<p><strong>ನವದೆಹಲಿ</strong>: ‘ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ವಿಶ್ವದ ಯಾವುದೇ ಕಡೆ ಸಂಘರ್ಷ ನಡೆಯಲಿ, ನಾನು ಶಾಂತಿಯ ಪರವಾಗಿ ನಿಲ್ಲುತ್ತೇನೆ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.</p><p>ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತರೂರ್, ‘ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗುತ್ತಿರುವ ಹಾನಿಯು ಎಲ್ಲಾ ಮಿತಿಗಳನ್ನು ಮೀರಿದೆ. ಇದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p><p>‘ಯುದ್ಧ ಸಣ್ಣ ವಿಚಾರವಲ್ಲ, ಇದು ಭಾರತೀಯರು ಸೇರಿದಂತೆ ಜಗತ್ತಿನಾದ್ಯಂತ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ಯುದ್ಧವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ನಡೆಯುವ ಅಂತರರಾಷ್ಟ್ರೀಯ ಪ್ರಯತ್ನಗಳ ಭಾಗವಾಗಿ ನಾವು ಇರಬೇಕು. ಅದರ ನೇತೃತ್ವವನ್ನು ನಾವೇ ವಹಿಸಬೇಕು. ನಮ್ಮೊಂದಿಗೆ ಕೈಜೋಡಿಸಲು ಅನೇಕ ದೇಶಗಳು ಸಿದ್ಧವಿವೆ. ಈ ಯುದ್ಧ ಮುಂದುವರಿಯುವುದನ್ನು ಯಾರೂ ಬಯಸುವುದಿಲ್ಲ’ ಎಂದು ಹೇಳಿದ್ದಾರೆ.</p><p>‘ಎರಡೂ ಕಡೆಯವರು ತಮ್ಮ ಪಟ್ಟುಗಳನ್ನು ಸಡಿಲಿಸುವ ಸಮಯ ಈಗ ಬಂದಿದೆ. ಅವರಿಗೆ ಭಾರತ ಮತ್ತು ಇತರ ದೇಶಗಳ ಸಹಾಯ ಹಾಗೂ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಭಾರತ ಕೆಲಸ ಮಾಡಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>‘ಸಂಘರ್ಷದಿಂದ ತೈಲ ಬೆಲೆಗಳು ಏರುತ್ತಿವೆ. ಇಂಧನ ಪೂರೈಕೆ ಕಡಿಮೆಯಾಗುತ್ತಿದೆ. ಇದರಿಂದ ಪ್ರತಿಯೊಬ್ಬರೂ ಸಮಸ್ಯೆಗಳನ್ನು ಎದುರಿಸುವಂತಾಗಿದೆ’ ಎಂದು ಬೇಸರ ಹೊರಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಪಶ್ಚಿಮ ಏಷ್ಯಾ ಸಂಘರ್ಷ ಸೇರಿದಂತೆ ವಿಶ್ವದ ಯಾವುದೇ ಕಡೆ ಸಂಘರ್ಷ ನಡೆಯಲಿ, ನಾನು ಶಾಂತಿಯ ಪರವಾಗಿ ನಿಲ್ಲುತ್ತೇನೆ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.</p><p>ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತರೂರ್, ‘ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗುತ್ತಿರುವ ಹಾನಿಯು ಎಲ್ಲಾ ಮಿತಿಗಳನ್ನು ಮೀರಿದೆ. ಇದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.</p><p>‘ಯುದ್ಧ ಸಣ್ಣ ವಿಚಾರವಲ್ಲ, ಇದು ಭಾರತೀಯರು ಸೇರಿದಂತೆ ಜಗತ್ತಿನಾದ್ಯಂತ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ಯುದ್ಧವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ನಡೆಯುವ ಅಂತರರಾಷ್ಟ್ರೀಯ ಪ್ರಯತ್ನಗಳ ಭಾಗವಾಗಿ ನಾವು ಇರಬೇಕು. ಅದರ ನೇತೃತ್ವವನ್ನು ನಾವೇ ವಹಿಸಬೇಕು. ನಮ್ಮೊಂದಿಗೆ ಕೈಜೋಡಿಸಲು ಅನೇಕ ದೇಶಗಳು ಸಿದ್ಧವಿವೆ. ಈ ಯುದ್ಧ ಮುಂದುವರಿಯುವುದನ್ನು ಯಾರೂ ಬಯಸುವುದಿಲ್ಲ’ ಎಂದು ಹೇಳಿದ್ದಾರೆ.</p><p>‘ಎರಡೂ ಕಡೆಯವರು ತಮ್ಮ ಪಟ್ಟುಗಳನ್ನು ಸಡಿಲಿಸುವ ಸಮಯ ಈಗ ಬಂದಿದೆ. ಅವರಿಗೆ ಭಾರತ ಮತ್ತು ಇತರ ದೇಶಗಳ ಸಹಾಯ ಹಾಗೂ ಪ್ರೋತ್ಸಾಹದ ಅಗತ್ಯವಿದೆ. ಈ ನಿಟ್ಟಿನಲ್ಲಿ ಭಾರತ ಕೆಲಸ ಮಾಡಬೇಕು ಎಂದು ನಾನು ಭಾವಿಸುತ್ತೇನೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>‘ಸಂಘರ್ಷದಿಂದ ತೈಲ ಬೆಲೆಗಳು ಏರುತ್ತಿವೆ. ಇಂಧನ ಪೂರೈಕೆ ಕಡಿಮೆಯಾಗುತ್ತಿದೆ. ಇದರಿಂದ ಪ್ರತಿಯೊಬ್ಬರೂ ಸಮಸ್ಯೆಗಳನ್ನು ಎದುರಿಸುವಂತಾಗಿದೆ’ ಎಂದು ಬೇಸರ ಹೊರಹಾಕಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>