<p><strong>ಡೆಹ್ರಾಡೂನ್</strong>: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಅರಣ್ಯ ಪ್ರದೇಶವನ್ನು ವ್ಯಾಪಿಸಿರುವ ಕಾಳ್ಗಿಚ್ಚು ನಂದಿಸಲು ರಾಜ್ಯ ಸರ್ಕಾರ ವಾಯುಪಡೆಯ ಹೆಲಿಕಾಪ್ಟರ್ ನೆರವು ಪಡೆದಿದೆ. </p>.<p>ಬೆಂಕಿಯು ಪೈನ್ಸ್ ವಲಯದ ಹೈಕೋರ್ಟ್ ಕಾಲೊನಿ ಪ್ರದೇಶವನ್ನೂ ವ್ಯಾಪಿಸಿದ್ದು, ಪರಿಸ್ಥಿತಿಯು ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಎಂಐ–17 ಹೆಲಿಕಾಪ್ಟರ್ ನೆರವಿನಿಂದ ಭೀಮ್ತಾಲ್ ಕೆರೆಯಿಂದ ನೀರು ಸಂಗ್ರಹಿಸಿ ಬೆಂಕಿ ವ್ಯಾಪಿಸಿರುವ ಪೈನ್ಸ್, ಭೂಮಿಯಾಧರ್, ನಾರಾಯಣ ನಗರ, ಭವಾಲಿ, ರಾಮಗಢ ಪ್ರದೇಶಗಳಲ್ಲಿ ಸಿಂಪಡಿಸಲಾಗುತ್ತಿದೆ.</p>.<p>ಕಾಳ್ಗಿಚ್ಚು ನಂದಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದಷ್ಟು ಶೀಘ್ರದಲ್ಲಿಯೇ ಬೆಂಕಿ ನಿಯಂತ್ರಣಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.</p>.<p>‘ಈಗಾಗಲೇ ವಾಯುಪಡೆ ಹೆಲಿಕಾಪ್ಟರ್ನ ಸೇವೆ ಪಡೆಯಲಾಗಿದೆ. ಬೆಂಕಿ ಹೊತ್ತಿಸಲು ಯತ್ನಿಸಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಶೀಘ್ರದಲ್ಲಿಯೇ ಅರಣ್ಯಾಧಿಕಾರಿಗಳ ಸಭೆಯನ್ನು ಕರೆಯಲಿದ್ದೇನೆ‘ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್</strong>: ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಅರಣ್ಯ ಪ್ರದೇಶವನ್ನು ವ್ಯಾಪಿಸಿರುವ ಕಾಳ್ಗಿಚ್ಚು ನಂದಿಸಲು ರಾಜ್ಯ ಸರ್ಕಾರ ವಾಯುಪಡೆಯ ಹೆಲಿಕಾಪ್ಟರ್ ನೆರವು ಪಡೆದಿದೆ. </p>.<p>ಬೆಂಕಿಯು ಪೈನ್ಸ್ ವಲಯದ ಹೈಕೋರ್ಟ್ ಕಾಲೊನಿ ಪ್ರದೇಶವನ್ನೂ ವ್ಯಾಪಿಸಿದ್ದು, ಪರಿಸ್ಥಿತಿಯು ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಎಂಐ–17 ಹೆಲಿಕಾಪ್ಟರ್ ನೆರವಿನಿಂದ ಭೀಮ್ತಾಲ್ ಕೆರೆಯಿಂದ ನೀರು ಸಂಗ್ರಹಿಸಿ ಬೆಂಕಿ ವ್ಯಾಪಿಸಿರುವ ಪೈನ್ಸ್, ಭೂಮಿಯಾಧರ್, ನಾರಾಯಣ ನಗರ, ಭವಾಲಿ, ರಾಮಗಢ ಪ್ರದೇಶಗಳಲ್ಲಿ ಸಿಂಪಡಿಸಲಾಗುತ್ತಿದೆ.</p>.<p>ಕಾಳ್ಗಿಚ್ಚು ನಂದಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದಷ್ಟು ಶೀಘ್ರದಲ್ಲಿಯೇ ಬೆಂಕಿ ನಿಯಂತ್ರಣಕ್ಕೆ ಬರುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.</p>.<p>‘ಈಗಾಗಲೇ ವಾಯುಪಡೆ ಹೆಲಿಕಾಪ್ಟರ್ನ ಸೇವೆ ಪಡೆಯಲಾಗಿದೆ. ಬೆಂಕಿ ಹೊತ್ತಿಸಲು ಯತ್ನಿಸಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಶೀಘ್ರದಲ್ಲಿಯೇ ಅರಣ್ಯಾಧಿಕಾರಿಗಳ ಸಭೆಯನ್ನು ಕರೆಯಲಿದ್ದೇನೆ‘ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>