<p><strong>ಜಾಮ್ನಗರ(ಗುಜರಾತ್)</strong>:‘ಅಫ್ಗಾನಿಸ್ತಾನದ ಕಾಬೂಲ್ನಿಂದ 120 ಮಂದಿ ಭಾರತೀಯರನ್ನು ಹೊತ್ತ ಐಎಎಫ್ ವಿಮಾನವು ಜಾಮ್ನಗರಕ್ಕೆ ಮಂಗಳವಾರ ಬಂದಿಳಿದಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಭಾರತೀಯ ವಾಯುಪಡೆಯ ಸಿ–17 ವಿಮಾನವು ಜಾಮ್ನಗರದ ಐಎಎಫ್ ವಾಯು ನೆಲೆಗೆ ಬೆಳಿಗ್ಗೆ 11.15ಕ್ಕೆ ಬಂತು. ತುರ್ತು ಸ್ಥಳಾಂತರದ ಭಾಗವಾಗಿ ಕಾಬೂಲ್ನಿಂದ ಭಾರತೀಯ ಅಧಿಕಾರಿಗಳನ್ನು ವಾಪಸ್ ಕರೆತರಲಾಗಿದೆ’ ಎಂದು ಅವರು ಹೇಳಿದರು.</p>.<p>‘ವಾಯುನೆಲೆಗೆ ಸಿ–17 ವಿಮಾನ ಆಗಮಿಸುತ್ತಿದ್ದಂತೆ ಭಾರತೀಯ ಅಧಿಕಾರಿಗಳನ್ನು ಸ್ವಾಗತಿಸಲಾಯಿತು. ವಿಮಾನದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಮತ್ತು ಕೆಲ ಭಾರತೀಯ ಪ್ರಜೆಗಳು ಇದ್ದರು’ ಎಂದು ಅವರು ಮಾಹಿತಿ ನೀಡಿದರು.</p>.<p>‘ಕಾಬೂಲ್ನಿಂದ ಆಗಮಿಸಿರುವ ಭಾರತೀಯರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಈ ಬಳಿಕ ಅಧಿಕಾರಿಗಳನ್ನು ಅವರ ಮನೆಗಳಿಗೆ ತಲುಪಿಸಲಾಗುವುದು’ ಎಂದು ಗುಜರಾತ್ನ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ರಾಜ್ಯ ಸಚಿವ ಧರ್ಮೇಂದ್ರ ಸಿನ್ಹಾ ಜಡೇಜಾ ಅವರು ಹೇಳಿದರು.</p>.<p>‘ಅಫ್ಗಾನಿಸ್ತಾನದಿಂದ ಭಾರತೀಯ ಪ್ರಜೆಗಳನ್ನು ಕರೆತರುವ ಪ್ರಕ್ರಿಯೆ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾವಹಿಸಿದ್ದಾರೆ’ ಎಂದು ಗುಜರಾತ್ ಸರ್ಕಾರ ಪ್ರಕಟಣೆಯಲ್ಲಿ ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/us-president-joe-biden-warns-taliban-stands-squarely-behind-his-decision-to-withdraw-troops-from-858471.html" target="_blank"><strong>ಅಫ್ಗನ್ನಲ್ಲಿ 20 ವರ್ಷಗಳ ಸುದೀರ್ಘ ರಕ್ತಸಿಕ್ತ ಅಧ್ಯಾಯ ಅಂತ್ಯಕ್ಕೆ ಬದ್ಧ: ಬೈಡನ್</strong></a></p>.<p><strong>ಇದನ್ನೂ ಓದಿ:<a href="https://www.prajavani.net/explainer/afghanistan-taliban-kabul-united-states-of-america-washington-war-858245.html" target="_blank">ಅಫ್ಗಾನಿಸ್ತಾನದಲ್ಲಿ ಅಮೆರಿಕದ ಪಾತ್ರವೇನು? ಇಲ್ಲಿದೆ 20 ವರ್ಷಗಳ ‘ರಕ್ತ ಚರಿತ್ರೆ’</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಮ್ನಗರ(ಗುಜರಾತ್)</strong>:‘ಅಫ್ಗಾನಿಸ್ತಾನದ ಕಾಬೂಲ್ನಿಂದ 120 ಮಂದಿ ಭಾರತೀಯರನ್ನು ಹೊತ್ತ ಐಎಎಫ್ ವಿಮಾನವು ಜಾಮ್ನಗರಕ್ಕೆ ಮಂಗಳವಾರ ಬಂದಿಳಿದಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ಭಾರತೀಯ ವಾಯುಪಡೆಯ ಸಿ–17 ವಿಮಾನವು ಜಾಮ್ನಗರದ ಐಎಎಫ್ ವಾಯು ನೆಲೆಗೆ ಬೆಳಿಗ್ಗೆ 11.15ಕ್ಕೆ ಬಂತು. ತುರ್ತು ಸ್ಥಳಾಂತರದ ಭಾಗವಾಗಿ ಕಾಬೂಲ್ನಿಂದ ಭಾರತೀಯ ಅಧಿಕಾರಿಗಳನ್ನು ವಾಪಸ್ ಕರೆತರಲಾಗಿದೆ’ ಎಂದು ಅವರು ಹೇಳಿದರು.</p>.<p>‘ವಾಯುನೆಲೆಗೆ ಸಿ–17 ವಿಮಾನ ಆಗಮಿಸುತ್ತಿದ್ದಂತೆ ಭಾರತೀಯ ಅಧಿಕಾರಿಗಳನ್ನು ಸ್ವಾಗತಿಸಲಾಯಿತು. ವಿಮಾನದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಮತ್ತು ಕೆಲ ಭಾರತೀಯ ಪ್ರಜೆಗಳು ಇದ್ದರು’ ಎಂದು ಅವರು ಮಾಹಿತಿ ನೀಡಿದರು.</p>.<p>‘ಕಾಬೂಲ್ನಿಂದ ಆಗಮಿಸಿರುವ ಭಾರತೀಯರಿಗಾಗಿ ಊಟದ ವ್ಯವಸ್ಥೆ ಮಾಡಲಾಗಿದೆ. ಈ ಬಳಿಕ ಅಧಿಕಾರಿಗಳನ್ನು ಅವರ ಮನೆಗಳಿಗೆ ತಲುಪಿಸಲಾಗುವುದು’ ಎಂದು ಗುಜರಾತ್ನ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ರಾಜ್ಯ ಸಚಿವ ಧರ್ಮೇಂದ್ರ ಸಿನ್ಹಾ ಜಡೇಜಾ ಅವರು ಹೇಳಿದರು.</p>.<p>‘ಅಫ್ಗಾನಿಸ್ತಾನದಿಂದ ಭಾರತೀಯ ಪ್ರಜೆಗಳನ್ನು ಕರೆತರುವ ಪ್ರಕ್ರಿಯೆ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾವಹಿಸಿದ್ದಾರೆ’ ಎಂದು ಗುಜರಾತ್ ಸರ್ಕಾರ ಪ್ರಕಟಣೆಯಲ್ಲಿ ಹೇಳಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/world-news/us-president-joe-biden-warns-taliban-stands-squarely-behind-his-decision-to-withdraw-troops-from-858471.html" target="_blank"><strong>ಅಫ್ಗನ್ನಲ್ಲಿ 20 ವರ್ಷಗಳ ಸುದೀರ್ಘ ರಕ್ತಸಿಕ್ತ ಅಧ್ಯಾಯ ಅಂತ್ಯಕ್ಕೆ ಬದ್ಧ: ಬೈಡನ್</strong></a></p>.<p><strong>ಇದನ್ನೂ ಓದಿ:<a href="https://www.prajavani.net/explainer/afghanistan-taliban-kabul-united-states-of-america-washington-war-858245.html" target="_blank">ಅಫ್ಗಾನಿಸ್ತಾನದಲ್ಲಿ ಅಮೆರಿಕದ ಪಾತ್ರವೇನು? ಇಲ್ಲಿದೆ 20 ವರ್ಷಗಳ ‘ರಕ್ತ ಚರಿತ್ರೆ’</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>