<p><strong>ಕಾನ್ಪುರ (ಉತ್ತರ ಪ್ರದೇಶ):</strong> ಪಾಕಿಸ್ತಾನ ಮೂಲದ ಕವಿ ಫೈಜ್ ಅಹ್ಮದ್ ಫೈಜ್ ಅವರ ‘ಹಮ್ ದೇಖೇಂಗೆ’ ಕವಿತೆಯನ್ನು, ವಿದ್ಯಾರ್ಥಿಗಳು ಕ್ಯಾಂಪಸ್ ಒಳಗಡೆ ವಾಚಿಸಿದ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಐಐಟಿ ಕಾನ್ಪುರದ ಉಪನಿರ್ದೇಶಕ ಮಣೀಂದ್ರ ಅಗರ್ವಾಲ್ ತಿಳಿಸಿದ್ದಾರೆ.</p>.<p>ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಬೆಂಬಲವಾಗಿ, ಡಿ.17ರಂದು ಐಐಟಿ ಕಾನ್ಪುರದ 300ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಸ್ಥೆಯ ಆವರಣದೊಳಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಈ ಕವಿತೆ ವಾಚಿಸಿದ್ದ. ಇದರ ವಿರುದ್ಧ ಪ್ರಾಧ್ಯಾಪಕ ಡಾ.ವಾಶಿಮಂತ್ ಶರ್ಮಾ, ಕೆಲ ವಿದ್ಯಾರ್ಥಿಗಳು ದೂರು ಸಲ್ಲಿಸಿದ್ದರು.</p>.<p class="Subhead"><strong>ಸುಳ್ಳು ಸುದ್ದಿ:</strong> ‘ಫೈಜ್ ಅವರ ಕವಿತೆ ಹಿಂದೂ ವಿರೋಧಿಯೇ ಎನ್ನುವುದನ್ನು ನಿರ್ಧರಿಸಲು ಐಐಟಿ ಕಾನ್ಪುರ ಸಮಿತಿ<br />ಯೊಂದನ್ನು ರಚಿಸಿದೆ ಎಂದು ಉಲ್ಲೇಖಿಸಿ ಕೆಲ ಮಾಧ್ಯಮಗಳು ವರದಿ ಮಾಡುತ್ತಿವೆ. ಇದು ಸುಳ್ಳು ಮಾಹಿತಿ’ ಎಂದು ಸಂಸ್ಥೆಯ ನಿರ್ದೇಶಕ ಅಭಯ್ ಕರಂಡಿಕರ್ ಸ್ಪಷ್ಟನೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನ್ಪುರ (ಉತ್ತರ ಪ್ರದೇಶ):</strong> ಪಾಕಿಸ್ತಾನ ಮೂಲದ ಕವಿ ಫೈಜ್ ಅಹ್ಮದ್ ಫೈಜ್ ಅವರ ‘ಹಮ್ ದೇಖೇಂಗೆ’ ಕವಿತೆಯನ್ನು, ವಿದ್ಯಾರ್ಥಿಗಳು ಕ್ಯಾಂಪಸ್ ಒಳಗಡೆ ವಾಚಿಸಿದ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಐಐಟಿ ಕಾನ್ಪುರದ ಉಪನಿರ್ದೇಶಕ ಮಣೀಂದ್ರ ಅಗರ್ವಾಲ್ ತಿಳಿಸಿದ್ದಾರೆ.</p>.<p>ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಬೆಂಬಲವಾಗಿ, ಡಿ.17ರಂದು ಐಐಟಿ ಕಾನ್ಪುರದ 300ಕ್ಕೂ ಅಧಿಕ ವಿದ್ಯಾರ್ಥಿಗಳು ಸಂಸ್ಥೆಯ ಆವರಣದೊಳಗೆ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಈ ಕವಿತೆ ವಾಚಿಸಿದ್ದ. ಇದರ ವಿರುದ್ಧ ಪ್ರಾಧ್ಯಾಪಕ ಡಾ.ವಾಶಿಮಂತ್ ಶರ್ಮಾ, ಕೆಲ ವಿದ್ಯಾರ್ಥಿಗಳು ದೂರು ಸಲ್ಲಿಸಿದ್ದರು.</p>.<p class="Subhead"><strong>ಸುಳ್ಳು ಸುದ್ದಿ:</strong> ‘ಫೈಜ್ ಅವರ ಕವಿತೆ ಹಿಂದೂ ವಿರೋಧಿಯೇ ಎನ್ನುವುದನ್ನು ನಿರ್ಧರಿಸಲು ಐಐಟಿ ಕಾನ್ಪುರ ಸಮಿತಿ<br />ಯೊಂದನ್ನು ರಚಿಸಿದೆ ಎಂದು ಉಲ್ಲೇಖಿಸಿ ಕೆಲ ಮಾಧ್ಯಮಗಳು ವರದಿ ಮಾಡುತ್ತಿವೆ. ಇದು ಸುಳ್ಳು ಮಾಹಿತಿ’ ಎಂದು ಸಂಸ್ಥೆಯ ನಿರ್ದೇಶಕ ಅಭಯ್ ಕರಂಡಿಕರ್ ಸ್ಪಷ್ಟನೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>