<p><strong>ಮುಂಬೈ:</strong> ‘2029ರವರೆಗೂ ಮಹಾರಾಷ್ಟ್ರದಲ್ಲಿ ನಾನೇ ಮುಖ್ಯಮಂತ್ರಿ ಆಗಿರಲಿದ್ದೇನೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.</p>.<p>ಈ ಹೇಳಿಕೆ ಮೂಲಕ ಆಡಳಿತಾರೂಢ ‘ಮಹಾಯುತಿ’ಯಲ್ಲಿ ಮೈತ್ರಿ ಪಕ್ಷಗಳಾಗಿರುವ, ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಅಧಿಕಾರ ಹಸ್ತಾಂತರ ಸಾಧ್ಯವಿಲ್ಲ ಎಂಬ ಸಂದೇಶವನ್ನು ಫಡಣವೀಸ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. </p>.<p>ರಾಷ್ಟ್ರ ರಾಜಕಾರಣಕ್ಕೆ ಫಡಣವೀಸ್ ಪದಾರ್ಪಣೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಪಕ್ಷದ ಬಗ್ಗೆ ನಾನು ತಿಳಿದಿರುವಂತೆ ಆ ವಿಚಾರ ಇನ್ನೂ ದೂರದಲ್ಲಿದೆ. ಸದ್ಯಕ್ಕೆ 2029ರವರೆಗೂ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯಲಿದ್ದೇನೆ’ ಎಂದಿದ್ದಾರೆ. </p>.<p>ಫಡಣವೀಸ್ ಹೇಳಿಕೆ ಬಗ್ಗೆ ಪ್ರತಿಪಕ್ಷಗಳ ಒಕ್ಕೂಟವಾಗಿರುವ ಮಹಾ ವಿಕಾಸ ಅಘಾಡಿ ನಾಯಕರು ಕೂಡ ಟೀಕೆಗಳನ್ನು ಮಾಡಿದ್ದಾರೆ.</p>.<p>‘ಏಕನಾಥ ಶಿಂಧೆ ಸಾಹೇಬರೊಂದಿಗೆ ನೇರವಾಗಿ ಮಾತನಾಡಲು ಸಾಧ್ಯವಾಗದೇ ಪರೋಕ್ಷವಾಗಿ ಅವರಿಗೆ ವಿಚಾರ ಮುಟ್ಟಿಸಲು ಫಡಣವೀಸ್ ಈ ಹೇಳಿಕೆ ನೀಡಿದ್ದಾರೆ. ಅಲ್ಲದೇ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡದಲ್ಲಿ ಆದಂತೆ ಕೇಂದ್ರದ ಒತ್ತಡಕ್ಕೆ ಮಣಿದು ತಾನು ತನ್ನ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೂ ಈ ಹೇಳಿಕೆ ಮೂಲಕವೇ ಸಂದೇಶ ನೀಡಿದ್ದಾರೆ’ ಎಂದು ಕಾಂಗ್ರೆಸ್ನ ಹಿರಿಯ ವಕ್ತಾರ ಸಚಿನ್ ಸಾವಂತ್ ಹೇಳಿದ್ದಾರೆ.</p>.<p>ಫಡಣವೀಸ್ ಅವರು ತಮ್ಮ ಇಬ್ಬರು ಉಪಮುಖ್ಯಮಂತ್ರಿಗಳಿಗೆ ಸಂದೇಶ ನೀಡಲು ಈ ಹೇಳಿಕೆ ನೀಡಿದ್ದಾರೆಯೇ ಎನ್ನುವುದನ್ನು ತಿಳಿಯಬೇಕಿದೆ ಎಂದು ಎನ್ಸಿಪಿ (ಎಸ್ಪಿ) ವಕ್ತಾರ ಕ್ಲೈಡ್ ಕ್ಯಾಸ್ಟ್ರೋ ಕೂಡ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘2029ರವರೆಗೂ ಮಹಾರಾಷ್ಟ್ರದಲ್ಲಿ ನಾನೇ ಮುಖ್ಯಮಂತ್ರಿ ಆಗಿರಲಿದ್ದೇನೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.</p>.<p>ಈ ಹೇಳಿಕೆ ಮೂಲಕ ಆಡಳಿತಾರೂಢ ‘ಮಹಾಯುತಿ’ಯಲ್ಲಿ ಮೈತ್ರಿ ಪಕ್ಷಗಳಾಗಿರುವ, ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಅಧಿಕಾರ ಹಸ್ತಾಂತರ ಸಾಧ್ಯವಿಲ್ಲ ಎಂಬ ಸಂದೇಶವನ್ನು ಫಡಣವೀಸ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. </p>.<p>ರಾಷ್ಟ್ರ ರಾಜಕಾರಣಕ್ಕೆ ಫಡಣವೀಸ್ ಪದಾರ್ಪಣೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಪಕ್ಷದ ಬಗ್ಗೆ ನಾನು ತಿಳಿದಿರುವಂತೆ ಆ ವಿಚಾರ ಇನ್ನೂ ದೂರದಲ್ಲಿದೆ. ಸದ್ಯಕ್ಕೆ 2029ರವರೆಗೂ ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯಾಗಿ ನಾನೇ ಮುಂದುವರಿಯಲಿದ್ದೇನೆ’ ಎಂದಿದ್ದಾರೆ. </p>.<p>ಫಡಣವೀಸ್ ಹೇಳಿಕೆ ಬಗ್ಗೆ ಪ್ರತಿಪಕ್ಷಗಳ ಒಕ್ಕೂಟವಾಗಿರುವ ಮಹಾ ವಿಕಾಸ ಅಘಾಡಿ ನಾಯಕರು ಕೂಡ ಟೀಕೆಗಳನ್ನು ಮಾಡಿದ್ದಾರೆ.</p>.<p>‘ಏಕನಾಥ ಶಿಂಧೆ ಸಾಹೇಬರೊಂದಿಗೆ ನೇರವಾಗಿ ಮಾತನಾಡಲು ಸಾಧ್ಯವಾಗದೇ ಪರೋಕ್ಷವಾಗಿ ಅವರಿಗೆ ವಿಚಾರ ಮುಟ್ಟಿಸಲು ಫಡಣವೀಸ್ ಈ ಹೇಳಿಕೆ ನೀಡಿದ್ದಾರೆ. ಅಲ್ಲದೇ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡದಲ್ಲಿ ಆದಂತೆ ಕೇಂದ್ರದ ಒತ್ತಡಕ್ಕೆ ಮಣಿದು ತಾನು ತನ್ನ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಕೇಂದ್ರ ಸರ್ಕಾರಕ್ಕೂ ಈ ಹೇಳಿಕೆ ಮೂಲಕವೇ ಸಂದೇಶ ನೀಡಿದ್ದಾರೆ’ ಎಂದು ಕಾಂಗ್ರೆಸ್ನ ಹಿರಿಯ ವಕ್ತಾರ ಸಚಿನ್ ಸಾವಂತ್ ಹೇಳಿದ್ದಾರೆ.</p>.<p>ಫಡಣವೀಸ್ ಅವರು ತಮ್ಮ ಇಬ್ಬರು ಉಪಮುಖ್ಯಮಂತ್ರಿಗಳಿಗೆ ಸಂದೇಶ ನೀಡಲು ಈ ಹೇಳಿಕೆ ನೀಡಿದ್ದಾರೆಯೇ ಎನ್ನುವುದನ್ನು ತಿಳಿಯಬೇಕಿದೆ ಎಂದು ಎನ್ಸಿಪಿ (ಎಸ್ಪಿ) ವಕ್ತಾರ ಕ್ಲೈಡ್ ಕ್ಯಾಸ್ಟ್ರೋ ಕೂಡ ಪ್ರತಿಕ್ರಿಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>