<p><strong>ಬೆತಿಯಾ:</strong> 'ಬಾಂಗ್ಲಾದೇಶದ ಅಕ್ರಮ ವಲಸಿಗರು ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದ್ದು, ದೇಶದ ಭದ್ರತೆಗೆ ಬೆದರಿಕೆ ಒಡ್ಡುತ್ತಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಗುರುವಾರ) ಹೇಳಿದ್ದಾರೆ. </p><p>ಆದರೆ ಬಿಹಾರ ವಿಧಾನಸಭಾ ಚುನಾವಣೆಯು ಪೂರ್ವ ರಾಜ್ಯವನ್ನು ನುಸುಳುಕೋರರಿಂದ ಮುಕ್ತಗೊಳಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. </p><p>ಪಶ್ಚಿಮ ಚಂಪಾರಣ್ ಮತ್ತು ಮೋತಿಹಾರಿ ಜಿಲ್ಲೆಗಳಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 'ಆರ್ಜೆಡಿ ಅಧಿಕಾರದಲ್ಲಿದ್ದಾಗ ಹತ್ಯೆ, ಅತ್ಯಾಚಾರ ಪ್ರಕರಣಗಳು ಸಾಮಾನ್ಯವಾಗಿತ್ತು. ಆದರೆ ಎನ್ಡಿಎ ಸರ್ಕಾರದಲ್ಲಿ ಅವುಗಳಿಗೆ ಯಾವುದೇ ಸ್ಥಾನವಿಲ್ಲ' ಎಂದಿದ್ದಾರೆ. </p><p>'ಬಿಹಾರದಲ್ಲಿ 'ಜಂಗಲ್ ರಾಜ್' ತಡೆಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಂದ ಮಾತ್ರ ಸಾಧ್ಯ. ಮತ್ತೊಂದೆಡೆ ಲಾಲೂ ಪ್ರಸಾದ್ ಹಾಗೂ ರಾಹುಲ್ ಗಾಂಧಿ ನುಸುಳುಕೋರರಿಗೆ ದಾರಿ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಬಿಹಾರವು ಇಂದಿರಾ ಗಾಂಧಿ ಅವರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿತು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿತು. ಆದರೆ ಈಗ ಆರ್ಜೆಡಿಯ ಸಹಾಯದಿಂದ ಕಾಂಗ್ರೆಸ್ ರಾಜ್ಯವನ್ನು ಆಳಲು ಯತ್ನಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ. </p>.ಬಿಹಾರದಲ್ಲಿ ಬಿಜೆಪಿಯ ಮತ ಕಳ್ಳತನ ತಡೆಯುವುದು ಯುವಜನರ ಜವಾಬ್ದಾರಿ: ರಾಹುಲ್ ಗಾಂಧಿ.ನ್ಯಾಯಯುತವಾಗಿ ಚುನಾವಣೆ ನಡೆದರೆ ಎನ್ಡಿಎ ಸರ್ಕಾರ ಪತನ ಖಚಿತ: ಪ್ರಿಯಾಂಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆತಿಯಾ:</strong> 'ಬಾಂಗ್ಲಾದೇಶದ ಅಕ್ರಮ ವಲಸಿಗರು ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದ್ದು, ದೇಶದ ಭದ್ರತೆಗೆ ಬೆದರಿಕೆ ಒಡ್ಡುತ್ತಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಗುರುವಾರ) ಹೇಳಿದ್ದಾರೆ. </p><p>ಆದರೆ ಬಿಹಾರ ವಿಧಾನಸಭಾ ಚುನಾವಣೆಯು ಪೂರ್ವ ರಾಜ್ಯವನ್ನು ನುಸುಳುಕೋರರಿಂದ ಮುಕ್ತಗೊಳಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. </p><p>ಪಶ್ಚಿಮ ಚಂಪಾರಣ್ ಮತ್ತು ಮೋತಿಹಾರಿ ಜಿಲ್ಲೆಗಳಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 'ಆರ್ಜೆಡಿ ಅಧಿಕಾರದಲ್ಲಿದ್ದಾಗ ಹತ್ಯೆ, ಅತ್ಯಾಚಾರ ಪ್ರಕರಣಗಳು ಸಾಮಾನ್ಯವಾಗಿತ್ತು. ಆದರೆ ಎನ್ಡಿಎ ಸರ್ಕಾರದಲ್ಲಿ ಅವುಗಳಿಗೆ ಯಾವುದೇ ಸ್ಥಾನವಿಲ್ಲ' ಎಂದಿದ್ದಾರೆ. </p><p>'ಬಿಹಾರದಲ್ಲಿ 'ಜಂಗಲ್ ರಾಜ್' ತಡೆಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಂದ ಮಾತ್ರ ಸಾಧ್ಯ. ಮತ್ತೊಂದೆಡೆ ಲಾಲೂ ಪ್ರಸಾದ್ ಹಾಗೂ ರಾಹುಲ್ ಗಾಂಧಿ ನುಸುಳುಕೋರರಿಗೆ ದಾರಿ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ' ಎಂದು ವಾಗ್ದಾಳಿ ನಡೆಸಿದ್ದಾರೆ. </p><p>'ಬಿಹಾರವು ಇಂದಿರಾ ಗಾಂಧಿ ಅವರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿತು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿತು. ಆದರೆ ಈಗ ಆರ್ಜೆಡಿಯ ಸಹಾಯದಿಂದ ಕಾಂಗ್ರೆಸ್ ರಾಜ್ಯವನ್ನು ಆಳಲು ಯತ್ನಿಸುತ್ತಿದೆ' ಎಂದು ಅವರು ಆರೋಪಿಸಿದ್ದಾರೆ. </p>.ಬಿಹಾರದಲ್ಲಿ ಬಿಜೆಪಿಯ ಮತ ಕಳ್ಳತನ ತಡೆಯುವುದು ಯುವಜನರ ಜವಾಬ್ದಾರಿ: ರಾಹುಲ್ ಗಾಂಧಿ.ನ್ಯಾಯಯುತವಾಗಿ ಚುನಾವಣೆ ನಡೆದರೆ ಎನ್ಡಿಎ ಸರ್ಕಾರ ಪತನ ಖಚಿತ: ಪ್ರಿಯಾಂಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>