<p><strong>ನವದೆಹಲಿ:</strong> ದೇಶವು ಗಡಿಯಲ್ಲಿ ಅಸ್ಥಿರತೆಯೊಂದಿಗೆ ಹೋರಾಡುತ್ತಿರುವಾಗ, ಸಮಾಜದೊಳಗೆ ಹೊಸ ರೀತಿಯ ಅಪರಾಧಗಳು, ಭಯೋತ್ಪಾದನೆ ಮತ್ತು ಸೈದ್ಧಾಂತಿಕ ಯುದ್ಧಗಳು ಉಲ್ಬಣಿಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಮಂಗಳವಾರ ಎಚ್ಚರಿಸಿದರು.</p>.<p>ಆಧುನಿಕ ಆಂತರಿಕ ಅಪರಾಧಗಳು ಮತ್ತು ಬೆದರಿಕೆಗಳು ಹೆಚ್ಚು ಸಂಘಟಿತ, ಅದೃಶ್ಯವಾಗಿದ್ದು ಸಂಕೀರ್ಣ ಸ್ವರೂಪದವಾಗಿವೆ. ಅವು ಸಮಾಜದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಿ, ನಂಬಿಕೆಯನ್ನು ದುರ್ಬಲಗೊಳಿಸುವ ಹಾಗೂ ರಾಷ್ಟ್ರದ ಸ್ಥಿರತೆಗೆ ಸವಾಲೊಡ್ಡುವ ಉದ್ದೇಶವನ್ನು ಹೊಂದಿವೆ ಎಂದು ಅವರು ದೂರಿದರು.</p>.<p>ಪೊಲೀಸ್ ಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2047ರ ವೇಳೆಗೆ ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಧಿಸಲು ಬಾಹ್ಯ ಮತ್ತು ಆಂತರಿಕ ಭದ್ರತೆಯನ್ನು ಸಮತೋಲನಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಹಿಂದೆ ‘ಕೆಂಪು ಕಾರಿಡಾರ್’ ಎಂದು ಕರೆಯಲಾಗುತ್ತಿದ್ದ ಪ್ರದೇಶಗಳು ಈಗ ಪ್ರಗತಿಯ ಕಾರಿಡಾರ್ಗಳಾಗಿ ಬದಲಾಗಿವೆ ಎಂದ ರಕ್ಷಣಾ ಸಚಿವರು, ಇದು ನಕ್ಸಲ್ ಸಮಸ್ಯೆ ವಿರುದ್ಧ ಸಾಧಿಸಿದ ಗಮನಾರ್ಹ ಪ್ರಗತಿ ಎಂದು ಹೇಳಿದರು.</p>.<p>ಈ ಸಮಸ್ಯೆಯು ಉಲ್ಬಣಗೊಳ್ಳದಂತೆ ತಡೆಯುವಲ್ಲಿ ಪೊಲೀಸ್, ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸ್ಥಳೀಯ ಆಡಳಿತಗಳು ಸಂಘಟಿತ ಪ್ರಯತ್ನ ಮಾಡಿವೆ ಎಂದರು.</p>.<p>ನಕ್ಸಲ್ ಪಿಡುಗು ನಶಿಸುವ ಹಂತದಲ್ಲಿದೆ ಎಂದ ಅವರು, 2026ರ ಮಾರ್ಚ್ ವೇಳೆಗೆ ಈ ಪಿಡುಗು ಕೊನೆಗೊಳ್ಳಲಿದೆ ಎಂದು ಘೋಷಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬದ್ಧತೆಯನ್ನು ಪ್ರತಿಧ್ವನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶವು ಗಡಿಯಲ್ಲಿ ಅಸ್ಥಿರತೆಯೊಂದಿಗೆ ಹೋರಾಡುತ್ತಿರುವಾಗ, ಸಮಾಜದೊಳಗೆ ಹೊಸ ರೀತಿಯ ಅಪರಾಧಗಳು, ಭಯೋತ್ಪಾದನೆ ಮತ್ತು ಸೈದ್ಧಾಂತಿಕ ಯುದ್ಧಗಳು ಉಲ್ಬಣಿಸುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಮಂಗಳವಾರ ಎಚ್ಚರಿಸಿದರು.</p>.<p>ಆಧುನಿಕ ಆಂತರಿಕ ಅಪರಾಧಗಳು ಮತ್ತು ಬೆದರಿಕೆಗಳು ಹೆಚ್ಚು ಸಂಘಟಿತ, ಅದೃಶ್ಯವಾಗಿದ್ದು ಸಂಕೀರ್ಣ ಸ್ವರೂಪದವಾಗಿವೆ. ಅವು ಸಮಾಜದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿಸಿ, ನಂಬಿಕೆಯನ್ನು ದುರ್ಬಲಗೊಳಿಸುವ ಹಾಗೂ ರಾಷ್ಟ್ರದ ಸ್ಥಿರತೆಗೆ ಸವಾಲೊಡ್ಡುವ ಉದ್ದೇಶವನ್ನು ಹೊಂದಿವೆ ಎಂದು ಅವರು ದೂರಿದರು.</p>.<p>ಪೊಲೀಸ್ ಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2047ರ ವೇಳೆಗೆ ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಧಿಸಲು ಬಾಹ್ಯ ಮತ್ತು ಆಂತರಿಕ ಭದ್ರತೆಯನ್ನು ಸಮತೋಲನಗೊಳಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.</p>.<p>ಹಿಂದೆ ‘ಕೆಂಪು ಕಾರಿಡಾರ್’ ಎಂದು ಕರೆಯಲಾಗುತ್ತಿದ್ದ ಪ್ರದೇಶಗಳು ಈಗ ಪ್ರಗತಿಯ ಕಾರಿಡಾರ್ಗಳಾಗಿ ಬದಲಾಗಿವೆ ಎಂದ ರಕ್ಷಣಾ ಸಚಿವರು, ಇದು ನಕ್ಸಲ್ ಸಮಸ್ಯೆ ವಿರುದ್ಧ ಸಾಧಿಸಿದ ಗಮನಾರ್ಹ ಪ್ರಗತಿ ಎಂದು ಹೇಳಿದರು.</p>.<p>ಈ ಸಮಸ್ಯೆಯು ಉಲ್ಬಣಗೊಳ್ಳದಂತೆ ತಡೆಯುವಲ್ಲಿ ಪೊಲೀಸ್, ಸಿಆರ್ಪಿಎಫ್, ಬಿಎಸ್ಎಫ್ ಮತ್ತು ಸ್ಥಳೀಯ ಆಡಳಿತಗಳು ಸಂಘಟಿತ ಪ್ರಯತ್ನ ಮಾಡಿವೆ ಎಂದರು.</p>.<p>ನಕ್ಸಲ್ ಪಿಡುಗು ನಶಿಸುವ ಹಂತದಲ್ಲಿದೆ ಎಂದ ಅವರು, 2026ರ ಮಾರ್ಚ್ ವೇಳೆಗೆ ಈ ಪಿಡುಗು ಕೊನೆಗೊಳ್ಳಲಿದೆ ಎಂದು ಘೋಷಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬದ್ಧತೆಯನ್ನು ಪ್ರತಿಧ್ವನಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>