<p><strong>ನವದೆಹಲಿ:</strong> ರಕ್ಷಣಾ ಕ್ಷೇತ್ರದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ವ್ಯವಸ್ಥೆಯು ಕಡಿಮೆ ಸಾಮರ್ಥ್ಯ ಹೊಂದಿದ್ದರೂ ಭಾರತೀಯ ವಾಯುಪಡೆಯು ಅದಕ್ಕೇ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಏರ್ಚೀಫ್ ಮಾರ್ಷಲ್ ಎ.ಪಿ ಸಿಂಗ್ ಶುಕ್ರವಾರ ಹೇಳಿದರು.</p>.<p>ಕಾರ್ಯಕ್ರಮವೊಂದರಲ್ಲಿ ‘ಭಾರತ 2047; ಯುದ್ಧದಲ್ಲಿ ಆತ್ಮನಿರ್ಭರತೆ’ ವಿಷಯದ ಬಗ್ಗೆ ಮಾತನಾಡಿದ ಅವರು, ‘ಪ್ರತಿ ವರ್ಷ ಭಾರತದಲ್ಲಿ ಕನಿಷ್ಠ 35–40 ಯುದ್ಧ ವಿಮಾನಗಳು ತಯಾರಾಗಬೇಕಾದ ಅಗತ್ಯವಿದೆ. ಈ ಗುರಿಯು ಅಸಾಧ್ಯವಾದುದೇನಲ್ಲ’ ಎಂದು ಹೇಳಿದರು.</p>.<p>‘ದೇಶೀಯವಾಗಿ ಅಭಿವೃದ್ಧಿಪಡಿಸಿದ ವ್ಯವಸ್ಥೆಯು ಕಡಿಮೆ ಸಾಮರ್ಥ್ಯ ಹೊಂದಿದ್ದರೂ, ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಿರುವ ಸಾಧನಗಳಿಗಿಂತ ಶೇ 90ರಷ್ಟು ಅಥವಾ 85ರಷ್ಟು ಸಾಮರ್ಥ್ಯ ಹೊಂದಿದ್ದರೂ ದೇಶೀಯವಾಗಿ ಅಭಿವೃದ್ಧಿಪಡಿಸಿರುವುದಕ್ಕೇ ಆದ್ಯತೆ ನೀಡುತ್ತೇನೆ’ ಎಂದು ತಿಳಿಸಿದರು.</p>.<p>ರಾತ್ರೋ ರಾತ್ರಿ ಸ್ವಾವಲಂಬನೆ ಸಾಧ್ಯವಿಲ್ಲ. ಅದಕ್ಕೆ ಸಮಯ ಮತ್ತು ಬೆಂಬಲ ಬೇಕಾಗುತ್ತದೆ. ಹೀಗಾಗಿ ಯಾವುದೇ ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗೆ ಭಾರತೀಯ ವಾಯುಪಡೆಯು ಬದ್ಧವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಕ್ಷಣಾ ಕ್ಷೇತ್ರದಲ್ಲಿ ದೇಶೀಯವಾಗಿ ಅಭಿವೃದ್ಧಿಪಡಿಸಿದ ವ್ಯವಸ್ಥೆಯು ಕಡಿಮೆ ಸಾಮರ್ಥ್ಯ ಹೊಂದಿದ್ದರೂ ಭಾರತೀಯ ವಾಯುಪಡೆಯು ಅದಕ್ಕೇ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಏರ್ಚೀಫ್ ಮಾರ್ಷಲ್ ಎ.ಪಿ ಸಿಂಗ್ ಶುಕ್ರವಾರ ಹೇಳಿದರು.</p>.<p>ಕಾರ್ಯಕ್ರಮವೊಂದರಲ್ಲಿ ‘ಭಾರತ 2047; ಯುದ್ಧದಲ್ಲಿ ಆತ್ಮನಿರ್ಭರತೆ’ ವಿಷಯದ ಬಗ್ಗೆ ಮಾತನಾಡಿದ ಅವರು, ‘ಪ್ರತಿ ವರ್ಷ ಭಾರತದಲ್ಲಿ ಕನಿಷ್ಠ 35–40 ಯುದ್ಧ ವಿಮಾನಗಳು ತಯಾರಾಗಬೇಕಾದ ಅಗತ್ಯವಿದೆ. ಈ ಗುರಿಯು ಅಸಾಧ್ಯವಾದುದೇನಲ್ಲ’ ಎಂದು ಹೇಳಿದರು.</p>.<p>‘ದೇಶೀಯವಾಗಿ ಅಭಿವೃದ್ಧಿಪಡಿಸಿದ ವ್ಯವಸ್ಥೆಯು ಕಡಿಮೆ ಸಾಮರ್ಥ್ಯ ಹೊಂದಿದ್ದರೂ, ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಿರುವ ಸಾಧನಗಳಿಗಿಂತ ಶೇ 90ರಷ್ಟು ಅಥವಾ 85ರಷ್ಟು ಸಾಮರ್ಥ್ಯ ಹೊಂದಿದ್ದರೂ ದೇಶೀಯವಾಗಿ ಅಭಿವೃದ್ಧಿಪಡಿಸಿರುವುದಕ್ಕೇ ಆದ್ಯತೆ ನೀಡುತ್ತೇನೆ’ ಎಂದು ತಿಳಿಸಿದರು.</p>.<p>ರಾತ್ರೋ ರಾತ್ರಿ ಸ್ವಾವಲಂಬನೆ ಸಾಧ್ಯವಿಲ್ಲ. ಅದಕ್ಕೆ ಸಮಯ ಮತ್ತು ಬೆಂಬಲ ಬೇಕಾಗುತ್ತದೆ. ಹೀಗಾಗಿ ಯಾವುದೇ ಸಂಶೋಧನೆ ಮತ್ತು ಅಭಿವೃದ್ಧಿ ಯೋಜನೆಗೆ ಭಾರತೀಯ ವಾಯುಪಡೆಯು ಬದ್ಧವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>