<p><strong>ಶ್ರೀನಗರ:</strong> ಮಹತ್ವದ ಬೆಳವಣಿಗೆಯಲ್ಲಿ, ಜಮ್ಮು–ಕಾಶ್ಮೀರದ ಪೊಲೀಸ್ ಇಲಾಖೆಯ ಹಲವು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.</p>.<p>ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ಚುನಾವಣೆ ಘೋಷಣೆಗೆ ಮುನ್ನ ಅಧಿಕಾರಿಗಳ ವರ್ಗಾವಣೆ ಮಾಡಿರುವುದಕ್ಕೆ ರಾಜಕೀಯ ಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ. </p>.<p>ಹಿರಿಯ ಐಪಿಎಸ್ ಅಧಿಕಾರಿ ನಳಿನ್ ಪ್ರಭಾತ್ ಅವರನ್ನು ವಿಶೇಷ ಡಿಜಿ ಆಗಿ ನೇಮಕ ಮಾಡಲಾಗಿದೆ. ಸದ್ಯ, ಆರ್.ಆರ್.ಸ್ವೇನ್ ಅವರು ಜಮ್ಮು–ಕಾಶ್ಮೀರ ಪೊಲೀಸ್ನ ಡಿಜಿ ಆಗಿದ್ದು, ಸೆ.30ರಂದು ನಿವೃತ್ತರಾಗಲಿದ್ದಾರೆ. ಬಳಿಕ, ಪ್ರಭಾತ್ ಅಧಿಕಾರ ಸ್ವೀಕರಿಸಲಿದ್ದಾರೆ.</p>.<p>ಸಿಐಡಿ ಎಡಿಜಿಪಿ ನಿತಿಶ್ ಕುಮಾರ್ ಅವರನ್ನು ಸಿಐಡಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಸ್ವೇನ್ ಅವರಿಗೆ ಸಿಐಡಿಯ ಹೆಚ್ಚುವರಿ ಹೊಣೆ ನೀಡಲಾಗಿತ್ತು.</p>.<p>ರದ್ದತಿಗೆ ಮನವಿ: ಲೆಫ್ಟಿನೆಂಟ್ ಗವರ್ನರ್ ನೇತೃತ್ವದ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ಭಾರಿ ವರ್ಗಾವಣೆ ಮಾಡಿದೆ: ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ದೂರಿದೆ.</p>.<p>ಈ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಸಗರ್ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಮಹತ್ವದ ಬೆಳವಣಿಗೆಯಲ್ಲಿ, ಜಮ್ಮು–ಕಾಶ್ಮೀರದ ಪೊಲೀಸ್ ಇಲಾಖೆಯ ಹಲವು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.</p>.<p>ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರದಲ್ಲಿ ಚುನಾವಣೆ ಘೋಷಣೆಗೆ ಮುನ್ನ ಅಧಿಕಾರಿಗಳ ವರ್ಗಾವಣೆ ಮಾಡಿರುವುದಕ್ಕೆ ರಾಜಕೀಯ ಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ. </p>.<p>ಹಿರಿಯ ಐಪಿಎಸ್ ಅಧಿಕಾರಿ ನಳಿನ್ ಪ್ರಭಾತ್ ಅವರನ್ನು ವಿಶೇಷ ಡಿಜಿ ಆಗಿ ನೇಮಕ ಮಾಡಲಾಗಿದೆ. ಸದ್ಯ, ಆರ್.ಆರ್.ಸ್ವೇನ್ ಅವರು ಜಮ್ಮು–ಕಾಶ್ಮೀರ ಪೊಲೀಸ್ನ ಡಿಜಿ ಆಗಿದ್ದು, ಸೆ.30ರಂದು ನಿವೃತ್ತರಾಗಲಿದ್ದಾರೆ. ಬಳಿಕ, ಪ್ರಭಾತ್ ಅಧಿಕಾರ ಸ್ವೀಕರಿಸಲಿದ್ದಾರೆ.</p>.<p>ಸಿಐಡಿ ಎಡಿಜಿಪಿ ನಿತಿಶ್ ಕುಮಾರ್ ಅವರನ್ನು ಸಿಐಡಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಸ್ವೇನ್ ಅವರಿಗೆ ಸಿಐಡಿಯ ಹೆಚ್ಚುವರಿ ಹೊಣೆ ನೀಡಲಾಗಿತ್ತು.</p>.<p>ರದ್ದತಿಗೆ ಮನವಿ: ಲೆಫ್ಟಿನೆಂಟ್ ಗವರ್ನರ್ ನೇತೃತ್ವದ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ದುರ್ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ಭಾರಿ ವರ್ಗಾವಣೆ ಮಾಡಿದೆ: ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ದೂರಿದೆ.</p>.<p>ಈ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಲಿ ಮೊಹಮ್ಮದ್ ಸಗರ್ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>