<p><strong>ಲಖನೌ</strong>: ದೇಶದ ಸಂವಿಧಾನ ಬದಲಿಸಲು ಮತ್ತು ಮೀಸಲಾತಿಗೆ ಅಂತ್ಯ ಹಾಡಲು ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಘೋಷವಾಕ್ಯ ಮೊಳಗಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಚುನಾವಣಾ ಬಾಂಡ್ ವಿಚಾರವಾಗಿಯೂ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅಖಿಲೇಶ್, ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಬಳಸಿಕೊಂಡು ಭಯ ಹುಟ್ಟಿಸುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಗುಡುಗಿದರು.</p><p>ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರಲು ₹400 ಕೋಟಿ, ₹1,000 ಕೋಟಿ ಮತ್ತು ₹600 ಕೋಟಿ ಹಣವನ್ನ ಸುಲಿಗೆ ಮಾಡಲಾಗಿದೆ ಎಂದಿದ್ದಾರೆ.</p><p>‘400ಕ್ಕೂ ಅಧಿಕ ಸ್ಥಾನ ಗೆಲ್ಲುವ ಘೋಷವಾಕ್ಯವನ್ನು ಸಂವಿಧಾನ ಬದಲಿಸುವ ಉದ್ದೇಶದಿಂದ ನೀಡಲಾಗಿದೆ. ಬಿಜೆಪಿ ಗೆದ್ದರೆ ಅವರು ಸಂವಿಧಾನವನ್ನಷ್ಟೇ ಬದಲಿಸುವುದಿಲ್ಲ. ಮೀಸಲಾತಿಯನ್ನೂ ಅಂತ್ಯಗೊಳಿಸುತ್ತಾರೆ. ನಿಮ್ಮ ಮತದಾನದ ಹಕ್ಕನ್ನೂ ಕಸಿಯುತ್ತಾರೆ’ಎಂದು ಮುಜಾಫರ್ನಗರದಲ್ಲಿ ಎಸ್ಪಿ ಅಭ್ಯರ್ಥಿ ಹರೇಂದ್ರ ಮಲಿಕ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.</p><p>‘10 ವರ್ಷಗಳಲ್ಲಿ ದೇಶದಲ್ಲಿ 1 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರಿಗೂ ಯಾವುದೇ ಪರಿಹಾರ ಕೊಟ್ಟಿಲ್ಲ’ಎಂದು ಕಿಡಿಕಾರಿದರು.</p><p>ಬಿಜೆಪಿ ಸರ್ಕಾರ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂದು ಆರೋಪಿಸಿದ ಯಾದವ್, ಕೈಗಾರಿಕೋದ್ಯಮಿಗಳ ₹15 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಬಿಜೆಪಿ ಸರ್ಕಾರ, ರೈತರ ₹2 ಲಕ್ಷ ಕೋಟಿ ಸಾಲವನ್ನು ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.</p><p>ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಅಖಿಲೇಶ್ ಘೋಷಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ದೇಶದ ಸಂವಿಧಾನ ಬದಲಿಸಲು ಮತ್ತು ಮೀಸಲಾತಿಗೆ ಅಂತ್ಯ ಹಾಡಲು ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಘೋಷವಾಕ್ಯ ಮೊಳಗಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಹೇಳಿದ್ದಾರೆ.</p><p>ಚುನಾವಣಾ ಬಾಂಡ್ ವಿಚಾರವಾಗಿಯೂ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅಖಿಲೇಶ್, ಇ.ಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಗಳನ್ನು ಬಳಸಿಕೊಂಡು ಭಯ ಹುಟ್ಟಿಸುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಗುಡುಗಿದರು.</p><p>ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇರಲು ₹400 ಕೋಟಿ, ₹1,000 ಕೋಟಿ ಮತ್ತು ₹600 ಕೋಟಿ ಹಣವನ್ನ ಸುಲಿಗೆ ಮಾಡಲಾಗಿದೆ ಎಂದಿದ್ದಾರೆ.</p><p>‘400ಕ್ಕೂ ಅಧಿಕ ಸ್ಥಾನ ಗೆಲ್ಲುವ ಘೋಷವಾಕ್ಯವನ್ನು ಸಂವಿಧಾನ ಬದಲಿಸುವ ಉದ್ದೇಶದಿಂದ ನೀಡಲಾಗಿದೆ. ಬಿಜೆಪಿ ಗೆದ್ದರೆ ಅವರು ಸಂವಿಧಾನವನ್ನಷ್ಟೇ ಬದಲಿಸುವುದಿಲ್ಲ. ಮೀಸಲಾತಿಯನ್ನೂ ಅಂತ್ಯಗೊಳಿಸುತ್ತಾರೆ. ನಿಮ್ಮ ಮತದಾನದ ಹಕ್ಕನ್ನೂ ಕಸಿಯುತ್ತಾರೆ’ಎಂದು ಮುಜಾಫರ್ನಗರದಲ್ಲಿ ಎಸ್ಪಿ ಅಭ್ಯರ್ಥಿ ಹರೇಂದ್ರ ಮಲಿಕ್ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು.</p><p>‘10 ವರ್ಷಗಳಲ್ಲಿ ದೇಶದಲ್ಲಿ 1 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರಿಗೂ ಯಾವುದೇ ಪರಿಹಾರ ಕೊಟ್ಟಿಲ್ಲ’ಎಂದು ಕಿಡಿಕಾರಿದರು.</p><p>ಬಿಜೆಪಿ ಸರ್ಕಾರ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂದು ಆರೋಪಿಸಿದ ಯಾದವ್, ಕೈಗಾರಿಕೋದ್ಯಮಿಗಳ ₹15 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಬಿಜೆಪಿ ಸರ್ಕಾರ, ರೈತರ ₹2 ಲಕ್ಷ ಕೋಟಿ ಸಾಲವನ್ನು ಏಕೆ ಮನ್ನಾ ಮಾಡಲಿಲ್ಲ ಎಂದು ಪ್ರಶ್ನಿಸಿದರು.</p><p>ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಅಖಿಲೇಶ್ ಘೋಷಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>