<p class="title"><strong>ನವದೆಹಲಿ: </strong>ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಚುನಾವಣೆಗೆ ಒಲವು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಪಕ್ಷವನ್ನು ಯಾರು ಮುನ್ನಡೆಸಬೇಕೆಂದು ಕಾರ್ಯಕರ್ತರು ನಿರ್ಧರಿಸುವರು. ಪಕ್ಷ ನನಗೆ ಏನು ಮಾಡಲು ಹೇಳುತ್ತದೋ ನಾನು ಅದನ್ನೇ ಮಾಡುವೆ’ ಎಂದು ಹೇಳಿದ್ದಾರೆ.</p>.<p class="bodytext">ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ‘ಪಕ್ಷದೊಳಗಿನ ಸಾಂಸ್ಥಿಕ ಚುನಾವಣೆಗಳು ಸರಿಯಾದ ಸಮಯಕ್ಕೆ ನಡೆಯಲಿವೆ. ಅದರೆ, ಈಗ ಆಗಬೇಕಿರುವುದು ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವುದು ಹಾಗೂ ಜನರ ಜೀವವನ್ನು ಉಳಿಸುವ ಕೆಲಸ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p class="bodytext">ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿಯನ್ನು ವಹಿಸಿಕೊಂಡ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹೊರಬಂದಿದ್ದರು.</p>.<p class="bodytext">ಪಕ್ಷವನ್ನು ಮುನ್ನಡೆಸಲು ಸಿದ್ಧರಿದ್ದೀರಾ ಎನ್ನುವ ಪ್ರಶ್ನೆಗೆ ‘ಪಕ್ಷವನ್ನು ಯಾರು ಮುನ್ನಡೆಸಬೇಕು ಎಂದು ಪಕ್ಷದ ಕಾರ್ಯಕರ್ತರು ನಿರ್ಧರಿಸಬೇಕು. ಪಕ್ಷವು ಏನು ಮಾಡಬೇಕೆಂದು ನಾನು ಬಯಸುತ್ತೇನೋ ಅದನ್ನು ಮಾಡುತ್ತೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಚುನಾವಣೆಗೆ ಒಲವು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಪಕ್ಷವನ್ನು ಯಾರು ಮುನ್ನಡೆಸಬೇಕೆಂದು ಕಾರ್ಯಕರ್ತರು ನಿರ್ಧರಿಸುವರು. ಪಕ್ಷ ನನಗೆ ಏನು ಮಾಡಲು ಹೇಳುತ್ತದೋ ನಾನು ಅದನ್ನೇ ಮಾಡುವೆ’ ಎಂದು ಹೇಳಿದ್ದಾರೆ.</p>.<p class="bodytext">ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ‘ಪಕ್ಷದೊಳಗಿನ ಸಾಂಸ್ಥಿಕ ಚುನಾವಣೆಗಳು ಸರಿಯಾದ ಸಮಯಕ್ಕೆ ನಡೆಯಲಿವೆ. ಅದರೆ, ಈಗ ಆಗಬೇಕಿರುವುದು ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವುದು ಹಾಗೂ ಜನರ ಜೀವವನ್ನು ಉಳಿಸುವ ಕೆಲಸ’ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<p class="bodytext">ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿಯನ್ನು ವಹಿಸಿಕೊಂಡ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಹೊರಬಂದಿದ್ದರು.</p>.<p class="bodytext">ಪಕ್ಷವನ್ನು ಮುನ್ನಡೆಸಲು ಸಿದ್ಧರಿದ್ದೀರಾ ಎನ್ನುವ ಪ್ರಶ್ನೆಗೆ ‘ಪಕ್ಷವನ್ನು ಯಾರು ಮುನ್ನಡೆಸಬೇಕು ಎಂದು ಪಕ್ಷದ ಕಾರ್ಯಕರ್ತರು ನಿರ್ಧರಿಸಬೇಕು. ಪಕ್ಷವು ಏನು ಮಾಡಬೇಕೆಂದು ನಾನು ಬಯಸುತ್ತೇನೋ ಅದನ್ನು ಮಾಡುತ್ತೇನೆ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>