ಈ ಕುರಿತು ಸುದ್ದಿ ಸಂಸ್ಥೆ ಎಎನ್ಐಗೆ ಪ್ರತಿಕ್ರಿಯೆ ನೀಡಿರುವ ಪಾಟೀಲ್, ‘ಸಿಎಂ ಉದ್ಧವ ಠಾಕ್ರೆ ಅವರ ವಿರುದ್ಧದ ಸಚಿವ ನಾರಾಯಣ ರಾಣೆ ಅವರ ಹೇಳಿಕೆಯನ್ನು ನಾನು ಬೆಂಬಲಿಸಲಾರೆ. ಆದರೆ, ಅದೇ ಕಾರಣಕ್ಕೆ ಬಂಧಿಸುವುದು, ಬಂಧನ ವಾರೆಂಟ್ ಜಾರಿ ಮಾಡಿದ್ದರೆ, ರಾಜ್ಯಪಾಲರ ವಿರುದ್ಧದ ಶಿವಸೇನೆ ನಾಯಕರ ಹೇಳಿಕೆಗಳ ಬಗ್ಗೆ ಏನು ಹೇಳಬೇಕು? ಸಾಂವಿಧಾನಿಕ ಸಂಸ್ಥೆಯ ಮುಖ್ಯಸ್ಥರಾದ ರಾಜ್ಯಪಾರ ವಿರುದ್ಧ ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಗಳು ನಿತ್ಯವೂ ಹೇಳಿಕೆಗಳನ್ನು ನೀಡುತ್ತಾರೆ,’ ಎಂದು ಚಂದ್ರಕಾಂತ ಪಾಟೀಲ್ ಹೇಳಿದ್ದಾರೆ.