<p><strong>ಈರೋಡ್ (ತಮಿಳುನಾಡು):</strong> ಮೂರು ದಿನಗಳ ತಮಿಳುನಾಡು ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈರೋಡ್ ರೋಡ್ ಶೋ ವೇಳೆಯಲ್ಲಿ, ತಾನಿಲ್ಲಿ 'ಮನ್ ಕಿ ಬಾತ್' ಹೇಳಲು ಬಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>'ನಾನಿಲ್ಲಿಏನು ಮಾಡಬೇಕೆಂದು ಅಥವಾ ಮನ್ ಕಿ ಬಾತ್ ಹೇಳಲು ಬಂದಿಲ್ಲ. ಬದಲಾಗಿ ನಿಮ್ಮ ಮಾತುಗಳನ್ನು ಆಲಿಸಲು, ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳ ಪರಿಹಾರಕ್ಕಾಗಿ ಸಹಾಯ ಮಾಡಲು ಬಂದಿದ್ದೇನೆ' ಎಂದು ಹೇಳಿದರು.</p>.<p>ಬಿಜೆಪಿ ಸರ್ಕಾರ ಮತ್ತು ರಾಜ್ಯ ಸರ್ಕಾರದ ನೀತಿಗಳಿಂದಾಗಿ ತಮಿಳುನಾಡಿನ ಜನರು ಕಷ್ಟಪಡುತ್ತಿದ್ದಾರೆ. ನಾನು ಅವರಿಗೆ ಸಹಾಯ ಮಾಡಲು ಬಂದಿದ್ದೇನೆ. ನಿಮಗೆಲ್ಲರಿಗೂ ತಿಳಿದಿರುವ ಹಾಗೆಯೇ ರಾಜ್ಯದೊಂದಿಗೆ ನನ್ನ ಕುಟುಂಬ ಇಟ್ಟುಕೊಂಡಿರುವ ಸಂಬಂಧ. ಇಂದಿರಾ ಜೀ ಅವರ ಪ್ರೀತಿ, ನನ್ನ ಅಪ್ಪ (ರಾಜೀವ್ ಗಾಂಧಿ) ಈ ರಾಜ್ಯದಿಂದ ಪಡೆದ ಪ್ರೀತಿ. ಈ ಎಲ್ಲ ಪ್ರೀತಿ ಹಾಗೂ ವಾತ್ಸಲ್ಯಕ್ಕಾಗಿ ನಾನು ನಿಮಗೆ ಚಿರ ಋಣಿಯಾಗಿದ್ದೇನೆ ಎಂದರು.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-slams-central-govt-over-rise-in-fuel-prices-799118.html" itemprop="url">ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ! </a></p>.<p>ದೇಶದಲ್ಲಿ ಕೋವಿಡ್-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.</p>.<p>ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿಯು ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.</p>.<p>ಈ ಮೊದಲು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕುರಿತಂತೆ ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡರು. ತೈಲ ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಈರೋಡ್ (ತಮಿಳುನಾಡು):</strong> ಮೂರು ದಿನಗಳ ತಮಿಳುನಾಡು ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈರೋಡ್ ರೋಡ್ ಶೋ ವೇಳೆಯಲ್ಲಿ, ತಾನಿಲ್ಲಿ 'ಮನ್ ಕಿ ಬಾತ್' ಹೇಳಲು ಬಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.<p>'ನಾನಿಲ್ಲಿಏನು ಮಾಡಬೇಕೆಂದು ಅಥವಾ ಮನ್ ಕಿ ಬಾತ್ ಹೇಳಲು ಬಂದಿಲ್ಲ. ಬದಲಾಗಿ ನಿಮ್ಮ ಮಾತುಗಳನ್ನು ಆಲಿಸಲು, ನಿಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳ ಪರಿಹಾರಕ್ಕಾಗಿ ಸಹಾಯ ಮಾಡಲು ಬಂದಿದ್ದೇನೆ' ಎಂದು ಹೇಳಿದರು.</p>.<p>ಬಿಜೆಪಿ ಸರ್ಕಾರ ಮತ್ತು ರಾಜ್ಯ ಸರ್ಕಾರದ ನೀತಿಗಳಿಂದಾಗಿ ತಮಿಳುನಾಡಿನ ಜನರು ಕಷ್ಟಪಡುತ್ತಿದ್ದಾರೆ. ನಾನು ಅವರಿಗೆ ಸಹಾಯ ಮಾಡಲು ಬಂದಿದ್ದೇನೆ. ನಿಮಗೆಲ್ಲರಿಗೂ ತಿಳಿದಿರುವ ಹಾಗೆಯೇ ರಾಜ್ಯದೊಂದಿಗೆ ನನ್ನ ಕುಟುಂಬ ಇಟ್ಟುಕೊಂಡಿರುವ ಸಂಬಂಧ. ಇಂದಿರಾ ಜೀ ಅವರ ಪ್ರೀತಿ, ನನ್ನ ಅಪ್ಪ (ರಾಜೀವ್ ಗಾಂಧಿ) ಈ ರಾಜ್ಯದಿಂದ ಪಡೆದ ಪ್ರೀತಿ. ಈ ಎಲ್ಲ ಪ್ರೀತಿ ಹಾಗೂ ವಾತ್ಸಲ್ಯಕ್ಕಾಗಿ ನಾನು ನಿಮಗೆ ಚಿರ ಋಣಿಯಾಗಿದ್ದೇನೆ ಎಂದರು.</p>.<p>ಇದನ್ನೂ ಓದಿ:<a href="https://www.prajavani.net/india-news/rahul-gandhi-slams-central-govt-over-rise-in-fuel-prices-799118.html" itemprop="url">ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ! </a></p>.<p>ದೇಶದಲ್ಲಿ ಕೋವಿಡ್-19 ಬಿಕ್ಕಟ್ಟನ್ನು ಎದುರಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.</p>.<p>ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿಯು ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.</p>.<p>ಈ ಮೊದಲು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಕುರಿತಂತೆ ಕೇಂದ್ರ ಸರ್ಕಾರವನ್ನು ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡರು. ತೈಲ ಬೆಲೆ ಏರಿಕೆಯಿಂದ ಜನರು ತತ್ತರಿಸುತ್ತಿದ್ದರೆ, ಮೋದಿ ಸರ್ಕಾರ ತೆರಿಗೆ ಸಂಗ್ರಹದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>