<p><strong>ನವದೆಹಲಿ</strong>: ಗೃಹ ಸಚಿವರಾದ ಅಮಿತ್ ಶಾ ಅವರು ಹೇಳಿರುವಂತೆ ಮಣಿಪುರದಲ್ಲಿ ಪರಿಸ್ಥಿತಿ ಶಾಂತವಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಗೆ ಯಾಕೆ ಭೇಟಿ ನೀಡಿಲ್ಲ ಮತ್ತು ಅಲ್ಲಿನ ರಾಜಕೀಯ ನಾಯಕರ ಜೊತೆ ಮಾತನಾಡಿಲ್ಲ’ ಎಂದು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.</p>.<p>‘ಮಣಿಪುರದಲ್ಲಿ ಶಾಂತಿ ಸ್ಥಾಪನೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಮೈತೇಯಿ ಮತ್ತು ಕುಕಿ ಸಮುದಾಯದೊಂದಿಗೆ ಮಾತುಕತೆ ನಡೆಸುತ್ತಿದೆ ಮತ್ತು ವಲಸೆಯನ್ನು ನಿಯಂತ್ರಿಸಲು ಮಯನ್ಮಾರ್ ಗಡಿಯಲ್ಲಿ ಬೇಲಿ ಹಾಕಲಾಗುತ್ತಿದೆ’ ಎಂದು ಅಮಿತ್ ಶಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.</p>.<p>‘ಸ್ವಯಂಘೋಷಿತ ಚಾಣಕ್ಯ ಅಮಿತ್ ಶಾ ಹೇಳಿರುವಂತೆ ಮಣಿಪುರದಲ್ಲಿ ಪರಿಸ್ಥಿತಿ ಸಹಜವಾಗಿದ್ದರೆ, ಅಲ್ಲಿನ ಮುಖ್ಯಮಂತ್ರಿ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದ್ದರೆ. ಸ್ವಯಘೋಷಿತ ಅತಿಮಾನುಷ ವ್ಯಕ್ತಿ ಮೋದಿಯವರಿಗೆ ಮಣಿಪುರಕ್ಕೆ ಭೇಟಿ ನೀಡಲು ಸಮಯ ಯಾಕೆ ಸಿಕ್ಕಿಲ್ಲ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.</p>.<p>‘ಮಣಿಪುರ ಯಾಕೆ ಪೂರ್ಣಕಾಲಿಕ ರಾಜ್ಯಪಾಲರನ್ನು ಹೊಂದಿಲ್ಲ. ಸರ್ಕಾರದ ಮುಖ್ಯಕಾರ್ಯದರ್ಶಿಗಳು 45 ದಿನದಿಂದ ರಾಜ್ಯದಲ್ಲಿ ಯಾಕಿಲ್ಲ. ಹಲವು ಶಾಸಕರು ಮತ್ತು ಸಂಸದರು ಯಾಕೆ ಕೆಲ ದಿನಗಳಿಂದ ರಾಜ್ಯದಲ್ಲಿಲ್ಲ, ಇಂಫಾಲ್ನಲ್ಲಿರುವ ಬಿಜೆಪಿ ಕಚೇರಿ ಯಾಕೆ ಕಾರ್ಯಚರಿಸುತ್ತಿಲ್ಲ’ ಎಂದು ಪ್ರಶ್ನೆ ಮಾಡಿದರು.</p>.<p>2023ರ ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ಮೋದಿಯವರು ಒಮ್ಮೆಯೂ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಕಾಂಗ್ರೆಸ್ ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಿದೆ.</p>.<p> <strong>ಕಾಂಗ್ರೆಸ್ ಪ್ರಶ್ನೆಗಳು </strong></p><p>* ಮಣಿಪುರ ಯಾಕೆ ಪೂರ್ಣಕಾಲಿಕ ರಾಜ್ಯಪಾಲರನ್ನು ಹೊಂದಿಲ್ಲ? </p><p>*ಸರ್ಕಾರದ ಮುಖ್ಯಕಾರ್ಯದರ್ಶಿಗಳು 45 ದಿನದಿಂದ ರಾಜ್ಯದಲ್ಲಿ ಯಾಕಿಲ್ಲ? </p><p>*ಹಲವು ಶಾಸಕರು ಮತ್ತು ಸಂಸದರು ಯಾಕೆ ಕೆಲ ದಿನಗಳಿಂದ ರಾಜ್ಯದಲ್ಲಿಲ್ಲ? </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗೃಹ ಸಚಿವರಾದ ಅಮಿತ್ ಶಾ ಅವರು ಹೇಳಿರುವಂತೆ ಮಣಿಪುರದಲ್ಲಿ ಪರಿಸ್ಥಿತಿ ಶಾಂತವಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಗೆ ಯಾಕೆ ಭೇಟಿ ನೀಡಿಲ್ಲ ಮತ್ತು ಅಲ್ಲಿನ ರಾಜಕೀಯ ನಾಯಕರ ಜೊತೆ ಮಾತನಾಡಿಲ್ಲ’ ಎಂದು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.</p>.<p>‘ಮಣಿಪುರದಲ್ಲಿ ಶಾಂತಿ ಸ್ಥಾಪನೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಮೈತೇಯಿ ಮತ್ತು ಕುಕಿ ಸಮುದಾಯದೊಂದಿಗೆ ಮಾತುಕತೆ ನಡೆಸುತ್ತಿದೆ ಮತ್ತು ವಲಸೆಯನ್ನು ನಿಯಂತ್ರಿಸಲು ಮಯನ್ಮಾರ್ ಗಡಿಯಲ್ಲಿ ಬೇಲಿ ಹಾಕಲಾಗುತ್ತಿದೆ’ ಎಂದು ಅಮಿತ್ ಶಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.</p>.<p>‘ಸ್ವಯಂಘೋಷಿತ ಚಾಣಕ್ಯ ಅಮಿತ್ ಶಾ ಹೇಳಿರುವಂತೆ ಮಣಿಪುರದಲ್ಲಿ ಪರಿಸ್ಥಿತಿ ಸಹಜವಾಗಿದ್ದರೆ, ಅಲ್ಲಿನ ಮುಖ್ಯಮಂತ್ರಿ ಚೆನ್ನಾಗಿ ಕಾರ್ಯನಿರ್ವಹಿಸುತ್ತಿದ್ದರೆ. ಸ್ವಯಘೋಷಿತ ಅತಿಮಾನುಷ ವ್ಯಕ್ತಿ ಮೋದಿಯವರಿಗೆ ಮಣಿಪುರಕ್ಕೆ ಭೇಟಿ ನೀಡಲು ಸಮಯ ಯಾಕೆ ಸಿಕ್ಕಿಲ್ಲ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.</p>.<p>‘ಮಣಿಪುರ ಯಾಕೆ ಪೂರ್ಣಕಾಲಿಕ ರಾಜ್ಯಪಾಲರನ್ನು ಹೊಂದಿಲ್ಲ. ಸರ್ಕಾರದ ಮುಖ್ಯಕಾರ್ಯದರ್ಶಿಗಳು 45 ದಿನದಿಂದ ರಾಜ್ಯದಲ್ಲಿ ಯಾಕಿಲ್ಲ. ಹಲವು ಶಾಸಕರು ಮತ್ತು ಸಂಸದರು ಯಾಕೆ ಕೆಲ ದಿನಗಳಿಂದ ರಾಜ್ಯದಲ್ಲಿಲ್ಲ, ಇಂಫಾಲ್ನಲ್ಲಿರುವ ಬಿಜೆಪಿ ಕಚೇರಿ ಯಾಕೆ ಕಾರ್ಯಚರಿಸುತ್ತಿಲ್ಲ’ ಎಂದು ಪ್ರಶ್ನೆ ಮಾಡಿದರು.</p>.<p>2023ರ ಮೇ 3ರಂದು ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಬಳಿಕ ಪ್ರಧಾನಿ ಮೋದಿಯವರು ಒಮ್ಮೆಯೂ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಕಾಂಗ್ರೆಸ್ ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಿದೆ.</p>.<p> <strong>ಕಾಂಗ್ರೆಸ್ ಪ್ರಶ್ನೆಗಳು </strong></p><p>* ಮಣಿಪುರ ಯಾಕೆ ಪೂರ್ಣಕಾಲಿಕ ರಾಜ್ಯಪಾಲರನ್ನು ಹೊಂದಿಲ್ಲ? </p><p>*ಸರ್ಕಾರದ ಮುಖ್ಯಕಾರ್ಯದರ್ಶಿಗಳು 45 ದಿನದಿಂದ ರಾಜ್ಯದಲ್ಲಿ ಯಾಕಿಲ್ಲ? </p><p>*ಹಲವು ಶಾಸಕರು ಮತ್ತು ಸಂಸದರು ಯಾಕೆ ಕೆಲ ದಿನಗಳಿಂದ ರಾಜ್ಯದಲ್ಲಿಲ್ಲ? </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>