಬಸ್ ದುರಂತ: ಪ್ರಯಾಣಿಕರ ದ್ವಾರದಿಂದ ಹಾರಿ ಪಾರಾಗಿದ್ದ ಚಾಲಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>