‘ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ ಆದೇಶದಿಂದ ನಮಗೆ ನಿರಾಸೆಯಾಗಿದೆ. ಈ ವಿಷಯದಲ್ಲಿ ನ್ಯಾಯಮಂಡಳಿಯು ತನ್ನದೇ ಆದ ಪೂರ್ವನಿದರ್ಶನಗಳನ್ನು ಕೂಡ ಅನುಸರಿಸಿಲ್ಲ. ಚುನಾವಣೆ ದಿನಾಂಕ ಪ್ರಕಟಗೊಳ್ಳಲು ಕೆಲವೇ ದಿನಗಳಿರುವಾಗ ರಾಷ್ಟ್ರೀಯ ಪಕ್ಷವೊಂದರ ಮೇಲೆ ಇಂತಹ ಕ್ರಮ ಕೈಗೊಂಡಿರುವುದು ಸರಿಯಲ್ಲ’ ಎಂದು ಎಐಸಿಸಿ ಕಾನೂನು ವಿಭಾಗದ ಮುಖ್ಯಸ್ಥ ವಿವೇಕ್ ತಂಖಾ ಪ್ರತಿಕ್ರಿಯಿಸಿದ್ದಾರೆ.