<p><strong>ವಯನಾಡ್</strong>: ‘ನಾನು ಪಕ್ಷ ಹಾಕಿದ ಗೆರೆಯನ್ನು ದಾಟಿಲ್ಲ. ಅಭಿಪ್ರಾಯ ಹೇಳುವಾಗ ಪಕ್ಷದ ಶಿಸ್ತನ್ನು ಉಲ್ಲಂಘಿಸಿಲ್ಲ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಸೋಮವಾರ ಹೇಳಿದ್ದಾರೆ.</p>.<p>ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವುದಕ್ಕೆ ಸಂಬಂಧಿಸಿ ಚರ್ಚಿಸಲು ಸುಲ್ತಾನ್ ಬತೇರಿಯಲ್ಲಿ ಆಯೋಜಿಸಿದ್ದ ಪಕ್ಷದ ಸಭೆ ‘ಲಕ್ಷ್ಯ 2026’ರಲ್ಲಿ ಪಾಲ್ಗೊಂಡ ಬಳಿಕ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ತರೂರ್ ಅವರು ಇತ್ತೀಚೆಗೆ ಪ್ರಕಟಿಸಿರುವ ಲೇಖನಗಳು, ನೀಡಿದ್ದ ಹೇಳಿಕೆಗಳು ಪಕ್ಷ ಎಚ್ಚರಿಕೆಯ ಹೆಜ್ಜೆ ಇಡುವಂತಹ ಪರಿಸ್ಥಿತಿ ನಿರ್ಮಿಸಿದ್ದವು. ಈ ಹಿನ್ನೆಲೆಯಲ್ಲಿ ತರೂರ್ ಅವರು ನೀಡಿರುವ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<p>‘ನಾನು ಪಕ್ಷ ಹಾಕಿದ ಗೆರೆಯನ್ನು ದಾಟಿರುವೆ ಎಂದು ಹೇಳಿದ್ದು ಯಾರು?. ಹಲವಾರು ವಿಚಾರಗಳ ಕುರಿತು ನಾನು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೇನೆ. ಆದರೆ, ಬಹುತೇಕ ಸಂದರ್ಭಗಳಲ್ಲಿ ನನ್ನ ಮತ್ತು ಪಕ್ಷದ ನಿಲುವು ಒಂದೇ ಆಗಿತ್ತು’ ಎಂದು ಅವರು ಹೇಳಿದ್ದಾರೆ.</p>.<p>‘ಸಂಸತ್ನಲ್ಲಿ ಸಚಿವರಿಗೆ ನಾನು ಕೇಳಿರುವ ಪ್ರಶ್ನೆಗಳಲ್ಲಿ ಸ್ಪಷ್ಟತೆ ಇತ್ತು ಹಾಗೂ ಅವುಗಳಿಂದ ಪಕ್ಷವು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್</strong>: ‘ನಾನು ಪಕ್ಷ ಹಾಕಿದ ಗೆರೆಯನ್ನು ದಾಟಿಲ್ಲ. ಅಭಿಪ್ರಾಯ ಹೇಳುವಾಗ ಪಕ್ಷದ ಶಿಸ್ತನ್ನು ಉಲ್ಲಂಘಿಸಿಲ್ಲ’ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಸೋಮವಾರ ಹೇಳಿದ್ದಾರೆ.</p>.<p>ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವುದಕ್ಕೆ ಸಂಬಂಧಿಸಿ ಚರ್ಚಿಸಲು ಸುಲ್ತಾನ್ ಬತೇರಿಯಲ್ಲಿ ಆಯೋಜಿಸಿದ್ದ ಪಕ್ಷದ ಸಭೆ ‘ಲಕ್ಷ್ಯ 2026’ರಲ್ಲಿ ಪಾಲ್ಗೊಂಡ ಬಳಿಕ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ತರೂರ್ ಅವರು ಇತ್ತೀಚೆಗೆ ಪ್ರಕಟಿಸಿರುವ ಲೇಖನಗಳು, ನೀಡಿದ್ದ ಹೇಳಿಕೆಗಳು ಪಕ್ಷ ಎಚ್ಚರಿಕೆಯ ಹೆಜ್ಜೆ ಇಡುವಂತಹ ಪರಿಸ್ಥಿತಿ ನಿರ್ಮಿಸಿದ್ದವು. ಈ ಹಿನ್ನೆಲೆಯಲ್ಲಿ ತರೂರ್ ಅವರು ನೀಡಿರುವ ಈ ಹೇಳಿಕೆಗೆ ಮಹತ್ವ ಬಂದಿದೆ.</p>.<p>‘ನಾನು ಪಕ್ಷ ಹಾಕಿದ ಗೆರೆಯನ್ನು ದಾಟಿರುವೆ ಎಂದು ಹೇಳಿದ್ದು ಯಾರು?. ಹಲವಾರು ವಿಚಾರಗಳ ಕುರಿತು ನಾನು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೇನೆ. ಆದರೆ, ಬಹುತೇಕ ಸಂದರ್ಭಗಳಲ್ಲಿ ನನ್ನ ಮತ್ತು ಪಕ್ಷದ ನಿಲುವು ಒಂದೇ ಆಗಿತ್ತು’ ಎಂದು ಅವರು ಹೇಳಿದ್ದಾರೆ.</p>.<p>‘ಸಂಸತ್ನಲ್ಲಿ ಸಚಿವರಿಗೆ ನಾನು ಕೇಳಿರುವ ಪ್ರಶ್ನೆಗಳಲ್ಲಿ ಸ್ಪಷ್ಟತೆ ಇತ್ತು ಹಾಗೂ ಅವುಗಳಿಂದ ಪಕ್ಷವು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>