ಮಾಜಿ ಕೇಂದ್ರ ಸಚಿವ ಮತ್ತು ಮುಂಬೈ ದಕ್ಷಿಣದ ಮಾಜಿ ಸಂಸದ ಮಿಲಿಂದ್ ದೇವರ ಅವರು ಕಳೆದ ತಿಂಗಳು ಕಾಂಗ್ರೆಸ್ ತೊರೆದು, ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಸೇರಿ ಹೊಸ ರಾಜಕೀಯ ಪಯಣ ಆರಂಭಿಸಿದ್ದಾರೆ. ಹಿಮಂತ ಬಿಸ್ವ ಶರ್ಮ ಅವರು 2014ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ, ಸದ್ಯ ಅಸ್ಸಾಂ ಮುಖ್ಯಮಂತ್ರಿಯಾಗಿದ್ದಾರೆ.