ದಲಿತರು, ಆದಿವಾಸಿಗಳು ಮತ್ತು ಒಬಿಸಿ ಸಮುದಾಯಗಳಿಗೆ ಸೇರಿದವರನ್ನು ಜೀತದಾಳುಗಳಂತೆ ನಡೆಸಿಕೊಳ್ಳಲಾಗುತ್ತಿದೆ. ಕಂಪನಿಗಳು, ಆಸ್ಪತ್ರೆಗಳು, ಶಾಲೆ–ಕಾಲೇಜುಗಳು ಮತ್ತು ನ್ಯಾಯಾಲಯಗಳಲ್ಲಿ ಈ ಸಮುದಾಯಗಳ ಭಾಗವಹಿಸುವಿಕೆ ಕಡಿಮೆ ಇದೆ ಎಂದು ರಾಹುಲ್ ಹೇಳಿದರು. ‘ಇದು ದೇಶದ ಮುಂದೆ ಇರುವ ಅತಿದೊಡ್ಡ ಪ್ರಶ್ನೆ. ನಮ್ಮ ಮೊದಲ ಹೆಜ್ಜೆ ದೇಶದಲ್ಲಿ ಜಾತಿ ಗಣತಿ ನಡೆಸುವುದು’ ಎಂದು ಅವರು ತಿಳಿಸಿದರು.