ಇಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಅಜಯ್ ಕುಮಾರ್, ‘ಒಂದು ವೇಳೆ ಒಡಿಶಾದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹ 2 ಸಾವಿರ, ರೈತರಿಗೆ, ವಿಧವೆಯರಿಗೆ, ಅಂಕವಿಕಲರಿಗೆ ಹಾಗೂ ವೃದ್ಧರಿಗೆ ಮಾಸಿಕ ₹ 2 ಸಾವಿರ ನೀಡಲಿದೆ’ ಎಂದರು.
ಜೊತೆಗೆ ಮಾಸಿಕ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಹೇಳಿದೆ. ಇದರ ಬಾಬ್ತು ಅಂದಾಜು ₹ 2 ಸಾವಿರ ಆಗಲಿದೆ. ಭತ್ತದ ಮೇಲಿನ ಕನಿಷ್ಠ ಬೆಂಬಲ ಬೆಲೆ ₹ 3 ಸಾವಿರಕ್ಕೆ ಏರಿಕೆ ಮಾಡಲಾಗುವುದು. ₹ 500ಕ್ಕೆ ಎಲ್ಪಿಜಿ ಸಿಲಿಂಡರ್ ಸಿಗಲಿದೆ ಎಂದು ಅವರು ಹೇಳಿದರು.