<p><strong>ನವದೆಹಲಿ:</strong> ಪಾಕಿಸ್ತಾನದ ಕಿರಾನಾ ಬೆಟ್ಟದಲ್ಲಿರುವ ಅಣ್ವಸ್ತ್ರ ನೆಲೆ ಮೇಲೆ ಭಾರತ ದಾಳಿ ಮಾಡಿದೆ ಎಂಬ ವದಂತಿಗಳನ್ನು ಭಾರತೀಯ ವಾಯುಪಡೆ (ಐಎಎಫ್) ಸೋಮವಾರ ತಳ್ಳಿಹಾಕಿದೆ. </p>.<p>ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗೋಷ್ಠಿಯಲ್ಲಿ ಪ್ರತಿನಿಧಿಯೊಬ್ಬರು, ಪಾಕಿಸ್ತಾನದ ಅಣ್ವಸ್ತ್ರ ಸಂಗ್ರಹ ಇರುವ ಕಿರಾನಾ ಬೆಟ್ಟದ ಮೇಲೆ ಭಾರತ ದಾಳಿ ನಡೆಸಿದೆ ಎಂಬ ಚರ್ಚೆ ನಡೆಯುತ್ತಿದೆ. ಆ ಪ್ರದೇಶದಲ್ಲಿ ದಾಳಿ ನಡೆದಿದೆಯೇ? ಎಂದು ಪ್ರಶ್ನೆ ಮಾಡಿದರು.</p>.<p>ಇದಕ್ಕೆ ಉತ್ತರಿಸಿದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ, ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, 'ಅಲ್ಲಿ ಏನೇ ಇರಲಿ. ನಾವು ಆ ಬೆಟ್ಟಗಳ ಮೇಲೆ ದಾಳಿ ಮಾಡಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾದಲ್ಲಿರುವ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿದೆ. ಈ ವಾಯು ನೆಲೆ ಕಿರಾನಾ ಬೆಟ್ಟಗಳೊಂದಿಗೆ ಸಂಪರ್ಕ ಹೊಂದಿದೆ. ಕಿರಾನಾ ಬೆಟ್ಟದಲ್ಲಿ ಪಾಕ್ ಅಣ್ವಸ್ತ್ರ ನೆಲೆ ಇದೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳ ಚರ್ಚೆಯಾಗುತ್ತಿವೆ. </p> .<p>ಸುದ್ದಿಗೋಷ್ಠಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಕುರಿತು ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಯಿ, ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಆಡ್ಮಿರಲ್ ಎ.ಎನ್. ಪ್ರಮೋದ್ ಹಾಜರಿದ್ದರು.</p>.'ಆಪರೇಷನ್ ಸಿಂಧೂರ' ಭಯೋತ್ಪಾದಕರಿಗೆ ನೀಡಿದ ತಕ್ಕ ಉತ್ತರ: ಸೇನೆ ಶ್ಲಾಘಿಸಿದ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಕಿಸ್ತಾನದ ಕಿರಾನಾ ಬೆಟ್ಟದಲ್ಲಿರುವ ಅಣ್ವಸ್ತ್ರ ನೆಲೆ ಮೇಲೆ ಭಾರತ ದಾಳಿ ಮಾಡಿದೆ ಎಂಬ ವದಂತಿಗಳನ್ನು ಭಾರತೀಯ ವಾಯುಪಡೆ (ಐಎಎಫ್) ಸೋಮವಾರ ತಳ್ಳಿಹಾಕಿದೆ. </p>.<p>ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗೋಷ್ಠಿಯಲ್ಲಿ ಪ್ರತಿನಿಧಿಯೊಬ್ಬರು, ಪಾಕಿಸ್ತಾನದ ಅಣ್ವಸ್ತ್ರ ಸಂಗ್ರಹ ಇರುವ ಕಿರಾನಾ ಬೆಟ್ಟದ ಮೇಲೆ ಭಾರತ ದಾಳಿ ನಡೆಸಿದೆ ಎಂಬ ಚರ್ಚೆ ನಡೆಯುತ್ತಿದೆ. ಆ ಪ್ರದೇಶದಲ್ಲಿ ದಾಳಿ ನಡೆದಿದೆಯೇ? ಎಂದು ಪ್ರಶ್ನೆ ಮಾಡಿದರು.</p>.<p>ಇದಕ್ಕೆ ಉತ್ತರಿಸಿದ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ, ಏರ್ ಮಾರ್ಷಲ್ ಎ.ಕೆ. ಭಾರ್ತಿ ಅವರು, 'ಅಲ್ಲಿ ಏನೇ ಇರಲಿ. ನಾವು ಆ ಬೆಟ್ಟಗಳ ಮೇಲೆ ದಾಳಿ ಮಾಡಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾದಲ್ಲಿರುವ ವಾಯುನೆಲೆಯ ಮೇಲೆ ಭಾರತ ದಾಳಿ ನಡೆಸಿದೆ. ಈ ವಾಯು ನೆಲೆ ಕಿರಾನಾ ಬೆಟ್ಟಗಳೊಂದಿಗೆ ಸಂಪರ್ಕ ಹೊಂದಿದೆ. ಕಿರಾನಾ ಬೆಟ್ಟದಲ್ಲಿ ಪಾಕ್ ಅಣ್ವಸ್ತ್ರ ನೆಲೆ ಇದೆ ಎಂಬ ಊಹಾಪೋಹಗಳು ಸಾಮಾಜಿಕ ಜಾಲತಾಣಗಳ ಚರ್ಚೆಯಾಗುತ್ತಿವೆ. </p> .<p>ಸುದ್ದಿಗೋಷ್ಠಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಕುರಿತು ಮಿಲಿಟರಿ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಯಿ, ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಆಡ್ಮಿರಲ್ ಎ.ಎನ್. ಪ್ರಮೋದ್ ಹಾಜರಿದ್ದರು.</p>.'ಆಪರೇಷನ್ ಸಿಂಧೂರ' ಭಯೋತ್ಪಾದಕರಿಗೆ ನೀಡಿದ ತಕ್ಕ ಉತ್ತರ: ಸೇನೆ ಶ್ಲಾಘಿಸಿದ ಸಿಂಗ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>