<p><strong>ಮುಂಬೈ:</strong> ಮಣ್ಣಿನಲ್ಲಿರುವ ವಿಷಕಾರಿ ಅಂಶಗಳನ್ನು ಹೀರಿ, ಬೆಳೆಗಳಿಗೆ ಅನುಕೂಲಕಾರಿಯಾಗಿರುವ ಪೋಷಕಾಂಶಗಳನ್ನು ಉತ್ಪಾದಿಸಬಲ್ಲ ಬ್ಯಾಕ್ಟೀರಿಯಾವನ್ನು ಐಐಟಿ ಬಾಂಬೆ ಸಂಶೋಧನಾರ್ಥಿಗಳು ಪತ್ತೆಹಚ್ಚಿದ್ದಾರೆ.</p>.<p>‘ಕೀಟನಾಶಕಗಳಲ್ಲಿ ಬಳಸಲಾಗುವ ಕೆಲವು ರಾಸಾಯನಿಕಗಳು ಮಣ್ಣಿನಲ್ಲಿ ಸೇರಿ, ಸಸ್ಯಗಳ ಬೆಳವಣಿಗೆಗೆ ಅಡ್ಡಿಯುಂಟು ಮಾಡಲಿವೆ. ಇದರಿಂದ ಇಳುವರಿ ಕಡಿಮೆಯಾಗುವುದಲ್ಲದೆ, ಈ ವಿಷಕಾರಿ ಅಂಶವು ಮಾನವನ ದೇಹವನ್ನೂ ಸೇರುವ ಅಪಾಯವಿರಲಿದೆ. ಇದೀಗ ಪತ್ತೆಹಚ್ಚಲಾಗಿರುವ ಬ್ಯಾಕ್ಟೀರಿಯಾಗಳು ಇಂತಹ ವಿಷಕಾರಕಗಳನ್ನು ವಿಘಟಿಸಿ, ಸಸ್ಯಗಳ ಬೆಳವಣಿಗೆಗೆ ಅನುಕೂಲಕಾರಿಯಾಗಿರುವ ಪೋಷಕಾಂಶಗಳನ್ನು ಉತ್ಪಾದಿಸಲಿವೆ’ ಎಂದು ಐಐಟಿ ಬಾಂಬೆಯ ಜೈವಿಕ ವಿಜ್ಞಾನ ಹಾಗೂ ಬಯೊಎಂಜಿನಿಯರಿಂಗ್ ವಿಭಾಗದ ಪ್ರೊ. ಪ್ರಶಾಂತ್ ಫಾಲೆ ತಿಳಿಸಿದ್ದಾರೆ.</p>.<p>ನೈಸರ್ಗಿಕ ಸಂಪನ್ಮೂಲಗಳ ಮಾಲಿನ್ಯವನ್ನು ನಿಯಂತ್ರಿಸಲು, ವಿಷಕಾರಿ ರಾಸಾಯನಿಕಗಳು ಹಾಗೂ ಮಾಲಿನ್ಯಕಾರಕಗಳನ್ನು ತಿನ್ನುವ ಬ್ಯಾಕ್ಟೀರಿಯಾಗಳ ಬಗ್ಗೆ ಸಂಶೋಧಕರು ಅಧ್ಯಯನ ನಡೆಸುತ್ತಿದ್ದಾರೆ ಎಂದು ಐಐಟಿ ಬಾಂಬೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಣ್ಣಿನಲ್ಲಿರುವ ವಿಷಕಾರಿ ಅಂಶಗಳನ್ನು ಹೀರಿ, ಬೆಳೆಗಳಿಗೆ ಅನುಕೂಲಕಾರಿಯಾಗಿರುವ ಪೋಷಕಾಂಶಗಳನ್ನು ಉತ್ಪಾದಿಸಬಲ್ಲ ಬ್ಯಾಕ್ಟೀರಿಯಾವನ್ನು ಐಐಟಿ ಬಾಂಬೆ ಸಂಶೋಧನಾರ್ಥಿಗಳು ಪತ್ತೆಹಚ್ಚಿದ್ದಾರೆ.</p>.<p>‘ಕೀಟನಾಶಕಗಳಲ್ಲಿ ಬಳಸಲಾಗುವ ಕೆಲವು ರಾಸಾಯನಿಕಗಳು ಮಣ್ಣಿನಲ್ಲಿ ಸೇರಿ, ಸಸ್ಯಗಳ ಬೆಳವಣಿಗೆಗೆ ಅಡ್ಡಿಯುಂಟು ಮಾಡಲಿವೆ. ಇದರಿಂದ ಇಳುವರಿ ಕಡಿಮೆಯಾಗುವುದಲ್ಲದೆ, ಈ ವಿಷಕಾರಿ ಅಂಶವು ಮಾನವನ ದೇಹವನ್ನೂ ಸೇರುವ ಅಪಾಯವಿರಲಿದೆ. ಇದೀಗ ಪತ್ತೆಹಚ್ಚಲಾಗಿರುವ ಬ್ಯಾಕ್ಟೀರಿಯಾಗಳು ಇಂತಹ ವಿಷಕಾರಕಗಳನ್ನು ವಿಘಟಿಸಿ, ಸಸ್ಯಗಳ ಬೆಳವಣಿಗೆಗೆ ಅನುಕೂಲಕಾರಿಯಾಗಿರುವ ಪೋಷಕಾಂಶಗಳನ್ನು ಉತ್ಪಾದಿಸಲಿವೆ’ ಎಂದು ಐಐಟಿ ಬಾಂಬೆಯ ಜೈವಿಕ ವಿಜ್ಞಾನ ಹಾಗೂ ಬಯೊಎಂಜಿನಿಯರಿಂಗ್ ವಿಭಾಗದ ಪ್ರೊ. ಪ್ರಶಾಂತ್ ಫಾಲೆ ತಿಳಿಸಿದ್ದಾರೆ.</p>.<p>ನೈಸರ್ಗಿಕ ಸಂಪನ್ಮೂಲಗಳ ಮಾಲಿನ್ಯವನ್ನು ನಿಯಂತ್ರಿಸಲು, ವಿಷಕಾರಿ ರಾಸಾಯನಿಕಗಳು ಹಾಗೂ ಮಾಲಿನ್ಯಕಾರಕಗಳನ್ನು ತಿನ್ನುವ ಬ್ಯಾಕ್ಟೀರಿಯಾಗಳ ಬಗ್ಗೆ ಸಂಶೋಧಕರು ಅಧ್ಯಯನ ನಡೆಸುತ್ತಿದ್ದಾರೆ ಎಂದು ಐಐಟಿ ಬಾಂಬೆ ಪ್ರಕಟಣೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>