<p><strong>ನವದೆಹಲಿ/ ರಾಯಪುರ</strong>: ಛತ್ತೀಸಗಢ, ಜಾರ್ಖಂಡ್ನ ನಕ್ಸಲ್ಪೀಡಿತ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಕಚ್ಚಾಬಾಂಬ್ಗಳು (ಐಇಡಿ) ದೊಡ್ಡ ಸಂಖ್ಯೆಯಲ್ಲಿ ಪತ್ತೆಯಾದ ಬಳಿಕ ಕಟ್ಟೆಚ್ಚರ ಘೋಷಿಸಲಾಗಿದೆ. </p>.<p>ಬಿಯರ್ ಬಾಟಲ್ ಬಳಸಿ ಸಿದ್ಧಪಡಿಸಿದ ಕಚ್ಚಾಬಾಂಬ್ಗಳು ಹಾಗೂ ಸಣ್ಣ ಆ್ಯಂಟೆನಾ ಬಳಸಿ ರಿಮೋಟ್ ಕಂಟ್ರೋಲ್ನಿಂದ ಸ್ಫೋಟಿಸುವಂತಹ ವಸ್ತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>2026ರ ಮಾರ್ಚ್ ತಿಂಗಳ ಒಳಗಾಗಿ ಎಡಪಂಥೀಯ ಉಗ್ರವಾದವನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಗಡುವು ವಿಧಿಸಿದೆ. ಇದರ ಬೆನ್ನಲ್ಲೇ, ಭದ್ರತಾ ಪಡೆಗಳು ನಕ್ಸಲ್ ಪ್ರಾಬಲ್ಯ ಹೊಂದಿರುವ ಸ್ಥಳಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದು,, ವಶಕ್ಕೆ ಪಡೆದ ಐಇಡಿಗಳ ಸಂಖ್ಯೆಯಲ್ಲಿ ಏರಿಕೆಯಾಗಿತ್ತು.</p>.<p>‘ಭದ್ರತಾ ಪಡೆಗಳು ಛತ್ತೀಸಗಢದ ಬಸ್ತಾರ್ನಲ್ಲಿ ವಿಶೇಷ ಶಿಬಿರಗಳನ್ನು ಸ್ಥಾಪಿಸುತ್ತಿವೆ. ಇದರಿಂದ ನಕ್ಸಲರು– ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿ ನಡೆಯುವುದು ಕಡಿಮೆಯಾಗಿದ್ದು, ಶಸ್ತ್ರಾಸ್ತ್ರಗಳ ಸಂಗ್ರಹದ ಪ್ರಮಾಣದಲ್ಲೂ ಕುಸಿತ ಉಂಟಾಗಿದೆ. ಹೀಗಾಗಿ, ನಕ್ಸಲರು ಕಚ್ಚಾಬಾಂಬ್ಗಳ ಬಳಕೆಗೆ ಮುಂದಾಗಿದ್ದಾರೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ ರಾಯಪುರ</strong>: ಛತ್ತೀಸಗಢ, ಜಾರ್ಖಂಡ್ನ ನಕ್ಸಲ್ಪೀಡಿತ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಕಚ್ಚಾಬಾಂಬ್ಗಳು (ಐಇಡಿ) ದೊಡ್ಡ ಸಂಖ್ಯೆಯಲ್ಲಿ ಪತ್ತೆಯಾದ ಬಳಿಕ ಕಟ್ಟೆಚ್ಚರ ಘೋಷಿಸಲಾಗಿದೆ. </p>.<p>ಬಿಯರ್ ಬಾಟಲ್ ಬಳಸಿ ಸಿದ್ಧಪಡಿಸಿದ ಕಚ್ಚಾಬಾಂಬ್ಗಳು ಹಾಗೂ ಸಣ್ಣ ಆ್ಯಂಟೆನಾ ಬಳಸಿ ರಿಮೋಟ್ ಕಂಟ್ರೋಲ್ನಿಂದ ಸ್ಫೋಟಿಸುವಂತಹ ವಸ್ತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>2026ರ ಮಾರ್ಚ್ ತಿಂಗಳ ಒಳಗಾಗಿ ಎಡಪಂಥೀಯ ಉಗ್ರವಾದವನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಗಡುವು ವಿಧಿಸಿದೆ. ಇದರ ಬೆನ್ನಲ್ಲೇ, ಭದ್ರತಾ ಪಡೆಗಳು ನಕ್ಸಲ್ ಪ್ರಾಬಲ್ಯ ಹೊಂದಿರುವ ಸ್ಥಳಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ್ದು,, ವಶಕ್ಕೆ ಪಡೆದ ಐಇಡಿಗಳ ಸಂಖ್ಯೆಯಲ್ಲಿ ಏರಿಕೆಯಾಗಿತ್ತು.</p>.<p>‘ಭದ್ರತಾ ಪಡೆಗಳು ಛತ್ತೀಸಗಢದ ಬಸ್ತಾರ್ನಲ್ಲಿ ವಿಶೇಷ ಶಿಬಿರಗಳನ್ನು ಸ್ಥಾಪಿಸುತ್ತಿವೆ. ಇದರಿಂದ ನಕ್ಸಲರು– ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿ ನಡೆಯುವುದು ಕಡಿಮೆಯಾಗಿದ್ದು, ಶಸ್ತ್ರಾಸ್ತ್ರಗಳ ಸಂಗ್ರಹದ ಪ್ರಮಾಣದಲ್ಲೂ ಕುಸಿತ ಉಂಟಾಗಿದೆ. ಹೀಗಾಗಿ, ನಕ್ಸಲರು ಕಚ್ಚಾಬಾಂಬ್ಗಳ ಬಳಕೆಗೆ ಮುಂದಾಗಿದ್ದಾರೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>