<p><strong>ಬರೇಲಿ</strong>: ಜಿಲ್ಲೆಯ ಪಿಪರಿಯಾ ಗ್ರಾಮದ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಸೀದಿಯನ್ನು ಜಿಲ್ಲಾಡಳಿತವು ಪೊಲೀಸ್ ಭದ್ರತೆಯೊಂದಿಗೆ ಶನಿವಾರ ನೆಲಸಮಗೊಳಿಸಿದೆ.</p>.<p>ಕಂದಾಯ ದಾಖಲೆಯಲ್ಲಿ ಬಂಜರು ಸರ್ಕಾರಿ ಜಮೀನು ಎಂದು ನಮೂದಾಗಿರುವ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿತ್ತು ಎಂದು ಬರೇಲಿ ಸದರ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಪ್ರಮೋದ್ ಕುಮಾರ್ ತಿಳಿಸಿದ್ದಾರೆ.</p>.<p>18 ವರ್ಷದ ಕಾನೂನು ಹೋರಾಟದ ನಂತರ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸುವ ಮೂಲಕ 300 ಚದರ ಗಜಗಳಷ್ಟು ಸರ್ಕಾರಿ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಯಿತು. ಅತಿಕ್ರಮಣ ಮಾಡಿಕೊಂಡಿದ್ದವರಿಗೆ ದಂಡ ವಿಧಿಸಲಾಗಿದೆ ಎಂದು ಎಸ್ಡಿಎಂ ಹೇಳಿದ್ದಾರೆ.</p>.<p>‘ಮಸೀದಿ–ಎ–ಅಲಾ ಹಜರತ್ ಸುಮಾರು 50 ವರ್ಷ ಹಳೆಯದು. ಯಾವೊಂದು ಮುನ್ಸೂಚನೆ ನೀಡದೆ ಕೆಡವಲಾಗಿದೆ’ ಎಂದು ಗ್ರಾಮದ ಮೊಹಮ್ಮದ್ ಉಮರ್ ದೂರಿದ್ದಾರೆ.</p>.<p>‘ನ್ಯಾಯಾಲಯದ ಆದೇಶವನ್ನು ಸ್ವೀಕರಿಸುತ್ತಿದ್ದಂತೆ, ಒತ್ತುವರಿಯನ್ನು ತೆರವುಗೊಳಿಸುವಂತೆ ಸಂಬಂಧಿಸಿದವರಿಗೆ ನೋಟಿಸ್ ನೀಡಲಾಗಿತ್ತು. ಅವರು ಸ್ಪಂದಿಸದಿದ್ದಕ್ಕೆ ನೆಲಸಮಗೊಳಿಸಿದ್ದೇವೆ’ ಎಂದು ಪ್ರಮೋದ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರೇಲಿ</strong>: ಜಿಲ್ಲೆಯ ಪಿಪರಿಯಾ ಗ್ರಾಮದ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಸೀದಿಯನ್ನು ಜಿಲ್ಲಾಡಳಿತವು ಪೊಲೀಸ್ ಭದ್ರತೆಯೊಂದಿಗೆ ಶನಿವಾರ ನೆಲಸಮಗೊಳಿಸಿದೆ.</p>.<p>ಕಂದಾಯ ದಾಖಲೆಯಲ್ಲಿ ಬಂಜರು ಸರ್ಕಾರಿ ಜಮೀನು ಎಂದು ನಮೂದಾಗಿರುವ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿತ್ತು ಎಂದು ಬರೇಲಿ ಸದರ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಪ್ರಮೋದ್ ಕುಮಾರ್ ತಿಳಿಸಿದ್ದಾರೆ.</p>.<p>18 ವರ್ಷದ ಕಾನೂನು ಹೋರಾಟದ ನಂತರ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಬುಲ್ಡೋಜರ್ ಬಳಸಿ ಅಕ್ರಮ ಕಟ್ಟಡವನ್ನು ನೆಲಸಮಗೊಳಿಸುವ ಮೂಲಕ 300 ಚದರ ಗಜಗಳಷ್ಟು ಸರ್ಕಾರಿ ಭೂಮಿಯನ್ನು ಅತಿಕ್ರಮಣದಿಂದ ಮುಕ್ತಗೊಳಿಸಲಾಯಿತು. ಅತಿಕ್ರಮಣ ಮಾಡಿಕೊಂಡಿದ್ದವರಿಗೆ ದಂಡ ವಿಧಿಸಲಾಗಿದೆ ಎಂದು ಎಸ್ಡಿಎಂ ಹೇಳಿದ್ದಾರೆ.</p>.<p>‘ಮಸೀದಿ–ಎ–ಅಲಾ ಹಜರತ್ ಸುಮಾರು 50 ವರ್ಷ ಹಳೆಯದು. ಯಾವೊಂದು ಮುನ್ಸೂಚನೆ ನೀಡದೆ ಕೆಡವಲಾಗಿದೆ’ ಎಂದು ಗ್ರಾಮದ ಮೊಹಮ್ಮದ್ ಉಮರ್ ದೂರಿದ್ದಾರೆ.</p>.<p>‘ನ್ಯಾಯಾಲಯದ ಆದೇಶವನ್ನು ಸ್ವೀಕರಿಸುತ್ತಿದ್ದಂತೆ, ಒತ್ತುವರಿಯನ್ನು ತೆರವುಗೊಳಿಸುವಂತೆ ಸಂಬಂಧಿಸಿದವರಿಗೆ ನೋಟಿಸ್ ನೀಡಲಾಗಿತ್ತು. ಅವರು ಸ್ಪಂದಿಸದಿದ್ದಕ್ಕೆ ನೆಲಸಮಗೊಳಿಸಿದ್ದೇವೆ’ ಎಂದು ಪ್ರಮೋದ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>