<p><strong>ತಿನ್ಸುಕಿಯಾ (ಅಸ್ಸಾಂ):</strong> ಅಸ್ಸಾಂ-ಅರುಣಾಚಲ ಗಡಿಯಲ್ಲಿ ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಬೊಮ್ಜಿರ್ ನದಿಯಲ್ಲಿ ಸಿಲುಕಿದ್ದ 14 ಮಂದಿಯನ್ನು ಭಾರತೀಯ ವಾಯುಪಡೆ (ಐಎಎಫ್) ಇಂದು ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ತಿನ್ಸುಕಿಯಾ ಜಿಲ್ಲಾಧಿಕಾರಿ ಸ್ವಪ್ನಿಲ್ ಪಾಲ್ ಅವರ ಕೋರಿಕೆಯ ಮೇರೆಗೆ ಭಾರತೀಯ ವಾಯುಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿತು ಎಂದು ಅವರು ಹೇಳಿದ್ದಾರೆ. </p><p>ಹೆಲಿಕಾಪ್ಟರ್ ನೆರವಿನಿಂದ ನದಿಯಲ್ಲಿ ಸಿಲುಕಿದ್ದ ಎಲ್ಲ 14 ಮಂದಿಯನ್ನು ರಕ್ಷಿಸಲಾಗಿದೆ. ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ 13 ಮಂದಿ ಅರುಣಾಚಲ ಪ್ರದೇಶದ ಒಬ್ಬರನ್ನು ರಕ್ಷಿಸಲಾಗಿದೆ. ಅವರೆಲ್ಲರನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. </p><p>ಈ ಪ್ರದೇಶದಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿತ್ತು. 14 ಮಂದಿ ಸಿಲುಕಿರುವ ಸುದ್ದಿ ತಿಳಿದ ತಕ್ಷಣ ಜಿಲ್ಲಾಡಳಿತವು ಅರುಣಾಚಲ ಪ್ರದೇಶದ ಅಧಿಕಾರಿಗಳೊಂದಿಗೆ ತ್ವರಿತವಾಗಿ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿತ್ತು. </p><p>ಸಾದಿಯಾ ಕಂದಾಯ ವೃತ್ತ ಅಧಿಕಾರಿ ಜೈದೀಪ್ ರಜಾಕ್ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದರು. ಭಾರತೀಯ ವಾಯುಪಡೆಯ ನೆರವಿಗಾಗಿ ಅವರು ಧನ್ಯವಾದ ಸಲ್ಲಿಸಿದ್ದಾರೆ. </p>.Assam Floods | ಅಸ್ಸಾಂನಲ್ಲಿ ಭಾರಿ ಮಳೆ, ಪ್ರವಾಹ-ಭೂಕುಸಿತ; ಎಂಟು ಮಂದಿ ಸಾವು.ಈಶಾನ್ಯ ರಾಜ್ಯಗಳು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿವೆ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿನ್ಸುಕಿಯಾ (ಅಸ್ಸಾಂ):</strong> ಅಸ್ಸಾಂ-ಅರುಣಾಚಲ ಗಡಿಯಲ್ಲಿ ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಬೊಮ್ಜಿರ್ ನದಿಯಲ್ಲಿ ಸಿಲುಕಿದ್ದ 14 ಮಂದಿಯನ್ನು ಭಾರತೀಯ ವಾಯುಪಡೆ (ಐಎಎಫ್) ಇಂದು ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ತಿನ್ಸುಕಿಯಾ ಜಿಲ್ಲಾಧಿಕಾರಿ ಸ್ವಪ್ನಿಲ್ ಪಾಲ್ ಅವರ ಕೋರಿಕೆಯ ಮೇರೆಗೆ ಭಾರತೀಯ ವಾಯುಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿತು ಎಂದು ಅವರು ಹೇಳಿದ್ದಾರೆ. </p><p>ಹೆಲಿಕಾಪ್ಟರ್ ನೆರವಿನಿಂದ ನದಿಯಲ್ಲಿ ಸಿಲುಕಿದ್ದ ಎಲ್ಲ 14 ಮಂದಿಯನ್ನು ರಕ್ಷಿಸಲಾಗಿದೆ. ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ 13 ಮಂದಿ ಅರುಣಾಚಲ ಪ್ರದೇಶದ ಒಬ್ಬರನ್ನು ರಕ್ಷಿಸಲಾಗಿದೆ. ಅವರೆಲ್ಲರನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲಾಗಿದೆ. </p><p>ಈ ಪ್ರದೇಶದಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿತ್ತು. 14 ಮಂದಿ ಸಿಲುಕಿರುವ ಸುದ್ದಿ ತಿಳಿದ ತಕ್ಷಣ ಜಿಲ್ಲಾಡಳಿತವು ಅರುಣಾಚಲ ಪ್ರದೇಶದ ಅಧಿಕಾರಿಗಳೊಂದಿಗೆ ತ್ವರಿತವಾಗಿ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯಾಚರಣೆಯನ್ನು ಕಾರ್ಯಗತಗೊಳಿಸಿತ್ತು. </p><p>ಸಾದಿಯಾ ಕಂದಾಯ ವೃತ್ತ ಅಧಿಕಾರಿ ಜೈದೀಪ್ ರಜಾಕ್ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದರು. ಭಾರತೀಯ ವಾಯುಪಡೆಯ ನೆರವಿಗಾಗಿ ಅವರು ಧನ್ಯವಾದ ಸಲ್ಲಿಸಿದ್ದಾರೆ. </p>.Assam Floods | ಅಸ್ಸಾಂನಲ್ಲಿ ಭಾರಿ ಮಳೆ, ಪ್ರವಾಹ-ಭೂಕುಸಿತ; ಎಂಟು ಮಂದಿ ಸಾವು.ಈಶಾನ್ಯ ರಾಜ್ಯಗಳು ಅಭೂತಪೂರ್ವ ಬೆಳವಣಿಗೆಗೆ ಸಾಕ್ಷಿಯಾಗಿವೆ: ಪ್ರಧಾನಿ ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>