<p><strong>ಮುಂಬೈ:</strong> ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ–ಬಾಂಬೆಯ (ಐಐಟಿ) ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ನ ಮಹಡಿಯಿಂದ ಜಿಗಿದು ಬುಧವಾರ ಆತ್ಮೆಹತ್ಯೆ ಮಾಡಿಕೊಂಡಿದ್ದಾರೆ. </p>.<p>ಮೃತ ವಿದ್ಯಾರ್ಥಿಯನ್ನು ರಾಜಸ್ಥಾನದ ಪಿಲಾನಿ ನಿವಾಸಿ ನಮನ್ ಅಗರ್ವಾಲ್ (21) ಎಂದು ಗುರುತಿಸಲಾಗಿದೆ.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ 2ನೇ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ನಮನ್, ಪೊವೈ ಕ್ಯಾಂಪಸ್ನ ಹಾಸ್ಟೆಲ್ ಸಂಖ್ಯೆ 4ರಲ್ಲಿ ಉಳಿದುಕೊಂಡಿದ್ದರು. ಅದೇ ಹಾಸ್ಟೆಲ್ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಆಕಸ್ಮಿಕ ಸಾವು (ಎಡಿಆರ್) ಎಂದು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಲಾಗಿದೆ. ಮೃತದೇಹವನ್ನು ರಾಜವಾಡಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ನಮನ್ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇತ್ತೀಚೆಗಿನ ವರ್ಷಗಳಲ್ಲಿ ಐಐಟಿ–ಬಾಂಬೆಯಲ್ಲಿ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. 2022ರ ಆಗಸ್ಟ್ 2ರಂದು ರೋಹಿತ್ ಸಿನ್ಹಾ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದರು. 2023ರ ಫೆಬ್ರುವರಿ 12ರಂದು ದರ್ಶನ್ ಸೋಲಂಕಿ ಎಂಬ ವಿದ್ಯಾರ್ಥಿ ಜಾತಿ ತಾರತಮ್ಯದ ಕಾರಣ ನೀಡಿ, ಆತ್ಮಹತ್ಯೆ ಮಾಡಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ–ಬಾಂಬೆಯ (ಐಐಟಿ) ವಿದ್ಯಾರ್ಥಿಯೊಬ್ಬರು ಹಾಸ್ಟೆಲ್ನ ಮಹಡಿಯಿಂದ ಜಿಗಿದು ಬುಧವಾರ ಆತ್ಮೆಹತ್ಯೆ ಮಾಡಿಕೊಂಡಿದ್ದಾರೆ. </p>.<p>ಮೃತ ವಿದ್ಯಾರ್ಥಿಯನ್ನು ರಾಜಸ್ಥಾನದ ಪಿಲಾನಿ ನಿವಾಸಿ ನಮನ್ ಅಗರ್ವಾಲ್ (21) ಎಂದು ಗುರುತಿಸಲಾಗಿದೆ.</p>.<p>ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ 2ನೇ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ನಮನ್, ಪೊವೈ ಕ್ಯಾಂಪಸ್ನ ಹಾಸ್ಟೆಲ್ ಸಂಖ್ಯೆ 4ರಲ್ಲಿ ಉಳಿದುಕೊಂಡಿದ್ದರು. ಅದೇ ಹಾಸ್ಟೆಲ್ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಆಕಸ್ಮಿಕ ಸಾವು (ಎಡಿಆರ್) ಎಂದು ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಲಾಗಿದೆ. ಮೃತದೇಹವನ್ನು ರಾಜವಾಡಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ನಮನ್ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಇತ್ತೀಚೆಗಿನ ವರ್ಷಗಳಲ್ಲಿ ಐಐಟಿ–ಬಾಂಬೆಯಲ್ಲಿ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. 2022ರ ಆಗಸ್ಟ್ 2ರಂದು ರೋಹಿತ್ ಸಿನ್ಹಾ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದರು. 2023ರ ಫೆಬ್ರುವರಿ 12ರಂದು ದರ್ಶನ್ ಸೋಲಂಕಿ ಎಂಬ ವಿದ್ಯಾರ್ಥಿ ಜಾತಿ ತಾರತಮ್ಯದ ಕಾರಣ ನೀಡಿ, ಆತ್ಮಹತ್ಯೆ ಮಾಡಿಕೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>