ಇದಕ್ಕೂ ಮುನ್ನ ‘ಅಪರಾಧ ಪ್ರಕ್ರಿಯೆ (ಗುರುತಿಸುವಿಕೆ) ಮಸೂದೆ’ 2022 ಕುರಿತು ಮಾತನಾಡಿದ ಶಾ, ಈ ಮಸೂದೆಯು ಸದ್ಯ ವಿಜ್ಞಾನ, ನ್ಯಾಯಾಲಯಗಳಲ್ಲಿ ಅಪರಾಧ ಸಾಬೀತುಪಡಿಸುವಿಕೆ, ಕಾನೂನು ಜಾರಿ ಸಂಸ್ಥೆಗಳನ್ನು ಬಲಪಡಿಸುವುದು ಸೇರಿದಂತೆ ವಿವಿಧ ಆಯಾಮಗಳಿಂದ ಗಮನಿಸಿದಾಗ ಹಾಲಿ ಇರುವ ‘ಕೈದಿಗಳ ಗುರುತುಪತ್ತೆ ಕಾಯ್ದೆ 1920’ ಅಪ್ರಸ್ತುತವಾಗಿದೆ. ಈಗಿನ ಸವಾಲುಗಳನ್ನು ಸೂಕ್ತವಾಗಿ ಎದುರಿಸುವ ಜೊತೆಗೆ ವ್ಯವಸ್ಥೆ ಬಲಪಡಿಸಲು ಈ ಮಸೂದೆ ಪೂರಕವಾಗಿದೆ. 1980ರಲ್ಲಿಯೇ ಆಗಿನ ಕಾನೂನು ಆಯೋಗವು ಕಾಯ್ದೆಯ ಪುನರ್ ರಚಿಸುವ ಅಗತ್ಯವಿದೆ ಎಂದು ಹೇಳಿತ್ತು’ ಎಂದರು.