<p><strong>ಮುಂಬೈ</strong>: ‘ಐ ಲವ್ ಮಹಮ್ಮದ್’ ಎಂದು ಬರೆದಿರುವುದನ್ನು ವಿರೋಧಿಸಿ ಮಹಾರಾಷ್ಟ್ರದ ಅಹಲ್ಯಾನಗರದ ರಸ್ತೆಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಕಾರಣ ಪೊಲೀಸರು ಸೋಮವಾರ ಲಾಠಿ ಪ್ರಹಾರ ನಡೆಸಿದ್ದಾರೆ. </p><p>ಪ್ರತಿಭಟನೆ, ರಸ್ತೆ ತಡೆ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕನಿಷ್ಠ 30 ಜನರನ್ನು ಬಂಧಿಸಲಾಗಿದೆ ಎಂದು ಅಹಲ್ಯಾನಗರ (ಅಹ್ಮದ್ನಗರ) ಎಸ್ಪಿ ಸೋಮನಾಥ್ ಘಾರ್ಗೆ ತಿಳಿಸಿದರು. </p><p>ಕೋತ್ವಾಲಿಯ ಕೋಟ್ಲಾದಲ್ಲಿ ‘ಐ ಲವ್ ಮುಹಮ್ಮದ್’ ಎಂದು ರಸ್ತೆ ಮೇಲೆ ಸೋಮವಾರ ಯಾರೋ ಬರೆದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮುಸ್ಲಿಂ ಸಮುದಾಯ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.</p><p>ಬರಹಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು ಕೂಡ ಕೆಲವರು ಪ್ರತಿಭಟನೆ ಮುಂದುವರಿಸಿದ್ದಾರೆ.</p><p>ಬಳಿಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಪೊಲೀಸರು ತಿಳಿಸುತ್ತಿದ್ದಂತೆ ಕಲ್ಲು ತೂರಾಟ ಮಾಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಐ ಲವ್ ಮಹಮ್ಮದ್’ ಎಂದು ಬರೆದಿರುವುದನ್ನು ವಿರೋಧಿಸಿ ಮಹಾರಾಷ್ಟ್ರದ ಅಹಲ್ಯಾನಗರದ ರಸ್ತೆಗಳಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಕಾರಣ ಪೊಲೀಸರು ಸೋಮವಾರ ಲಾಠಿ ಪ್ರಹಾರ ನಡೆಸಿದ್ದಾರೆ. </p><p>ಪ್ರತಿಭಟನೆ, ರಸ್ತೆ ತಡೆ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕನಿಷ್ಠ 30 ಜನರನ್ನು ಬಂಧಿಸಲಾಗಿದೆ ಎಂದು ಅಹಲ್ಯಾನಗರ (ಅಹ್ಮದ್ನಗರ) ಎಸ್ಪಿ ಸೋಮನಾಥ್ ಘಾರ್ಗೆ ತಿಳಿಸಿದರು. </p><p>ಕೋತ್ವಾಲಿಯ ಕೋಟ್ಲಾದಲ್ಲಿ ‘ಐ ಲವ್ ಮುಹಮ್ಮದ್’ ಎಂದು ರಸ್ತೆ ಮೇಲೆ ಸೋಮವಾರ ಯಾರೋ ಬರೆದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮುಸ್ಲಿಂ ಸಮುದಾಯ ಕೋತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.</p><p>ಬರಹಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು ಕೂಡ ಕೆಲವರು ಪ್ರತಿಭಟನೆ ಮುಂದುವರಿಸಿದ್ದಾರೆ.</p><p>ಬಳಿಕ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಪೊಲೀಸರು ತಿಳಿಸುತ್ತಿದ್ದಂತೆ ಕಲ್ಲು ತೂರಾಟ ಮಾಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>